
ಲಂಚ ಸ್ವೀಕರಿಸುತ್ತುದ್ದ ವೇಳೆ ಸರ್ಕಾರಿ ನೌಕರನೋರ್ವ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಪೆರ್ಣಂಕಿನ ಗ್ರಾ ಲೆಕ್ಕಾಧಿಕಾರಿ ಹರೀಶ್ ಎನ್ಪಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಸರ್ಕಾರಿ ನೌಕರ. ಜಮೀನನ್ನು ಸಕ್ರಮ ಮಾಡಿಕೊಡುವುದಕ್ಕಾಗಿ 10 ಸಾವಿರ ರೂ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸ್ ಟಾಣೆಗೆ ದೂರು ನಿಡಲಗಿತ್ತು. ದೂರುದಾರ 10 ಸಾವಿರ ರೂ ನೀಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ, ಲಂಚದ ಹಣವನ್ನು ವಶಪಡಿಸಿಕೊಂಡಿದ್ದಾರೆ.














