
ಬೆಂಗಳೂರು: ಸೋಮವಾರ ರಾತ್ರಿ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಸಾರ್ವಜನಿಕರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ರಾತ್ರಿ 10 ಗಂಟೆಯ ವೇಳೆಗೆ ಗುಡುಗು ಮಿಂಚಿನ ಅಬ್ಬರದಿಂದ ಆರಂಭವಾದ ಮಳೆ ನಿರಂತರವಾಗಿ ಸುರಿದಿದೆ. ಮೈಸೂರು ರಸ್ತೆ , ನಾಯಂಡಹಳ್ಳಿಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕಾರೊಂದು ಕೊಚ್ಚಿ ಹೋದ ಬಗ್ಗೆ ವರದಿಯಾಗಿದೆ.
ಮಲ್ಲೇಶ್ವರಂ, ಮತ್ತಿಕೆರೆ,ಬನ್ನೇರುಘಟ್ಟ ರಸ್ತೆಯ ಮೆಗಾ ಸಿಟಿ ಪ್ರದೇಶದಲ್ಲಿ ಹಲವು ಅವಾಂತರಗಳನ್ನು ಸೃಷ್ಟಿಸಿದೆ.
ಇಂದೂ ಮಳೆ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದ್ದು ನಗರದ ಜನತೆಯಲ್ಲಿ ಆತಂಕ ಮನೆ ಮಾಡಿದೆ.














