Friday, June 26, 2026
ಸುದ್ದಿ

ಪಣಪಿಲದಲ್ಲಿ ಗಿಡ ನೆಡುವ ಕಾರ್ಯಕ್ರಮ – ಕಹಳೆ ನ್ಯೂಸ್

ಮೂಡುಬಿದಿರೆ : ದರೆಗುಡ್ಡೆ ಗ್ರಾ.ಪಂಚಾಯತ್‌ನ ಆಶ್ರಯದಲ್ಲಿ ಶ್ರೀ ಇಟಲ ಗೆಳೆಯರ ಬಳಗ ಪಣಪಿಲ ಹಾಗೂ ಕೋಟಿ ಚೆನ್ನಯ ಯುವಶಕ್ತಿ ಅಳಿಯೂರು ಇವುಗಳ ಸಹಭಾಗಿತ್ವದಲ್ಲಿ ಪಣಪಿಲದ ಭಂಡಾರಕಾಪು ಮತ್ತು ಕಲ್ಲೇರಿ ಶ್ರೀ ಕುಕ್ಕಿನಂತ್ತಾಯ ದೈವಸ್ಥಾನದ ಆವರಣದಲ್ಲಿ ಸೋಮವಾರ ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ದರೆಗುಡ್ಡೆ ಗ್ರಾ.ಪಂಚಾಯತ್ ಅಧ್ಯಕ್ಷೆ ತುಳಸಿ ಮೂಲ್ಯ, ಉಪಾಧ್ಯಕ್ಷ ಅಶೋಕ್ ಶೆಟ್ಟಿ, ಸದಸ್ಯರಾದ ಮುನಿರಾಜ್ ಹೆಗ್ಡೆ, ಸಂತೋಷ್ ಪೂಜಾರಿ, ಸುಭಾಷ್ ಚೌಟ, ಜನಿತಾ, ದೀಕ್ಷಿತ್ ಪಣಪಿಲ, ಯುವ ಮೋರ್ಚಾದ ಅಧ್ಯಕ್ಷ ಅಶ್ವಥ್ ಪಣಪಿಲ, ಕೋಟಿ-ಚೆನ್ನಯ ಘಟಕದ ಅಧ್ಯಕ್ಷ ಅರುಣ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಮೇಶ್ ರಾಥೋಡ್ ಹಾಗೂ ಗ್ರಾಮಸ್ಥರು ಈ ಸಂದರ್ಭದಲ್ಲಿದ್ದರು.