
ಗುಂಡು ಹಾರಿಸಿಕೊಂಡು ಗ್ರಾಮ ಪಂಚಾಯತ್ ಸದಸ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ನಡೆದಿದೆ. ನಿಲೆಬೆಟ್ಟು ಗುತ್ತು ಮನೆ ಭಾಸ್ಕರ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡ ಪಂಚಾಯತ್ ಸದಸ್ಯ. ದುರ್ಗಾ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಭಾಸ್ಕರ್ ಹೆಗ್ಡೆ ಅವರು ಸಾವಯವ ಕೃಷಿಕರಾಗಿಯೂ ಹೆಸರು ಮಾಡಿದ್ದರು. ಆರ್ಥಿಕ ಅಡಚಣೆ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಪೆÇಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.














