Sunday, September 6, 2026

ಕೇರಳ

ಕೇರಳಜಿಲ್ಲೆಸುದ್ದಿ

ಕೇರಳದಲ್ಲಿ ವರುಣನ ಅಬ್ಬರಕ್ಕೆ 6 ಜನರ ದುರ್ಮರಣ; 8 ಜಿಲ್ಲೆಗಳಿಗೆ ರೆಡ್ ಅಲರ್ಟ್ – ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದಲ್ಲಿ (Kerala) ಮಳೆ ಅಬ್ಬರ ಶುರುವಾಗಿದ್ದು, ಕಾವೇರಿಗೆ ಮತ್ತಷ್ಟು ನೀರು ಬರುವ ಸಾಧ್ಯತೆ ಇದೆ. ಕೇರಳದ 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ವಯನಾಡು, ಶಬರಿಮಲೆ, ಪಂಪಾ ಪ್ರದೇಶದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ವಯನಾಡಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಬರಿಮಲೆ ಪ್ರದೇಶದಲ್ಲಿ ಆತಂಕ ಹೆಚ್ಚಿಸಿದೆ. ತೆಕ್ಕೇಕರದಲ್ಲಿ ಮನೆ ಕುಸಿದು ಅಮ್ಮ-ಮಗ ಸಾವನ್ನಪ್ಪಿದ್ದಾರೆ. ಪತ್ತನಂತಿಟ್ಟ ಜಿಲ್ಲೆಯ ರಾನ್ನಿ ನಗರದಲ್ಲಿ ಜಲಾವೃತವಾಗಿದೆ. ಇಡುಕ್ಕಿ (Idukki) ಹಾಗೂ ಕೊಟ್ಟಾಯಂ ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ...
ಕೇರಳರಾಜ್ಯಸುದ್ದಿ

ಮಗುವಿನ ಚಿಕಿತ್ಸೆಗಾಗಿ ದಾನಿಗಳ ಸಹಾಯಹಸ್ತದ ನೆರವಿಗೆ ಮನವಿ – ಕಹಳೆ ನ್ಯೂಸ್

ಪಜ್ಜಾನ ಸಮೀಪದ ಕರೋಡಿ ಗ್ರಾಮದ ಸುನಿಲ್ ಕುಮಾರ್ ಹಾಗೂ ಮಂಜುಳಾ ನಾಯಕ್ ದಂಪತಿಗಳ ಮಗಳಾದ 1.5 ವರ್ಷದ ಶಿವಾಂಶಿ ಎಂಬ ಪುಟ್ಟ ಮಗುವಿನ ಮೇಲೆ ಅಡುಗೆಗಾಗಿ ಕುದಿಸಿ ಇರಿಸಿದ್ದ ಬಿಸಿ ನೀರು ಆಕಸ್ಮಿಕವಾಗಿ ಮೈಮೇಲೆ ಬಿದ್ದ ಪರಿಣಾಮ, ಪುಟ್ಟ ಮಗು ಗಂಭೀರವಾಗಿ ಸುಟ್ಟ ಗಾಯಗಳಿಗೆ ಒಳಗಾಗಿದ್ದು, ಪ್ರಸ್ತುತ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವೈದ್ಯರು ಮಗುವಿನ ಚಿಕಿತ್ಸೆಗೆ ಸುಮಾರು ₹3 ರಿಂದ ₹4 ಲಕ್ಷ ವೆಚ್ಚವಾಗುವ ಸಾಧ್ಯತೆಯಿದೆ...
ಕೇರಳಸುದ್ದಿ

ವಯನಾಡಿನಲ್ಲಿ ಮೇಘಸ್ಫೋಟ : ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30 ಮಂದಿ ಮಿಸ್ಸಿಂಗ್‌ -ಕಹಳೆ ನ್ಯೂಸ್

ತಿರುವನಂತಪುರಂ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದೆ. ವಯನಾಡಿನ  ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ (Wayanad Tunnel Project) ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30...
ಕೇರಳಸುದ್ದಿ

ʻಪ್ರಿಯದರ್ಶಿನಿʼ ಯೋಜನೆ ಉದ್ಘಾಟನೆ ವೇಳೆ ಸಚಿವೆ ಬಿಂದು ಕೃಷ್ಣ ತಲೆ ಮೇಲೆ ಬಿದ್ದ ಬಿಸಿ ಬಿಸಿ ಪಾಯಸ- ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದ ಕೊಲ್ಲಂನಲ್ಲಿ ʻಪ್ರಿಯದರ್ಶಿನಿʼ ಉಚಿತ ಬಸ್‌ ಪ್ರಯಾಣ ಯೋಜನೆ ಉದ್ಘಾಟನೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಬಿಂದು ಕೃಷ್ಣ ಅವರ ತಲೆಯ ಮೇಲೆ ಬಿಸಿ ಪಾಯಸ ಬಿದ್ದ ಆಘಾತಕಾರಿ ಘಟನೆ ನಡೆದಿದೆ. ಕೊಲ್ಲಂ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ‘ಪ್ರಿಯದರ್ಶಿನಿ’ ಉಚಿತ ಬಸ್ ಪ್ರಯಾಣ ಯೋಜನೆಯ ಜಿಲ್ಲಾ ಮಟ್ಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ, ಸಾರ್ವಜನಿಕರು ಮತ್ತು ಗಣ್ಯರಿಗೆ ಪಾಯಸ ವಿತರಿಸಲು ಯೂತ್‌ ಕಾಂಗ್ರಸ್‌ನಿಂದ ವ್ಯವಸ್ಥೆ ಮಾಡಲಾಗಿತ್ತು....
ಕೇರಳರಾಜ್ಯಸುದ್ದಿ

ಕೇರಳದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ‘ಪ್ರಿಯದರ್ಶಿನಿ’ ಯೋಜನೆಗೆ ಸಿಎಂ ಚಾಲನೆ -ಕಹಳೆ ನ್ಯೂಸ್

ತಿರುವನಂತಪುರಂ: ಮಹಿಳೆಯರು ಮತ್ತು ತೃತೀಯಲಿಂಗಿಗಳಿಗೆ ಉಚಿತ ಬಸ್‌ ಪ್ರಯಾಣದ ಅವಕಾಶ ಕಲ್ಪಿಸುವ ‘ಪ್ರಿಯದರ್ಶಿನಿ’ ಯೋಜನೆಗೆ ಕೇರಳ ಸರ್ಕಾರ ಚಾಲನೆ ನೀಡಿದೆ. ಮುಖ್ಯಮಂತ್ರಿ ವಿ.ಡಿ.ಸತೀಶನ್ ತಿರುವನಂತಪುರಂನ ತಂಪನೂರು ಕೇಂದ್ರ ಬಸ್ ನಿಲ್ದಾಣದಲ್ಲಿ ಇಂದು ಯೋಜನೆಯನ್ನು ಉದ್ಘಾಟಿಸಿದರು. ಯೋಜನೆಯ ಉದ್ಘಾಟನಾ ಪ್ರಯಾಣದಲ್ಲಿ ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. ವಿಶೇಷವೆಂದರೆ, ಈ ಬಸ್ ಅನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಿದರು. ಈ ಯೋಜನೆಯಡಿ ಮಹಿಳೆಯರು ಮತ್ತು ತೃತೀಯಲಿಂಗಿಗಳು ಕೇರಳ (Kerala)ರಾಜ್ಯ ರಸ್ತೆ ಸಾರಿಗೆ ಸಂಸ್ಥೆ...
ಕೇರಳಕ್ರೈಮ್ಸುದ್ದಿ

ಕೇರಳದಲ್ಲಿ ಕರುಳು ಹಿಂಡುವ ಘಟನೆ: ಒಂದೂವರೆ ವರ್ಷದ ಕಂದಮ್ಮನನ್ನು ಚಿತ್ರಹಿಂಸೆ ನೀಡಿ ಕೊಲೆ ಮಾಡಿ ಪಾಪಿ ತಾಯಿ ಮತ್ತು ಪ್ರೇಮಿ -ಕಹಳೆ ನ್ಯೂಸ್

ತಿರುವನಂತಪುರಂ/ನೆಡುಮಂಗಾಡ್ ಜೂನ್ 01: ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಕೇವಲ ಒಂದೂವರೆ ವರ್ಷದ ಅರ್ಷಿದ್ ಎಂಬ ಪುಟ್ಟ ಮಗುವಿನ ದುರಂತ ಸಾವು, ದೀರ್ಘಕಾಲದ ಚಿತ್ರಹಿಂಸೆ ಹಾಗೂ ತಪ್ಪಿದ ಕೌಟುಂಬಿಕ ಎಚ್ಚರಿಕೆಗಳ ಕರಾಳ ಕಥೆಯನ್ನು ಬಿಚ್ಚಿಟ್ಟಿದೆ. ಮಗುವನ್ನು ಕೊಲೆ ಮಾಡಿದ ಆರೋಪದ ಮೇಲೆ ತಾಯಿ ಅಖಿಲಾ (24 ವರ್ಷ) ಮತ್ತು ಆಕೆಯ ಲಿವ್-ಇನ್ ಸಂಗಾತಿ ಅಶ್ಕರ್ (31 ವರ್ಷ) ಎಂಬುವವರನ್ನು ನೆಡುಮಂಗಾಡ್ ಪೊಲೀಸರು...
ಕೇರಳಸುದ್ದಿ

ಕೇರಳಂ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ.ಸತೀಶನ್‌ – ಕಹಳೆ ನ್ಯೂಸ್

ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್  ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು....
ಕೇರಳಜಿಲ್ಲೆಸುದ್ದಿ

ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ -ಕಹಳೆ ನ್ಯೂಸ್

ತಿರುವನಂತಪುರಂ: ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಈ ಬಾರಿ ಖಾತೆ ತೆರೆದಿದೆ. ಕೊಲ್ಲಂ ಜಿಲ್ಲೆಯ ಚಾತನೂರು  ಕ್ಷೇತ್ರದಲ್ಲಿ ಬಿ.ಬಿ. ಗೋಪಕುಮಾರ್  ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಕ್ಷೇತ್ರದಲ್ಲಿ ಗೋಪಕುಮಾರ್ ಅವರು ಸಿಪಿಐ (CPI) ಅಭ್ಯರ್ಥಿ ಆರ್. ರಾಜೇಂದ್ರನ್ ಮಧ್ಯೆ ಸ್ಪರ್ಧೆ ಇತ್ತು. ಆದರೆ ಅಂತಿಮವಾಗಿ 3,686 ಅಧಿಕ ಮತಗಳಿಂದ ಜಯಗಳಿಸಿದ್ದಾರೆ. ಬಿ.ಬಿ. ಗೋಪಕುಮಾರ್ ಅವರು 46,567 ಮತಗಳನ್ನು ಪಡೆದರೆ ಸಿಪಿಐ ಅಭ್ಯರ್ಥಿ ಆರ್. ರಾಜೇಂದ್ರನ್ ಅವರು 42,881 ಮತಗಳನ್ನು...
1 2 3 8
Page 1 of 8