Tuesday, May 21, 2024
ಕೊಡಗುಬೆಂಗಳೂರುಮಡಿಕೇರಿರಾಜಕೀಯರಾಜ್ಯಸುದ್ದಿ

” ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ – ನಾಲ್ಕು ದಿನ ನಿಷೇಧಾಜ್ಞೆ ಹಿನ್ನೆಲೆ, ಮಡಿಕೇರಿ ಚಲೋ ಪ್ರತಿಭಟನಾ ರ್‍ಯಾಲಿಯನ್ನು ಮುಂದೂಡುತ್ತೇವೆ ” ವಿಪಕ್ಷ ನಾಯಕ ಸಿದ್ದರಾಮಯ್ಯ ತುರ್ತು ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು

ಬೆಂಗಳೂರು : ನಾವು ಪಾದಯಾತ್ರೆ ನಡೆಸುತ್ತಿರುವುದು ಕೊಡವರ ವಿರುದ್ಧ ಅಲ್ಲ ಎಂಬ ಸ್ಪಷ್ಟೀಕರಣದೊಂದಿಗೆ ಮಡಿಕೇರಿ ಚಲೋ ಕಾರ್ಯಕ್ರಮವನ್ನು ಮುಂದೂಡಿರುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು

ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ವಿಷಯ ತಿಳಿಸಿದ ಅವರು ಮಡಿಕೇರಿ ಚಲೋ ಮುಂದೂಡಿರುವುದಾಗಿ ಹೇಳಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ನಾಲ್ಕು ದಿನ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನಾವು ಕಾಂಗ್ರೆಸ್ ನಾಯಕರೆಲ್ಲಾ ಸೇರಿ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಇನ್ನು ಜಿಲ್ಲಾಧಿಕಾರಿ ಆದೇಶ ಎಂದರೆ ಅದು ಸರ್ಕಾರದ ಆದೇಶ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ನಾವು ಸರ್ಕಾರದ ಆದೇಶವನ್ನು ಪರಿಪಾಲಿಸುತ್ತೇವೆ. ಕೊಡಗು ಜಿಲ್ಲೆಯಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಯನ್ನು ಮುಂದೂಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ.

ಅವರು ಬರಲಿ ಕೊಡಗಿಗೆ ಎಂದು ಬೋಪಯ್ಯ ನನಗೇ ಅವಾಜ್ , ಸವಾಲು ಹಾಕುತ್ತಾರೆ. ನಾವು ಸ್ವತಂತ್ರ ಭಾರತದಲ್ಲಿ ಇದ್ದೇವಾ ? ಬರಬೇಡ ಎಂದು ಹೇಳುವುದಕ್ಕೆ ಅವರು ಯಾರು ? ಎಂದು ಪ್ರಶ್ನೆ ಮಾಡಿದ್ದಾರೆ.

ನಾವು ಕೊಡಗಿಗೆ ಬರುತ್ತೇವೆ ಎಂದು ಘೋಷಣೆ ಮಾಡಿದ ಬಳಿಕ ಜಾಗೃತಿ ಸಮಾವೇಶ ನಡೆಸುತ್ತೇವೆ ಎಂದು ಹೇಳಿದ್ದಾರೆ. ಗೊಂದಲ ಸೃಷ್ಟಿ ಮಾಡುವುದೇ ಅವರ ಉದ್ದೇಶವಾಗಿದೆ ಎಂದು ಆರೋಪಿಸಿದರು.

ನಾನು ಕೊಡಗಿಗೆ ಹೋದಾಗ ಐದು ಬಾರಿ ಪ್ರತಿಭಟನೆ ನಡೆದಿದೆ. ಒಂದು ಕಡೆ ಬಟ್ಟೆಯಲ್ಲಿ ಕಲ್ಲು ಕಟ್ಟಿಕೊಂಡು ದಾಳಿಯಾಗಿದೆ. ಈ ಬಗ್ಗೆ ನಾನು ಸ್ಥಳೀಯ ಎಸ್ಪಿಯವರನ್ನು ಕರೆದು ತರಾಟೆಗೆ ತೆಗೆದುಕೊಂಡಿದ್ದೇನೆ. ಇದೊಂದು ಸರಕಾರಿ ಪ್ರಾಯೋಜಿತ ಪ್ರತಿಭಟನೆಯಾಗಿತ್ತು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.