

ವಿಧಾನಸಭಾ ಚುನಾವಣೆ ಸಮೀಪಿಸ್ತಾ ಇದ್ದು, ಮತ ಪ್ರಚಾರ ಕಾರ್ಯಗಳು ಭರದಿಂದ ಸಾಗ್ತಾ ಇದೆ. ಕಾರ್ಕಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ನಿನ್ನೆ ಹೆಬ್ರಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದಾರೆ.
ಕಾರ್ಯಕರ್ತರನ್ನುದ್ದೇಶಿ ಮಾತಾನಾಡಿದ ಇವರು ಬಿಜೆಪಿಯ ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ಕಾರ್ಕಳದಲ್ಲಿ ಬಿಜೆಪಿ ಗೆಲುವಿಗಾಗಿ ಹಳ್ಳಿಹಳ್ಳಿಗಳಲ್ಲಿ, ಗ್ರಾಮ ಗ್ರಾಮಗಳಲ್ಲಿ ಮತ ಪ್ರಚಾರ ಮಾಡಬೇಕು. ಈ ಕಾರ್ಯದಲ್ಲಿ ಗ್ರಾಮ ಪಂಚಾಯತ್ ಹಾಗೂ ಎಲ್ಲಾ ಬೂತ್ ಸದಸ್ಯರು, ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದ್ರು.
ಸಭೆಯಲ್ಲಿ ಸ್ಥಳೀಯ ಬಿಜೆಪಿ ನಾಯಕರು, ಬಿಜೆಪಿಯ ಪ್ರಮುಖ ಕಾರ್ಯಕರ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು
















