Saturday, March 7, 2026

ಅಂಕಣ

ಅಂಕಣಬೆಂಗಳೂರುಸುದ್ದಿ

ಆರ್‌ಎಸ್‌ಎಸ್‌ ಪಥಸಂಚಲನ ನಿರಾತಂಕ ; ರಾಜ್ಯ ಸರಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ-ಕಹಳೆ ನ್ಯೂಸ್

ಬೆಂಗಳೂರು: ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸಲು ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ‌ರಾಜ್ಯ ಸರಕಾರದ  ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ  ನೀಡಿದೆ. ಇದರೊಂದಿಗೆ, ಚಿತ್ತಾಪುರ ಸೇರಿದಂತೆ ರಾಜ್ಯಾದ್ಯಂತ ರಾಷ್ಟ್ರೀಯ ಸ್ವಯಸೇವಕ ಸಂಘ ನಡೆಸಲು ಉದ್ದೇಶಿಸಿದ್ದ ಪಥಸಂಚಲನಗಳಿಗೆ ಉಂಟಾಗಿದ್ದ ತಡೆ ತೆರವಾಗಿದೆ. 2013ರ ಬಿಜೆಪಿ ಸರ್ಕಾರದ ಆದೇಶವನ್ನೇ ಮುಂದಿಟ್ಟು ರಾಜ್ಯ ಸರ್ಕಾರ ಖಾಸಗಿ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳನ್ನು ನಡೆಸಲು ಪೂರ್ವಾನುಮತಿ ಕಡ್ಡಾಯ ಮಾಡಿ ಹೊಸ...
ಅಂಕಣಅಂತಾರಾಷ್ಟ್ರೀಯಸುದ್ದಿ

ಅಮೇಜಾನ್‌ ಉದ್ಯೋಗಿಗಳಿ ಭಾರೀ ಶಾಕ್‌ ; ಏಕಾಏಕಿ 30 ಸಾವಿರ ಸಿಬ್ಬಂದಿ ಕಡಿತ-ಕಹಳೆ ನ್ಯೂಸ್

ವಾಷಿಂಗ್ಟನ್‌: ಇ ಕಾಮರ್ಸ್‌ ದೈತ್ಯ ಕಂಪನಿ ಅಮೇಜಾನ್‌ (Amazon Layoff) ತನ್ನ ಉದ್ಯೋಗಿಗಳಿಗೆ ಭಾರೀ ಶಾಕ್‌ ನೀಡಿದೆ. ಮಾಹಿತಿಯ ಪ್ರಕಾರ, 30,000 ಕಾರ್ಪೊರೇಟ್ ಉದ್ಯೋಗಿಗಳನ್ನು ವಜಾಗೊಳಿಸಲು ಕಂಪನಿ ಯೋಜನೆ ರೂಪಿಸಿದೆ. ಅಮೆಜಾನ್‌ನ ಒಟ್ಟು 15.5 ಲಕ್ಷ ಉದ್ಯೋಗಿಗಳಿಗೆ ಹೋಲಿಸಿದರೆ ಸಣ್ಣ ಪ್ರಮಾಣದ್ದಾದರೂ, ಕಂಪನಿಯ ಸುಮಾರು 3.5 ಲಕ್ಷ ಕಾರ್ಪೊರೇಟ್ ಉದ್ಯೋಗಿಗಳಲ್ಲಿ ಶೇ. 10ರಷ್ಟು ಭಾಗವನ್ನು ಪ್ರತಿನಿಧಿಸುತ್ತದೆ. 2022 ರಲ್ಲಿ ಕಂಪನಿ 27, 000 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಕಳೆದ ಎರಡು ವರ್ಷಗಳಲ್ಲಿ...
ಅಂಕಣಬೆಂಗಳೂರುಸುದ್ದಿ

ಇಂದಿನಿಂದ ; ರಾಜ್ಯ ಪೊಲೀಸರಿಗೆ ತೆಲಂಗಾಣ ಮಾದರಿಯ ಪಿ- ಕ್ಯಾಪ್‌ ವಿತರಣೆ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಹಾಗೂ ಹೆಡ್ ಕಾನ್‌ಸ್ಟೇಬಲ್‌ಗಳು ಇಂದಿನಿಂದ ತೆಲಂಗಾಣ ಮಾದರಿಯ ನೇವಿ ಬ್ಲೂ  ಬಣ್ಣದ ಹೊಸ ‘ಪಿ ಕ್ಯಾಪ್’ (P cap) ಧರಿಸಲಿದ್ದಾರೆ. ಈ ಮೂಲಕ ದಶಕಗಳಿಂದ ರಾಜ್ಯ ಪೊಲೀಸರು ಧರಿಸುತ್ತಿದ್ದ ಸ್ಲೌಚ್ ಕ್ಯಾಪ್‌ಗೆ ಪೊಲೀಸ್‌ ಇಲಾಖೆ ಅಂತಿಮ ವಿದಾಯ ಹೇಳಲಿದೆ. ತೆಲಂಗಾಣ  ಮಾದರಿಯಲ್ಲೇ ರಾಜ್ಯದ ಪೊಲೀಸರಿಗೆ ಹೊಸ ಪಿ ಕ್ಯಾಪ್ ವಿನ್ಯಾಸಗೊಳಿಸಲಾಗಿದೆ. ಆದರೆ ರಾಜ್ಯ ಪೊಲೀಸ್ ಲಾಂಛನ ಆ ಕ್ಯಾಪ್‌ನ ಮಧ್ಯದಲ್ಲಿ ಅಚ್ಚೊತ್ತಲಾಗಿದೆ. ಕರ್ನಾಟಕ...
ಅಂಕಣಸುದ್ದಿ

ನಾವೇ ಒಂದು ಬ್ರ್ಯಾಂಡ್‌, ನಾವ್ಯಾಕೆ ಬ್ರ್ಯಾಂಡ್‌ ಹಿಂದೆ ಹೋಗ್ಬೇಕು ; ಶಿವಣ್ಣ ಖಡಕ್ ನುಡಿ-ಕಹಳೆ ನ್ಯೂಸ್

ನಾವು ಯಾವಾಗಲೂ ಬ್ರ್ಯಾಂಡ್‌ ಹಿಂದೆ ಹೋಗಬಾರದು. ನಾವೇ ಒಂದು ಬ್ರ್ಯಾಂಡ್‌ ಎಂದು ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಖಡಕ್ ಆಗಿ ನುಡಿದಿದ್ದಾರೆ. ಶಿವರಾಜ್‌ಕುಮಾರ್ ಇತ್ತೀಚೆಗೆ `ಗತವೈಭವ’ ಸಿನಿಮಾದ ಹಾಡು ರಿಲೀಸ್ ಇವೆಂಟ್‌ಗೆ ಆಗಮಿಸಿದ್ದರು. ಈ ವೇಳೆ ಸಾಕಷ್ಟು ವಿಚಾರಗಳ ಬಗ್ಗೆ ಮಾತಾಡಿದ್ದಾರೆ. ಸಿಂಪಲ್ ಸುನಿ ಹಾಗೂ ಅವರ ಕಾಂಬಿನೇಷನ್‌ನ ಸಿನಿಮಾ ನಿಲ್ಲಲು ಕಾರಣವೇನು ಎಂದು ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು ನಾವು ಯಾವಾಗಲೂ ಬ್ರ್ಯಾಂಡ್‌ ಹಿಂದೆ ಹೋಗ್ಬಾರ್ದು, ನಾವೇ ಒಂದು...
ಅಂಕಣಸಿನಿಮಾಸುದ್ದಿ

Jailer 2 Movie ; ರಜನಿಕಾಂತ್‌ ಅಭಿನಯದ ʼಜೈಲರ್‌ 2ʼ ಚಿತ್ರಕ್ಕೆ ಸ್ಟಾರ್‌ ನಟಿ ಎಂಟ್ರಿ-ಕಹಳೆ ನ್ಯೂಸ್

ಚೆನ್ನೈ, ಅ. 27: ಕಾಲಿವುಡ್‌ ಸೂಪರ್‌ ಸ್ಟಾರ್‌ ರಜನಿಕಾಂತ್‌ ಸದ್ಯ ʼಜೈಲರ್‌ 2ʼ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. 2023ರಲ್ಲಿ ತೆರೆಕಂಡ ʼಜೈಲರ್‌ʼ ಚಿತ್ರದ ಸೀಕ್ವೆಲ್‌ ಇದಾಗಿದ್ದು, ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿದೆ. ಈಗಾಗಲೇ ಚಿತ್ರದ ಶೂಟಿಂಗ್‌ ಆರಂಭವಾಗಿದೆ. ಕೆಲವು ದಿನಗಳ ಹಿಂದೆ ಮೈಸೂರಿನಲ್ಲಿ ಚಿತ್ರೀಕರಣ ನಡೆದಿದ್ದು, ಈಗ ಚೆನ್ನೈಯಲ್ಲಿ ಮುಂದುವರಿದಿದೆ. ನೆಲ್ಸನ್‌ ದಿಲೀಪ್‌ಕುಮಾರ್‌ (Nelson Dilipkumar) ನಿರ್ದೇಶನದ ಈ ಚಿತ್ರಕ್ಕೆ ಇದೀಗ ಬಾಲಿವುಡ್‌ ಸ್ಟಾರ್‌ ನಟಿಯೊಬ್ಬರ ಎಂಟ್ರಿಯಾಗಿದೆ. ಇದುವರೆಗೆ ಸಿನಿಮಾದ...
ಅಂಕಣದೆಹಲಿಸುದ್ದಿ

ದೆಹಲಿಯಿಂದ ; ಬರಿಗೈಯಲ್ಲಿ ಬೆಂಗಳೂರಿಗೆ ಡಿಕೆಶಿ ವಾಪಸ್‌-ಕಹಳೆ ನ್ಯೂಸ್

ನವದೆಹಲಿ: ಹೈಕಮಾಂಡ್‌ ಭೇಟಿಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ಬರಿಗೈಯಲ್ಲಿ ವಾಪಸ್‌ ಆಗಿದ್ದಾರೆ. ನವೆಂಬರ್‌ ಕೋಲಾಹಲದ ಮಧ್ಯೆ ಭಾನುವಾರ ಸಂಜೆ ದೆಹಲಿಗೆ ತೆರಳಿದ್ದ ಡಿಕೆಶಿ ಹೈಕಮಾಂಡ್‌ ನಾಯಕರ ಭೇಟಿಗೆ ಅವಕಾಶ ಕೇಳಿದ್ದರು. ಇಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಸಮಯ ನೀಡಿದ್ದಾರೆ ಎಂದು ಹೇಳಲಾಗಿತ್ತು. ಬೆಳಗ್ಗೆ 10 ನಂತರ 11 ಗಂಟೆಗೆ ಭೇಟಿಯಾಗುತ್ತಾರೆ ಎನ್ನಲಾಗಿತ್ತು. ಆದರೆ ಹೈಕಮಾಂಡ್‌ ನಾಯಕರು ಡಿಕೆಶಿ ಭೇಟಿಗೆ ಅವಕಾಶ ನೀಡಿರಲಿಲ್ಲ. ಭೇಟಿಗೆ ಅವಕಾಶ...
ಅಂಕಣಬಳ್ಳಾರಿಸುದ್ದಿ

ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು ; ದರ್ಶನಕ್ಕಾಗಿ ಪ್ರವಾಸಿಗರು ಹೈರಾಣು-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ  ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ. ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ. ಮಳೆ ಬಂದಾಗ ನೀರು ಹೊರಹೋಗುವ...
ಅಂಕಣಸುದ್ದಿ

ಕೆಲಸಕ್ಕೆ ಹೋಗದೆಯೇ ಎರಡೆರಡು ಕಂಪನಿಗಳಿಂದ ಮಹಿಳೆಗೆ 37 ಲಕ್ಷ ರೂ. ಸಂಬಳ ; ಭಾರೀ ಅಕ್ರಮ ಬಯಲು-ಕಹಳೆ ನ್ಯೂಸ್

ಜೈಪುರ: ನಾನೇನು ಕೆಲಸ ಮಾಡದೆ ಕುಳಿತುಕೊಂಡಲ್ಲೇ ದುಡ್ಡು ಬರಲಿ ಎಂದು ಬಹುತೇಕರು ಹಗಲು ಕನಸು ಕಾಣುತ್ತಾರೆ. ಈ ಕನಸು ಇಲ್ಲೊಬ್ಬ ಮಹಿಳೆಗೆ ನಿಜವಾಗಿದೆ. ಮಹಿಳೆಯೊಬ್ಬರು ಎರಡು ವರ್ಷಗಳ ಕಾಲ ಏನೂ ಕೆಲಸ ಮಾಡದೆಯೇ ಎರಡು ಕಂಪನಿಗಳಿಂದ 37.54 ಲಕ್ಷ ರೂ. ಸಂಬಳ ಗಳಿಸಿದ್ದಾಳೆ. ರಾಜಸ್ಥಾನ  ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದಾಗ ಈ ವಿಷಯ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ರಾಜ್‌ಕಾಂಪ್ ಇನ್ಫೋ ಸರ್ವೀಸಸ್‌ನ ಐಟಿ ಇಲಾಖೆಯ ಜಂಟಿ ನಿರ್ದೇಶಕ ಪ್ರದ್ಯುಮನ್ ದೀಕ್ಷಿತ್,...
1 3 4 5 6 7 43
Page 5 of 43