Saturday, March 7, 2026
ಸುದ್ದಿ

Breaking News : ಗೋಕರ್ಣ ಮಹಾಬಲೇಶ್ವರ ದೇವಾಲಯದ ಆಡಳಿತವನ್ನು ಶ್ರೀರಾಮಚಂದ್ರಾಪುರಮಠವೇ ಮುಂದುವರಿಸಲಿ ; ಸುಪ್ರೀಂ ಕೋರ್ಟಿನಿಂದ ಮಹತ್ವ ಆದೇಶ – ಕಹಳೆ ನ್ಯೂಸ್

ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರಕ್ಕೆ ವಹಿಸುವ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ಕಳೆದ ಆಗಸ್ಟ್ 10 ರಂದು ತೀರ್ಪು ನೀಡಿತ್ತು ಹಾಗೂ ಅದೇ ದಿನ ಮಧ್ಯಂತರ ಆದೇಶವನ್ನು ನೀಡಿ ; ತೀರ್ಪಿನಲ್ಲಿ ಉಲ್ಲೇಖಿಸಿರುವ ಡಿಸಿ ನೇತೃತ್ವದ ಸಮಿತಿ ಸೆಪ್ಟೆಂಬರ್ 10 ನಂತರ ಕಾರ್ಯ ನಿರ್ವಹಿಸಲಿದೆ, ಸೆಪ್ಟೆಂಬರ್ 10 ವರೆಗೆ ಮಠವೇ ಆಡಳಿತವನ್ನು ಸಡೆಸಲಿದೆ ಎಂದು ಮಧ್ಯಂತರ ಆದೇಶದಲ್ಲಿ ಹೇಳಿತ್ತು.

ಇಂದು ಈ ಪ್ರಕರಣದ ಕುರಿತಾಗಿ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆದಿದ್ದು, ಶ್ರೀಮಠದ ಅರ್ಜಿಯನ್ನು ಮಾನ್ಯ ಮಾಡಿದ ಘನ ನ್ಯಾಯಾಲಯ ರಾಜ್ಯ ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಮುಂದುವರಿಸುವಂತೆ ಸೂಚಿಸಿದೆ.
ಅಂದರೆ ಸೆಪ್ಟೆಂಬರ್ 10 ರ ನಂತರ ಡಿಸಿ ನೇತೃತ್ವದ ಸಮಿತಿ ಅಧಿಕಾರ ವಹಿಸಿಕೊಳ್ಳುವುದಕ್ಕೆ ತಡೆಸಿಕ್ಕಿದ್ದು, ಸುಪ್ರೀಂ ಕೋರ್ಟಿನಲ್ಲಿ ತೀರ್ಮಾನ ಆಗುವವರೆಗೂ ದೇವಾಲಯದ ಆಡಳಿತವನ್ನು ಶ್ರೀಮಠವೇ ನಿರ್ವಹಿಸಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿದ ಸುಪ್ರೀಂ ಕೋರ್ಟ್, ವಿಚಾರಣೆಯನ್ನು ಮುಂದೂಡಿದೆ

ಜಾಹೀರಾತು
ಜಾಹೀರಾತು