Wednesday, September 9, 2026
ಸುದ್ದಿ

ಮಂಗಳೂರಿನ ವಿಮಾನ ನಿಲ್ದಾಣ ಅ.31ರಿಂದ ಅದಾನಿ ಸುಪರ್ದಿಗೆ – ಕಹಳೆ ನ್ಯೂಸ್

ಮಂಗಳೂರಿನ ವಿಮಾನ ನಿಲ್ದಾಣದ ಪೂರ್ಣ ಆಡಳಿತವು ಅ.31ರ ಅನಂತರ ಅದಾನಿ ಸಮೂಹದ ಪಾಲಾಗಲಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

2020ರ ಅ.31ರಂದು ಮಂಗಳೂರು ಸೇರಿದಂತೆ ದೇಶದ 6 ವಿಮಾನ ನಿಲ್ದಾಣಗಳ ಆಡಳಿತವನ್ನು ಅದಾನಿ ಸಂಸ್ಥೆ ತನ್ನ ವಶಕ್ಕೆ ಪಡೆದುಕೊಂಡಿತ್ತು. ಆಗಿನ ಒಪ್ಪಂದ ಪ್ರಕಾರ ಮೂರು ವರ್ಷಗಳವರೆಗೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅರ್ಧದಷ್ಟು ಸಿಬ್ಬಂದಿ ಹಾಗೂ ಅದಾನಿ ಸಿಬಂದಿ ಜತೆಯಾಗಿಯೇ ಕೆಲಸ ಮಾಡಬೇಕಿತ್ತು.

ಈ ಒಪ್ಪಂದದ ಅವಧಿ ಅ.30ಕ್ಕೆ ಮುಕ್ತಾಯಗೊಳ್ಳುತ್ತಿದೆ. ಆ ವಿಮಾನ ನಿಲ್ದಾಣದ ಪೂರ್ಣ ಆಡಳಿತ ಅದಾನಿ ಪಾಲಾಗಲಿದೆ.
ಈ ಕಾರಣದಿಂದ ವಿಮಾನ ನಿಲ್ದಾಣದ ಹಣಕಾಸು, ಎಚ್‌ಆರ್, ಆಡಳಿತ, ವಾಣಿಜ್ಯ, ಅಗ್ನಿಶಾಮಕ, ಟರ್ಮಿನಲ್ ವಿಭಾಗ ಅ.31ರ ಬಳಿಕ ಅದಾನಿ ಆಡಳಿತಕ್ಕೆ ಒಳಪಡಲಿದೆ. ಮುಂದೆ, ಏರ್‌ಟ್ರಾಫಿಕ್ ಕಂಟ್ರೋಲ್ (ಎಟಿಸಿ), ಕಾರ್ಗೊ ಹಾಗೂ ಸಿಎನ್‌ಎಸ್(ಕಮ್ಯುನಿಕೇಶನ್ ನೇವಿಗೇಶನ್ ಆ್ಯಂಡ್ ಸರ್ವೆಲೆನ್ಸ್) ಮಾತ್ರ ಎಎಐ ನಿರ್ವಹಿಸಲಿದೆ.

ಕಳೆದ ಮೂರು ವರ್ಷಗಳ ಅಂತರದಲ್ಲಿ ಏರ್‌ಪೋರ್ಟ್ನಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆಗಮನ ಹಾಲ್ ರಚಿಸಲಾಗಿದೆ. ಹಿಂದಿನ ಹಾಲ್ ಅನ್ನು ವಿಶಾಲವಾಗಿ ದೇಶೀಯ ಯಾನಿಗಳಿಗೆ ಮೀಸಲಿರಿಸಲಾಗಿದೆ ತಿಳಿದು ಬಂದಿದೆ.