Friday, May 17, 2024
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯ

ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ | ಸುಳ್ಯ SDPI ಕಚೇರಿಯಲ್ಲಿ ಮಹಜರು ; ಬಂಧಿತ ನೌಫಾಲ್, ಆಬಿದ್ ಗೆ ಆಗಸ್ಟ್ 12 ರವರೆಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು

ಸುಳ್ಯ, ಆ 09 : ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಪೊಲೀಸರು ನಿನ್ನೆ ಇಬ್ಬರನ್ನು ಬಂಧಿಸಿದ್ದು ಸುಳ್ಯ ಎಸ್ ಡಿಪಿಐ ಕಚೇರಿಗೆ ಕರೆದುಕೊಂಡು ಬಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು

ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಕಚೇರಿಗೆ ಇಂದು ಬೆಳಿಗ್ಗೆ ಕರೆದುಕೊಂಡು ಹೋಗಿ ಸುಳ್ಯ ಪೊಲೀಸರು ಮಹಜರು ಪ್ರಕ್ರಿಯೆ ನಡೆಸಿದರು. ಬೆಳಿಗ್ಗೆ 8 ಗಂಟೆ ಸುಮಾರಿಗೆ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ಪೊಲೀಸ್ ತಂಡ ಈ ಇಬ್ಬರನ್ನು ಸುಳ್ಯದ ಆಲೆಟ್ಟಿ ಕ್ರಾಸ್ ನಲ್ಲಿರುವ ಎಸ್.ಡಿ.ಪಿ.ಐ. ಕಚೇರಿಗೆ ಕರೆತಂದರು.ಸುಳ್ಯ ತಾಲೂಕಿನ ನಾವೂರು ಗ್ರಾಮದ ಮಹಮ್ಮಾಯಿ ದೇವಸ್ಥಾನದ ಬಳಿಯ ನಿವಾಸಿ ಯಾಕೂಬ್ ಎಂಬವರ ಪುತ್ರ ಅಬೀದ್(22) ಹಾಗೂ ಬೆಳ್ಳಾರೆ ಠಾಣಾ ವ್ಯಾಪ್ತಿಯ ಗೌರಿಹೊಳೆ ಬಳಿಯ ನಿವಾಸಿ ಮಹಮ್ಮದ್ ಎಂಬವರ ಪುತ್ರ ನೌಫಾಲ್(28) ಎಂಬಿಬ್ಬರನ್ನು ಪೊಲೀಸರು ಬಂಧಿಸಿದ್ದರು.ಬಂಧಿತ ಆರೋಪಿಗಳಿಬ್ಬರು ಹತ್ಯೆಯಾದ ಪ್ರವೀಣ್ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದ ಹಾಗೂ ಹತ್ಯೆಯ ಯೋಜನೆ ರೂಪಿಸುತ್ತಿದ್ದ ತಂಡದ ಭಾಗವಾಗಿದ್ದರು. ಅವರನ್ನು ಇನ್ನಷ್ಟು ತನಿಖೆಗೆ ಒಳಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್ ಎಸ್ಪಿ ಋಷಿಕೇಶ್ ಸೋನಾವಣೆಯವರು ನಿನ್ನೆ ಮಾಧ್ಯಮಗಳಿಗೆ ತಿಳಿಸಿದ್ದರು .

ಆಗಸ್ಟ್ 7ರಂದು ಬಂಧನಕ್ಕೊಳಗಾಗಿದ್ದ ಮತ್ತಿಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಪುತ್ತೂರು ಡಿವೈಎಸ್ ಪಿ ಡಾ. ಪಿ ಗಾನಾ ಕುಮಾರ್ ಅವರ ನೇತೃತ್ವದಲ್ಲಿ ಇಂದು ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಘಟನೆಗೆ ಸಂಬಂಧಿಸಿ ಆರೋಪಿಗಳಾದ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್ ಮತ್ತು ಸುಳ್ಯ ನಾವೂರು ನಿವಾಸಿ ಆಬಿದ್ ಎಂಬವರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. ರವಿವಾರದಂದು ಬಂಧಿಸಲಾಗಿರುವ ಆರೋಪಿಗಳನ್ನು ಸೋಮವಾರದಂದು ಸುಳ್ಯ ಮತ್ತು ಬೆಳ್ಳಾರೆಯ ಎಸ್ ಡಿ ಪಿ ಐ ಕಚೇರಿಗೆ ಹಾಗೂ ಸುಳ್ಯ ಮತ್ತು ಬೆಳ್ಳಾರೆಯ ಕೆಲವು ಕಡೆಗಳಲ್ಲಿ ಮಹಜರು ನಡೆಸಿ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕಿರಿಯ ಸಿವಿಲ್ ನ್ಯಾಯಾಧೀಶೆ ಕು. ಅರ್ಪಿತಾರವರು ಆರೋಪಿಗಳಿಗೆ ಇಂದಿನಿಂದ ಆಗಸ್ಟ್ 12 ರವರೆಗೆ ನಾಲ್ಕು ದಿನಗಳ ನ್ಯಾಯಾಂಗ ಬಂಧನ ಆದೇಶ ನೀಡಿರುವುದಾಗಿ ತಿಳಿದು ಬಂದಿದೆ.