
ಪುತ್ತೂರು : ಎಳೆಯರ ಪ್ರತಿಭೆಯ ಪತ್ರಿಕೆಯಾದ ಮಕ್ಕಳ ಜಗಲಿ ಯವರು ಆಯೋಜಿಸಿದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜು ವಿಭಾಗದ ರಾಜ್ಯಮಟ್ಟದ ಕವನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದÀ ಸುಶ್ಮಿತಾ ಬಿ. ಆರ್ ಮಕ್ಕಳ ಜಗಲಿಯ ಮೆಚ್ಚುಗೆ ಬಹುಮಾನವನ್ನು ಪಡೆದಿರುತ್ತಾರೆ. ಈಕೆ ಶಿವಮೊಗ್ಗದ ಹೊಸನಗರದ ರಾಘವೇಂದ್ರ ಬಿ ಪಿ ಮತ್ತು ಶ್ಯಾಮಲ ಭಟ್ ದಂಪತಿ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.













