Wednesday, March 11, 2026

ಅಂಕಣ

ಅಂಕಣಕ್ರೈಮ್ಸುದ್ದಿ

ಕೊಪ್ಪಳ |ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ; 35 ಟನ್ ರೇಷನ್ ಸಾಗಿಸ್ತಿದ್ದ ಲಾರಿ ವಶಕ್ಕೆ-ಕಹಳೆ ನ್ಯೂಸ್

ಕೊಪ್ಪಳ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಅನ್ನಭಾಗ್ಯ  ಯೋಜನೆ ಭ್ರಷ್ಟರ ಪಾಲಾಗುತ್ತಿದೆ ಎಂದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಬಡವರ ಹೊಟ್ಟೆ ಸೇರಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕಳ್ಳರು ಅಕ್ರಮವಾಗಿ ಕದ್ದು ಮಾರಾಟ ಮಾಡಲು ಮುಂದಾದ ಲಾರಿಯನ್ನು ಕೊಪ್ಪಳದ ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ 16 ರಂದು ಬೆಳಗಿನ ಜಾವ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಬಳಿ ಪೊಲೀಸರು ಲಾರಿಯನ್ನು ತಡೆಯುತ್ತಿದ್ದಂತೆ ಚಾಲಕ ಲಾರಿಯನ್ನ ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಸದ್ಯ...
ಅಂಕಣಕ್ರೈಮ್ಮಂಜೇಶ್ವರಸುದ್ದಿ

ಚಿನ್ನಯ್ಯನ ಜೊತೆ ಮಾತನಾಡಿದ್ದ ಪಾರ್ಟ್-2 ವಿಡಿಯೋ ರಿಲೀಸ್ ; ಆರೋಪದಿಂದ ಪಾರಾಗಲು ಬುರುಡೆ ಗ್ಯಾಂಗ್‌ ಪ್ಲ್ಯಾನ್‌?-ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಆರಂಭದಿಂದಲೂ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಶುಕ್ರವಾರ (ಸೆ.19) ಮಹೇಶ್‌ಶೆಟ್ಟಿ ತಿಮರೋಡಿ ಆರೋಪಿ ಚಿನ್ನಯ್ಯನ ಜೊತೆ ಮಾತನಾಡಿದ್ದ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದರು. ಇದೀಗ ಅದರ ಮುಂದುವರಿದ ಭಾಗ ಬಹಿರಂಗಗೊಂಡಿದೆ. 2 ವರ್ಷಗಳ ಹಿಂದೆ 2023ರ ಆಗಸ್ಟ್‌ನಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಚಿನ್ನಯ್ಯ ಭೇಟಿಯಾಗಿದ್ದ ವಿಡಿಯೋ ಇದ್ದಾಗಿದ್ದು, ಶುಕ್ರವಾರ ರಿಲೀಸ್ ಮಾಡಿದ್ದ ವಿಡಿಯೋದ ಮುಂದುವರಿದ ಭಾಗವಿದು. ವಿಡಿಯೋದಲ್ಲಿ ಆರೋಪಿ ಚಿನ್ನಯ್ಯ ಸ್ಟಾಟ್...
ಅಂಕಣಅಂತಾರಾಷ್ಟ್ರೀಯಸುದ್ದಿ

ಭಾರತೀಯ ಉದ್ಯೋಗಿಗಳಿಗೆ ಶಾಕ್‌; H-1B ವೀಸಾ ಶುಲ್ಕದಲ್ಲಿ ಭಾರಿ ಏರಿಕೆ ಮಾಡಿದ ಟ್ರಂಪ್‌-ಕಹಳೆ ನ್ಯೂಸ್

ವಾಷಿಂಗ್ಟನ್: ಹೆಚ್‌-1ಬಿ ವೀಸಾಗಳ (H-1B Visa) ಮೇಲಿನ ವಾರ್ಷಿಕ ಶುಲ್ಕವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌  ಅವರು 1 ಲಕ್ಷ ಡಾಲರ್‌ಗೆ ಏರಿಕೆ ಮಾಡಿದ್ದಾರೆ. ಈ ನಿಯಮವು ಭಾರತೀಯ ಉದ್ಯೋಗಿಗಳ ಮೇಲೆ ಪರಿಣಾಮ ಬೀರಲಿದೆ. ವಿದೇಶಿ ಕೆಲಸಗಾರರಿಗೆ ವಾರ್ಷಿಕ 1,00,000 ಡಾಲರ್ ವೀಸಾ ಶುಲ್ಕವನ್ನು ವಿಧಿಸುವ ಘೋಷಣೆಗೆ ಟ್ರಂಪ್‌ ಸಹಿ ಹಾಕಿದ್ದಾರೆ. ಶ್ರೀಮಂತ ವ್ಯಕ್ತಿಗಳಿಗೆ US ಪೌರತ್ವವನ್ನು ಪಡೆಯುವ ಮಾರ್ಗವಾಗಿ 1 ಮಿಲಿಯನ್ ಡಾಲರ್‌ ‘ಗೋಲ್ಡ್ ಕಾರ್ಡ್’ ವೀಸಾವನ್ನು ಜಾರಿಗೆ...
ಅಂಕಣಸುದ್ದಿ

ಪ್ರಧಾನಿ ಮೋದಿಯಿಂದ ; ಭಾರತದ ಅತಿದೊಡ್ಡ ಕ್ರೂಸ್‌ ಟರ್ಮಿನಲ್‌ ಉದ್ಘಾಟನೆ ಇಂದು-ಕಹಳೆ ನ್ಯೂಸ್

ಗಾಂಧೀನಗರ: ಭಾರತದ ಅತಿದೊಡ್ಡ ಕ್ರೂಸ್ ಟರ್ಮಿನಲ್ ಅನ್ನು ಪ್ರಧಾನಿ ಮೋದಿ  ಅವರು ಶನಿವಾರ ಉದ್ಘಾಟಿಸಲಿದ್ದಾರೆ. ಭಾವನಗರದ ಜವಾಹರ್ ಮೈದಾನದಲ್ಲಿ ನಡೆಯಲಿರುವ ಉನ್ನತ ಮಟ್ಟದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್‌ಗೆ ಆಗಮಿಸಲಿದ್ದು, ಬಹು ವಲಯಗಳಲ್ಲಿ ಹಲವಾರು ಪರಿವರ್ತನಾ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಪ್ರಧಾನಮಂತ್ರಿಗಳು ‘ಸಮುದ್ರದಿಂದ ಸಮೃದ್ಧಿ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 34,200 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೋದಿ 7,870...
ಅಂಕಣಬೆಂಗಳೂರುಸುದ್ದಿ

ಜಾತಿಗಣತಿ ಮುಂದೂಡಲ್ಲ, ಮುಂದೂಡಲ್ಲ ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ-ಕಹಳೆ ನ್ಯೂಸ್

ಬೆಂಗಳೂರು: ಜಾತಿಗಣತಿ  ಮುಂದೂಡಲ್ಲ, ಮುಂದೂಡಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು ಬಾರಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ  ಪ್ರತಿಕ್ರಿಯಿಸಿದ ಅವರು, ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಸಂವಿಧಾನಿಕ ಸಂಸ್ಥೆ. ಎಲ್ಲರ ಅಭಿಪ್ರಾಯ ಪಡೆದು ಅವರು ತೀರ್ಮಾನ ಮಾಡಿದ್ದಾರೆ. ಜಾತಿಗಣತಿ ಮುಂದೂಡಲ್ಲ ಎಂದು ತಿಳಿಸಿದ್ದಾರೆ. ಕ್ಯಾಬಿನೆಟ್‌ನಲ್ಲಿ ಸಚಿವರ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ನೀವು ಕೂಡ ರಾಜಕೀಯವಾಗಿ ಎದುರಿಸಬೇಕು. ಅದನ್ನ ಖಂಡಿಸಬೇಕು ಎಂದು ಸಚಿವರಿಗೆ ಹೇಳಿದ್ದೇನೆ ಎಂದಿದ್ದಾರೆ. ಗುರುವಾರ...
ಅಂಕಣಸುದ್ದಿ

ಕಳ್ಳತನ ಮಾಡೋರಿಗೆ ಅದ್ರ ಬಗ್ಗೆ ಗೊತ್ತಿರುತ್ತೆ, ರಾಹುಲ್ ಗಾಂಧಿ ತಪಾಸಣೆ ಮಾಡಿದ್ರೆ ಎಲ್ಲ ತಿಳಿಯುತ್ತೆ ; ಶೋಭಾ ಕರಂದ್ಲಾಜೆ-ಕಹಳೆ ನ್ಯೂಸ್

ಬೀದರ್: ಕಳ್ಳತನ ಮಾಡುವವರಿಗೆ ಅದರ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್ ಗಾಂಧಿ ಅವರನ್ನು ತಪಾಸಣೆ ಮಾಡಿದ್ರೆ ಮತಗಳ್ಳತನದ ಬಗ್ಗೆ ಎಲ್ಲ ತಿಳಿಯುತ್ತದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮತದಾರರ ಹೆಸರು ಡಿಲೀಟ್, ರಾಹುಲ್ ಗಾಂಧಿ ಆರೋಪದ ಬಗ್ಗೆ ಮಾತನಾಡಿದ ಅವರು, ಲೋಕಸಭಾ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಗೆ ಸಾಮಾನ್ಯಜ್ಞಾನ ಇಲ್ಲ. ಕಳ್ಳತನ ಮಾಡುವವರಿಗೆ ಕಳ್ಳತನದ ಬಗ್ಗೆ ಗೊತ್ತಿರುತ್ತದೆ. ಅದೇ ರೀತಿ ರಾಹುಲ್...
ಅಂಕಣಸುದ್ದಿ

ವಿಷ್ಣುವರ್ಧನ್ ಅಭಿಮಾನ ಕ್ಷೇತ್ರದ ಬ್ಲ್ಯೂ ಪ್ರಿಂಟ್‌ ರಿಲೀಸ್-ಕಹಳೆ ನ್ಯೂಸ್

ವಿಷ್ಣುವರ್ಧನ್  ಹಾಗೂ ಸುದೀಪ್‌   ಅಭಿಮಾನಿಗಳಿಂದ ತಯಾರಾಗುತ್ತಿರುವ ನೂತನ ಸ್ಮಾರಕದ ನೀಲನಕ್ಷೆ ಬಿಡುಗಡೆಯಾಗಿದೆ. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ಧ್ವಂಸವಾದ ಬಳಿಕ ಬೇಸರಗೊಂಡಿದ್ದ ಅಭಿಮಾನಿಗಳು ಪರ್ಯಾಯ ಸ್ಮಾರಕ ನಿರ್ಮಾಣ ಮಾಡಿಕೊಳ್ಳುವುದಾಗಿ ಸವಾಲು ಹಾಕಿದ್ದರು. ವಿಷ್ಣುವರ್ಧನ್ ಅಭಿಮಾನಿಗಳೊಂದಿಗೆ ವಿಷ್ಣುಸೇನೆ ಹಾಗೂ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್  ಜೊತೆ ನಟ ಸುದೀಪ್ ಕೈ ಜೋಡಿಸಿ ಹೊಸ ಸ್ಮಾರಕ ಘೋಷಿಸಿದ್ದರು. ಅದರಂತೆ ಕೆಂಗೇರಿ ಬಳಿಯಲ್ಲೇ ಎರಡು ಎಕರೆ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ನಯಾ ಸ್ಮಾರಕದ ನೀಲನಕ್ಷೆ ಲೋಕಾರ್ಪಣೆ...
ಅಂಕಣಮುಂಬೈಸಿನಿಮಾಸುದ್ದಿ

ಟಾಕ್ಸಿಕ್‌ ಫೈನಲ್‌ ಶೂಟಿಂಗ್‌ ; ಮುನ್ನ ಲಂಡನ್‌ಗೆ ಹಾರಿದ ಯಶ್!-ಕಹಳೆ ನ್ಯೂಸ್

ಟಾಕ್ಸಿಕ್‌ (Toxic) ಚಿತ್ರದ ಫೈನಲ್‌ ಹಂತದ ಚಿತ್ರೀಕರಣಕ್ಕೂ ಮುನ್ನ ರಾಕಿಂಗ್‌ ಸ್ಟಾರ್‌ ಯಶ್‌  ಲಂಡನ್‌ಗೆ ಹಾರಿದ್ದಾರೆ. ಟಾಕ್ಸಿಕ್ ಸಿನಿಮಾದ ಆ್ಯಕ್ಷನ್ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಲಿವುಡ್‌ನ ಜೆಜೆ ಪರ‍್ರಿ 45 ದಿನಗಳ ಕಾಲ ಮುಂಬೈನಲ್ಲಿ  ಬೀಡುಬಿಟ್ಟು ಫೈಟ್ ಸೀನ್‌ ಮುಗಿಸಿಕೊಟ್ಟಿದ್ದಾರೆ. ಇದೀಗ ಕೊನೆಯ ಹಂತದ ಚಿತ್ರೀಕರಣ ಮಾತ್ರವೇ ಬಾಕಿ ಇದ್ದು ಅದು ಬೆಂಗಳೂರಿನಲ್ಲಿ ನಡೆಯಲಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಟಾಕ್ಸಿಕ್ ಫೈನಲ್ ಹಂತದ ಚಿತ್ರೀಕರಣ ನಡೆಯಲಿದೆ. ಅದಕ್ಕೂ ಮುನ್ನ ಬಿಸಿನೆಸ್...
1 19 20 21 22 23 43
Page 21 of 43