
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನಲೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ ಜಲಾವೃತಗೊಂಡಿದೆ. ಮಂಗಳೂರು ನಗರ ಹೊರವಲಯದ ಮುಲ್ಕಿಯಲ್ಲಿರುವ ಬಪ್ಪನಾಡು ದೇವಸ್ಥಾನದ ಆವರಣ, ಪ್ರಾಂಗಣದಲ್ಲಿ ಹಾಗೂ ದೇವಸ್ಥಾನದ ಪುಷ್ಕರಣಿಯಲ್ಲಿ ಮಳೆ ನೀರು ತುಂಬಿದ್ದು, ದೇವಾಲಯ ಹೊಳೆಯಂತಾಗಿದೆ. ಇನ್ನೂ ದೇವಸ್ಥಾನಕ್ಕೆ ಹೋಗುವ ರಸ್ತೆಯೂ ಜಲಾವೃತಗೊಂಡಿದೆ.















