Thursday, March 19, 2026
ದಕ್ಷಿಣ ಕನ್ನಡರಾಜ್ಯ

ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು : ಕರಾವಳಿಯ ಜನತೆಗೆ ಎಚ್ಚರಿಕೆಯಿಂದ ಇರವಂತೆ ಸೂಚಿಸಿದ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ರಾಜ್ಯದೆಲ್ಲೆಡೆ ಕಾಣಿಸಿಕೊಂಡಿರುವ ಮದ್ರಾಸ್ ಐ ಸೋಂಕು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಏರಿಕೆಯಾಗಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದ ಇರವಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಿಶೋರ್ ಕುಮಾರ್ ಸೂಚನೆ ನೀಡಿದ್ದಾರೆ.

ಮದ್ರಾಸ್ ಐ ಎಂಬುದು ವೈರಸ್ ಮೂಲಕ ಹರಡುತ್ತದೆ. ಸೋಂಕು ತಗುಲಿದವರ ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗಿ ಕಣ್ಣಿನಲ್ಲಿ ಕಿರಿಕಿರಿ ಅನುಭವವಾಗುತ್ತದೆ. ಜತೆಗೆ ನೀರು ಸೋರುತ್ತಿರುತ್ತದೆ. ಕಣ್ಣಿನಲ್ಲಿ ಸೋಂಕಿನ ಪ್ರಮಾಣ ಹೆಚ್ಚಾದರೆ ವ್ಯಕ್ತಿಯ ಕುತ್ತಿಗೆಯಲ್ಲಿ ಹಾಗೂ ತಲೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ಮೇಲಿನ ಲಕ್ಷಣಗಳು ಕಂಡುಬಂದರೆ ಸೂಕ್ತ ಚಿಕಿತ್ಸೆಯನ್ನು ಪಡೆಯಬೇಕೆಂದು ಸಲಹೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಾದ್ಯಂತ ಜುಲೈ 25 ರಿಂದ ಆಗಸ್ಟ್ 4ರ ವರೆಗೆ 40,477 ಪ್ರಕರಣಗಳು ಪತ್ತೆಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 504 ಮದ್ರಾಸ್ ಐ ಪ್ರಕರಣಗಳು ವರದಿಯಾಗಿದೆ. ಕಲಬುರ್ಗಿ ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಪ್ರಾಥಮಿಕ ಹಂತದಲ್ಲೇ ಈ ರೋಗವನ್ನು ಪತ್ತೆ ಹಚ್ಚಿ ಜಾಗೃತರಾಗಿರಬೇಕು ಎಂದರು.

ಜಾಹೀರಾತು
ಜಾಹೀರಾತು

ಸೋಂಕಿನಿಂದ ಬಳಲುತ್ತಿರುವವರು ಶುದ್ಧ ಕರವಸ್ತ್ರವನ್ನು ಬಳಸಿ ಕಣ್ಣೀರನ್ನು ಸ್ವಚ್ಛಗೊಳಿಸುತ್ತಿರಬೇಕು. ಆ ಕರವಸ್ತ್ರವನ್ನು ಬೇರೆಯವರು ಮುಟ್ಟದಂತೆ ನೋಡಿಕೊಳ್ಳಬೇಕು. ಇನ್ನೂ ಕಣ್ಣಿನಲ್ಲಿ ಕಿರಿಕಿರಿ ಉಂಟಾದಾಗ ಉಜ್ಜುವುದನ್ನು ಮಾಡಿದರೆ ಮತ್ತಷ್ಟು ಕಣ್ಣು ಊದಿಕೊಳ್ಳುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮದ್ರಾಸ್ ಐ ಸೋಂಕಿನಿಂದ ಬಳಲುತ್ತಿರುವವರು ಸಾರ್ವಜನಿಕ ಸ್ಥಳಗಳಿಂದ ದೂರ ಉಳಿದು, ಮನೆಯಲ್ಲಿಯೇ ಎರಡು ದಿನ ಇರಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡರೆ ಎರಡು ದಿನ ಶಾಲೆಗೆ ಕಳುಹಿಸದಿರುವುದು ಉತ್ತಮ. ಈ ಸೋಂಕಿಗೆ ಚಿಕಿತ್ಸೆಯು ಎಲ್ಲ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀಡಲಾಗುತ್ತಿದೆ. ಈ ಸಂಬಂಧ ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವಂತೆ ಡಿಡಿಪಿಐಗೆ ತಿಳಿಸಲಾಗಿದೆ ಎಂದು ಮಾಹಿತಿ ನೀಡಿದರು