Tuesday, March 17, 2026
ಕ್ರೈಮ್ರಾಜಕೀಯರಾಜ್ಯಸುದ್ದಿ

ಪೊಲೀಸ್ ಜೀಪ್ ಇಳಿಯುತ್ತಲೇ ಸ್ಪೋಟಕ ಹೇಳಿಕೆ ನೀಡಿದ ಚೈತ್ರಾ! ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ – ಕಹಳೆ ನ್ಯೂಸ್

ಬೆಂಗಳೂರು: ಉದ್ಯಮಿ ಗೋವಿಂದ ಬಾಬು ಪೂಜಾರಿ (Govinda Babu Poojari) ಎಂಬವರಿಗೆ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರೋ ಸಾಮಾಜಿಕ ಹೋರಾಟಗಾರ್ತಿ, ಚೈತ್ರಾ ಕುಂದಾಪುರ (Chaitra Kundapura) ಮೊದಲ ಪ್ರತಿಕ್ರಿಯೆ ನೀಡಿದ್ದು, ಹೊಸ ಸಂಚಲನ ಸೃಷ್ಟಿಸಿದೆ.
ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟೀನ್ ಬಿಲ್ ಪೆಡ್ಡಿಂಗ್ ಇರೋ ಕಾರಣ ಈ ಷಡ್ಯಂತ್ರ ರಚನೆಯಾಗಿದೆ. ಎ1 ಆರೋಪಿ ನಾನೇ ಆಗಿರಬಹುದು. ಸ್ವಾಮೀಜಿ ಸಿಕ್ಕ ನಂತರವೇ ಎಲ್ಲವೂ ಗೊತ್ತಾಗಲಿದೆ ಎಂದು ಹೇಳುತ್ತಿದ್ದ ಚೈತ್ರಾಳನ್ನು ಪೊಲೀಸರು ಕಚೇರಿ ಒಳಗೆ ಕರೆದುಕೊಂಡು ಹೋದರು.

ಬಳ್ಳಾರಿ ಜಿಲ್ಲೆಯ ಹಡಗಲಿಯ ಹಾಲಶ್ರೀ ಸ್ವಾಮೀಜಿಗೆ ಪ್ರಧಾನಿ ಕಚೇರಿಯ ಸಂಪರ್ಕವಿದೆ ಎಂದು ಗೋವಿಂದ ಬಾಬು ಪೂಜಾರಿ ಅವರಿಂದ ಒಂದೂವರೆ ಕೋಟಿ ಹಣ ಹಾಕಿಸಲಾಗಿದೆ. ಗೋವಿಂದ ಪೂಜಾರಿ ಜೊತೆಯಲ್ಲಿ ಚೈತ್ರಾ ಸಹ ಹಡಗಲಿಗೆ ತೆರಳಿ ಸ್ವಾಮೀಜಿಯನ್ನು ಭೇಟಿಯಾಗಿರುವ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

10 ದಿನ ಸಿಸಿಬಿ ಕಸ್ಟಡಿಗೆ

ಜಾಹೀರಾತು
ಜಾಹೀರಾತು

ಚೈತ್ರಾ ಕುಂದಾಪುರ ಸೇರಿ 6 ಆರೋಪಿಗಳನ್ನು ಸೆಪ್ಟೆಂಬರ್‌ 23ವರೆಗೆ ಸಿಸಿಬಿ ಕಸ್ಟಡಿಗೆ (CCB Custody) ನೀಡಲಾಗಿದೆ. ನಿನ್ನೆ 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಗಳನ್ನು ಸಿಸಿಬಿ ಅಧಿಕಾರಿಗಳು ಹಾಜರು ಪಡಿಸಿದರು.

ವಿಚಾರಣೆ ನಡೆಸಿದ ನ್ಯಾಯಾಧೀಶರು, 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿ ಆದೇಶಿಸಿದರು. ಇಂದು ಬೆಳಗ್ಗೆ 10 ಗಂಟೆಗೆ ಎಲ್ಲಾ ಆರೋಪಿಗಳನ್ನ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮಾಡಲಾಗುತ್ತದೆ. ಎಸಿಪಿ ರೀನಾ ಸುವರ್ಣ ನೇತೃತ್ವದಲ್ಲಿ ಚೈತ್ರಾ ಕುಂದಾಪುರ ಆಂಡ್ ಗ್ಯಾಂಗ್ ವಿಚಾರಣೆ ನಡೆಯಲಿದೆ.

ನಕಲಿ ಕೇಂದ್ರ ನಾಯಕರ ಸೃಷ್ಟಿ

ಇನ್ನು ಚೈತ್ರಾ ಕುಂದಾಪುರ ಮೋಸ ಮಾಡುವ ಉದ್ದೇಶದಿಂದಲೇ ಮೂವರನ್ನು ಕೇಂದ್ರ ನಾಯಕರು ಎಂದು ಸೃಷ್ಟಿಸಿ ಉದ್ಯಮಿಯಿಂದ ಹಣ ಪೀಕಿರುವ ಬಗ್ಗೆ ದೂರಿನಲ್ಲಿ ಉಲ್ಲೇಖವಾಗಿದೆ.

ಸಿನಿಮೀಯ ರೀತಿಯಲ್ಲಿ ವಶಕ್ಕೆ

ಮೋಸಕ್ಕೆ ಒಳಗಾದ ಉದ್ಯಮಿ ಸೆಪ್ಟೆಂಬರ್ 8ರಂದು ಚೈತ್ರಾ ಕುಂದಾಪುರ ವಿರುದ್ಧ ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ಸಿಸಿಬಿಗೆ ವರ್ಗಾವಣೆ ಆಗಿತ್ತು.

ಉಡುಪಿಯ ಕೃಷ್ಣ ಮಠದ ಪಾರ್ಕಿಂಗ್​ನಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭ್ಯವಾಗಿದೆ.