
ಕೇಂದ್ರ, ರಾಜ್ಯದ ವಿವಿಧ ಯೋಜನೆಗಳ ಫಲಾನುಭವಿಗಳನ್ನು ಸಂಘಟಿಸಿ ಮಾರ್ಚ್ 16, 2023 ರಂದು ಮಂಗಳೂರಿನಲ್ಲಿ ದ.ಕ.ಜಿಲ್ಲಾ ಮಟ್ಟದ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 7-03-2023ರಂದು ಮಂಗಳೂರು ತಾ.ಪಂ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆ ಜರುಗಿತು. ಈ ವೇಳೆ ವೇದಿಕೆಯಲ್ಲಿ ಸಹಾಯಕ ಆಯುಕ್ತರು, ಆಡಳಿತಾಧಿಕಾರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರು, ತಹಶೀಲ್ದಾರರು ಮತ್ತು ಕಾರ್ಯ ನಿರ್ವಾಹಕ ಅಧಿಕಾರಿ ಮಂಗಳೂರು ತಾ.ಪಂ ಇವರು ಉಪಸ್ಥಿತರಿದ್ದರು.















