Tuesday, September 8, 2026
ಸುದ್ದಿ

 ಪಾಲಿಂಜೆಯಲ್ಲಿ ಜನಪರ ಯೋಜನೆಗಳ ಮಾಹಿತಿ ಕಾರ್ಯಕ್ರದಲ್ಲಿ ಆಶೋಕ್ ರೈ.

ಪುತ್ತೂರು : ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಇದರ ವತಿಯಿಂದ ನಡೆಸಲ್ಪಡುವ ವಿವಿಧ ಜನಪರ ಯೋಜನೆಗಳ ಮಾಹಿತಿ ಕಾರ್ಯಕ್ರಮವು ಕುರಿಯ ಪಾಲಿಂಜೆ ವಿಷ್ಣುಮೂರ್ತಿ ದೇವಸ್ಥಾನದ ವಠಾರದಲ್ಲಿ ನಡೆಯಿತು.ಜನಪರ ಯೋಜನೆಗಳ ಮಾಹಿತಿಯನ್ನು ಟ್ರಸ್ಟ್ ನ ಪ್ರವರ್ತಕರೂ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ನೀಡಿದರು.ವೇದಿಕೆಯಲ್ಲಿ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಮ ರೈ ನುಳಿಯಾಲು,ಪಾಣಾಜೆ ಸಿ.ಏ ಬ್ಯಾಂಕ್ ನಿರ್ದೇಶಕ ರವೀಂದ್ರ ಭಂಡಾರಿ ಭೈಂಕ್ರೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶನೀಶ್ವರ ಪೂಜಾ ಸಮಿತಿಯ ಕಾರ್ಯದರ್ಶಿ ಶ್ರೀ ಪ್ರಕಾಶ ಮಣಿಯಾಣಿ ನೈತಾಡಿ ಸ್ವಾಗತಿಸಿ,ಶ್ರೀ ಹೊನ್ನಪ್ಪ ನಾಯ್ಕ ಅಮ್ಮುಂಜ ವಂದಿಸಿದರು.ಇದೇ ಸಂದರ್ಭದಲ್ಲಿ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರನ್ನು ಶ್ರೀ ಕ್ಷೇತ್ರದ ಪರವಾಗಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು