ಪುತ್ತೂರು : ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ಮತ್ತು ರೇಂಜರ್ಸ್, ಯೂತ್ ರೆಡ್ ಕ್ರಾಸ್ ಘಟಕ ಹಾಗೂ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಶಾಮುಕ್ತ ಭಾರತ ಅಭಿಯಾನದ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಪುತ್ತೂರು ಸಬ್-ಡಿವಿಷನ್ನ ಡಿವೈಎಸ್ಪಿ ಪ್ರಮೋದ್ ಕುಮಾರ್ ಮಾತನಾಡಿ, ಭಾರತದಲ್ಲಿ ಸ್ವಾತಂತ್ರ್ಯಪೂರ್ವದಲ್ಲಿ ಬಡತನ ಕಾಡುತ್ತಿತ್ತು. ಈಗ ಎಲ್ಲಾ
ಕ್ಷೇತ್ರಗಳಲ್ಲೂ ಭಾರತ ಮುಂದಿದೆ. ಆದರೆ ಇಂದು ಮಾದಕ ವ್ಯಸನವು ಸಮಾಜದ ಏಳಿಗೆಗೆ ಮಾರಕವಾಗುತ್ತಿದೆ. ಯುವಜನತೆ ಡ್ರಗ್ಸ್ ಸೇವನೆಗೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ.
ಇದು ಪ್ರತಿಯೊಬ್ಬರ ವೈಯಕ್ತಿಕ ಮತ್ತು ಸಾಮಾಜಿಕ ಜೀವನಕ್ಕೆ ಹಾನಿ ಉಂಟುಮಾಡುತ್ತಿದೆ. ಕ್ಷಣಿಕ ಸಮಯದ ಸುಖಕ್ಕಾಗಿ ಯುವಜನತೆ ಮಾದಕ ವ್ಯಸನಕ್ಕೆ ಒಳಗಾಗಬಾರದು ಎಂದು
ಹೇಳಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕೆಡೆಟ್ ಕಾಪ್ರ್ಸ್, ರಾಷ್ಟ್ರೀಯ ಸೇವಾ ಯೋಜನೆ, ರೋವರ್ ಮತ್ತು ರೇಂಜರ್, ಯೂತ್ ರೆಡ್ ಕ್ರಾಸ್ ಹಾಗೂ ವಿದ್ಯಾರ್ಥಿ ಸಂಘದ ವಿದ್ಯಾರ್ಥಿಗಳು ಮತ್ತು ಅಧಿಕಾರಿಗಳು ವಿವೇಕಾನಂದ ಪದವಿ ಕಾಲೇಜಿನ ಆವರಣದಿಂದ ನೆಹರು ನಗರದ ವರೆಗೆ ಮಾದಕ ವ್ಯಸನದ ಕುರಿತು ಜಾಗೃತಿ ಜಾಥಾ ನಡೆಸಿದರು. ಕಾರ್ಯಕ್ರಮದಲ್ಲಿ ವಿವೇಕಾನಂದ ರಾಷ್ಟ್ರೀಯ ಸ್ಟೂಡೆಂಟ್ ಕಾಪ್ರ್ಸ್ ನ ಅಧಿಕಾರಿ ಲೆ. ಭಾಮಿ ಅತುಲ್ ಶೆಣೈ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿ ವಿದ್ಯಾ ಕೆ. ಎನ್., ಯೂತ್ ರೆಡ್ ಕ್ರಾಸ್ನ ಸಂಯೋಜಕ ಸುಹಾಸ್ ಕೃಷ್ಣ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕಿ ಚೈತನ್ಯ ನಿರ್ವಹಿಸಿದರು.
You Might Also Like
ಲಾಡ್ಜ್ನಲ್ಲಿ ಹೆಂಡತಿ ಕೊಂದು ಪರಾರಿಯಾಗಿದ್ದ ಗಂಡ ಆತ್ಮಹತ್ಯೆ – ಕಹಳೆ ನ್ಯೂಸ್
ಚಿಕ್ಕಬಳ್ಳಾಪುರ: ಲಾಡ್ಜ್ನಲ್ಲಿ ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದುಗೆರೆ ಗ್ರಾಮದಲ್ಲಿ ನಡೆದಿದೆ. ದೊಡ್ಡಬಳ್ಳಾಪುರದಲ್ಲಿ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದ ಆನಂದ್, ಗೌರಿಬಿದನೂರು...
ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಕಾಲೇಜಿಗೆ ವಿ.ವಿ ಮಟ್ಟದ ಚೆಸ್ ಪ್ರಶಸ್ತಿ – ಕಹಳೆ ನ್ಯೂಸ್
ಪುತ್ತೂರು : ಸೆ.11, 12ರಂದು ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿ, ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯ...
ಮಂಗಳೂರಿನ ಬಂದರಿಗೆ ಬೆಳಗಿನ ಜಾವ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಿಎಂ ಡಿ ಕೆ ಶಿವಕುಮಾರ್ – ಕಹಳೆ ನ್ಯೂಸ್
ಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳೂರಿನ ಬಂದರಿಗೆ ಶನಿವಾರ ಬೆಳಗಿನ ಜಾವ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೀನುಗಾರು ಹಾಗೂ ವ್ಯಾಪಾರಿಗಳೊಂದಿಗೆ ಮಾತುಕತೆ ನಡೆಸಿದರು....
ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘ( ನಿ.) 2025 – 26 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆ – ಕಹಳೆ ನ್ಯೂಸ್
ಕಲ್ಲಡ್ಕ :. ಬಂಟ್ವಾಳ ತಾಲೂಕು ವೀರಕಂಭ ಹಾಲು ಉತ್ಪಾದಕರ ಸಹಕಾರ ಸಂಘ( ನಿ.) 2025=26 ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆಪ್ಟಂಬರ್ 18 ಶುಕ್ರವಾರ ವೀರಕಂಭ...











