
ಮಂಗಳೂರಿನಲ್ಲಿ ವರುಣನ ಆರ್ಭಟಕ್ಕೆ ಪಿಲಾರು ಬಳಿಯ ನಿವಾಸಿ ಸುರೇಶ್ ಗಟ್ಟಿ ಮೃತಪಟ್ಟಿದ್ದಾರೆ.

ಮಂಗಳೂರು ಹೊರವಲಯದ ಪಿಲಾರು ಎಂಬಲ್ಲಿ ಸುರೇಶ್ ತನ್ನ ಮನೆ ಸಮೀಪದ ಕಾಲು ಸಂಕ ದಾಟುವ ವೇಳೆ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದು, ಇವರು ಪೈಂಟಿಂಗ್ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.















