Thursday, May 14, 2026
ಸುದ್ದಿ

ಬಹಿರಂಗ ಪ್ರಚಾರಕ್ಕೆ ತೆರೆ ; ಇನ್ನೂ ಮುಂದೆ ಸೈಲೆಂಟ್ ಮತಾಯಾಚನೆ –ಕಹಳೆ ನ್ಯೂಸ್

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣಾ ಬಹಿರಂಗ ಪ್ರಚಾರ ಇಂದು ಸಂಜೆ ಅಂತ್ಯವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಬಹಿರಂಗ ಪ್ರಚಾರದ ಅವಧಿ ಮುಗಿಯುತ್ತಿದ್ದಂತೆ ಮತದಾನಕ್ಕೆ ಉಳಿದ ಸಮಯವನ್ನು ಶೂನ್ಯ ಅವಧಿ ಎಂದು ಚುನಾವಣಾ ಆಯೋಗವು ಪರಿಗಣಿಸುತ್ತದೆ. ಈ ಅವಧಿಯಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಬಹುದಾಗಿದೆ.
ಮತದಾನ ಮೇ 10 ರಂದು ನಡೆಯಲಿದ್ದು, ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಮತದಾನಕ್ಕಿಂತ 48 ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳ್ಳಬೇಕೆoಬ ನಿಯಮವಿದೆ.

ಈ ನಿಯಮಾನುಸಾರ ಇಂದು ಸಂಜೆ 6 ಗಂಟೆಯಿoದ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಸಮಾವೇಶ, ರೋಡ್ ಶೋ, ಉತ್ಸವ, ರ‍್ಯಾಲಿ ಮತ್ತು ಧ್ವನಿ ವರ್ಧಕಗಳ ಬಳಕೆಗೆ ನಿರ್ಬಂಧ ಹೇರಲಾಗಿದೆ.