Sunday, April 26, 2026
ಸುದ್ದಿ

ಹರೀಶ್ ಪೂಂಜ ನಾಮಪತ್ರ ಸಲ್ಲಿಸಿ ಹಿಂತಿರುಗುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರ ವಾಹನಕ್ಕೆ ಕಾಂಗ್ರೆಸ್ ಪುಂಡರಿಂದ ಕಲ್ಲು ತೂರಾಟ-ಕಹಳೆ ನ್ಯೂಸ್

ಬೆಳ್ತಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಅವರು ನಾಮಪತ್ರ ಸಲ್ಲಿಸಿ ತೆರಳುತ್ತಿದ್ದಾಗ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಸಲು ಆಗಮಿಸುತ್ತಿದ್ದರು.‌ ಉಭಯ ತಂಡದಲ್ಲಿಯೂ ಸಾವಿರಾರು ಕಾರ್ಯಕರ್ತರು ಇದ್ದರು.

ಈ ವೇಳೆ ಕಾಂಗ್ರೆಸ್ ಪುಂಡನೊಬ್ಬ ಬಿಜೆಪಿ ಕಾರ್ಯಕರ್ತನ ಕಾರಿಗೆ ಬಾಟಲ್ ಮತ್ತು ಕಲ್ಲು ಎಸೆದಿದ್ದು ಇದರ ಪರಿಣಾಮ ಕಾರಿನ ಗ್ಲಾಸ್ ಪುದಿಪುಡಿಯಾಗಿದೆ. ಸ್ಥಳದಲ್ಲಿ ಉಧ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿ ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು