Wednesday, March 18, 2026
ಸುದ್ದಿ

ಪುಣಚದಲ್ಲಿ ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಹಿಂದೂ ಕಾರ್ಯಕರ್ತರಿಂದ ಪ್ರತಿಭಟನೆ – ಕಹಳೆ ನ್ಯೂಸ್

ವಿಟ್ಲ : ಪುಣಚ ಗ್ರಾಮ ಪಂಚಾಯತ್ ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿ ಅಬ್ದುಲ್ಲ ಮಾದುಮೂಲೆ ಎಂಬಾತ ಅಕ್ರಮವಾಗಿ ಕಟ್ಟಡ ಕಟ್ಟಿ ಅದರಲ್ಲಿ ಗೋ ಫಾರ್ಮ್ (ಭವಿಷ್ಯದ ಕಸಾಯಿಖಾನೆ) ಮಾಡಲು ಪ್ರಯತ್ನಿಸಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು

ಇದನ್ನ ವಿರೋಧಿಸಿ ಪುಣಚ ಪಂಚಾಯತ್ ನ ಮುಂಭಾಗದಲ್ಲಿ ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಈ ಅಕ್ರಮ ಕಟ್ಟಡವನ್ನು ಸಕ್ರಮಗೊಳಿಸಲು ಪರವಾನಿಗೆ ನೀಡಲು ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬರ ಹುನ್ನಾರವಿದೆ. ಈ ಅಕ್ರಮ ಕಟ್ಟಡವನ್ನು ತೆರವುಗೊಳಿಸಲು ಅವಕಾಶವಿದ್ದರೂ ಕೂಡ ಯಾವುದೇ ಕ್ರಮವನ್ನು ಪಂಚಾಯತ್ ಕೈಗೊಳ್ಳಲಿಲ್ಲ, ಈ ಹಿನ್ನಲೆ ಅಕ್ರಮ ಕಸಾಯಿಖಾನೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಜೊತೆಗೆ ಅಕ್ರಮವಾಗಿ ಕಟ್ಟಿರುವ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರತಿಭಟನೆಯಲ್ಲಿ ನೂರಾರು ಹಿಂದೂ ಕಾರ್ಯಕರ್ತರು ಹಾಗು ಪ್ರಮುಖರು ಭಾಗಿಯಾಗಿದ್ದರು.