Friday, April 24, 2026
ಉಡುಪಿರಾಜಕೀಯರಾಜ್ಯಸುದ್ದಿ

ಎ.19ಕ್ಕೆ ಹಿಂದೂ ಫೈಯರ್ ಸಚಿವ ಸುನೀಲ್‌ ಕುಮಾರ್ ನಾಮಪತ್ರ ಸಲ್ಲಿಕೆ ; ಸಾವಿರಾರು ಕಾರ್ಯಕರ್ತರ ಬೃಹತ್ ಮೆರವಣಿಗೆ – ಕಹಳೆ ನ್ಯೂಸ್

ಕಾರ್ಕಳ, ಎ.17: ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಎ.19ರ ಬುಧವಾರ ಬೆಳಗ್ಗೆ 10 ಗಂಟೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪರವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಲಿದ್ದಾರೆ.

ಈ ಪ್ರಯುಕ್ತ ಸ್ವರಾಜ್ ಮೈದಾನದಿಂದ ಕಾರ್ಕಳ ಬಸ್ಸು ನಿಲ್ದಾಣ- ಬಂಡೀಮಠ ಮಾರ್ಗವಾಗಿ ರ್ಯಾಲಿ ಮುಖಾಂತರ ಸಾಗಿ ಬಂದು ತಾಲೂಕು ಕಚೇರಿಯಲ್ಲಿ ಚುನಾವಣಾಧಿಕಾರಿಯವರಿಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಕುಕ್ಕುಂದೂರು ಗ್ರಾಮ ಪಂಚಾಯತ್ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ ಎಂದು ಸುನೀಲ್ ಕುಮಾರ್ ಅವರ ಪ್ರಕಟಣೆ ತಿಳಿಸಿದೆ