
ಉಡುಪಿ : ಮನೆಯ ಹಿಂಬಾಗಿಲು ಒಡೆದು ಚಿನ್ನಾಭರಣ ಮತ್ತು ನಗದನ್ನು ಕಳವು ಮಾಡಿದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

ಕುಂಬಾಸಿ ವಿನಾಯಕ ನಗರ ನಿವಾಸಿ ಸುಭಾಷ್ ಚಂದ್ರ ಆಚಾರ್ಯ (40) ಬಂಧಿತ ಆರೋಪಿ. ಇವರು ಮೂಲತಃ ಮರವಂತೆಯ ವ್ಯಕ್ತಿ.
ಬಂಧಿತನಿಂದ 8 ಗ್ರಾಂ ಚಿನ್ನದ ಬ್ರಾಸ್ಲೈಟ್, 12 ಗ್ರಾಂ ಚೈನ್ ಸರ, ಚಿನ್ನದ ಉಂಗುರ, 1600ರೂ ನಗದನ್ನು ವಶಪಡಿಸಿಕೊಂಡಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ಎಸ್ ಟಿ ಸಿದ್ದಲಿಂಗಪ್ಪ ,ಹಾಗೂ ಕುಂದಾಪುರದ ಡಿವೈಎಸ್ಪಿ ಶ್ರೀಕಾಂತ್ ಮತ್ತು ಇತರ ಅಧಿಕಾರಿಗಳು ಇವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ
















