Wednesday, June 10, 2026
ಸುದ್ದಿ

ಮಂಗಳೂರಿನ ವಿವಿ ಕಾಲೇಜಿನ ನಿವೃತ್ತ ಇಂಗ್ಲೀಷ್ ಉಪನ್ಯಾಸಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ನಿಧನ-ಕಹಳೆ ನ್ಯೂಸ್

ಮಂಗಳೂರು : ವಿವಿ ಕಾಲೇಜಿನ ನಿವೃತ್ತ ಉಪನ್ಯಾಸಕ ಹಾಗೂ ಲೇಖಕ, ಖ್ಯಾತ ಚಿಂತಕ ಪ್ರೊ. ಹೆಚ್.ಪಟ್ಟಾಭಿರಾಮ ಸೋಮಯಾಜಿ ಅವರು ನಿಧನರಾಗಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಇಂಗ್ಲಿಷ್ ಪ್ರಾಧ್ಯಾಪಕ ಎಚ್ ಪಟ್ಟಾಭಿರಾಮ ಸೋಮಯಾಜಿ ಅವರು ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸುಮಾರು ಎರಡು ದಶಕಗಳ ಕಾಲ ಸೇವೆ ಸಲ್ಲಿಸಿ, ಒಂದು ವರ್ಷದ ಹಿಂದೆ ನಿವೃತ್ತಿ ಜೀವನ ಸ್ವೀಕರಿಸಿದ್ರು.
ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದ್ದು,

ವಿದ್ಯಾರ್ಥಿಗಳ ಜೊತೆ ಸರಳತೆ, ಸಜ್ಜನಿಕೆಯಿಂದ ಮಾತಾನಾಡುತ್ತಾ, ಭೋಧನೆ ಮಾಡುತ್ತಿದ್ದ ಇವರು ಎಲ್ಲಾ ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿದ್ರು. ಇದೀಗ ಇವರ ನಿಧನ ಅಘಾತಕಾರಿ ವಿಷಯವಾಗಿದೆ.