ದೇಗುಲಗಳಲ್ಲಿ ಗೋಶಾಲೆ, ಧರ್ಮಬೋಧನಾ ಸಂಸ್ಥೆ, ಆಸ್ಪತ್ರೆ ಅಗತ್ಯ: ಕೇರಳ ರಾಜ್ಯಪಾಲ – ಕಹಳೆ ನ್ಯೂಸ್
ಕಣ್ಣೂರು : ಕೇರಳದ ಪ್ರತಿಯೊಂದು ದೇವಾಲಯದಲ್ಲಿ ಗೋಶಾಲೆ, ಸನಾತನ ಧರ್ಮವನ್ನು ಬೋಧಿಸುವ ಸಂಸ್ಥೆ ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರು ಕರೆ ನೀಡಿದ್ದಾರೆ. ದೇವಸ್ವಂ ಮಂಡಳಿಗಳು ಇದನ್ನು ಕಾರ್ಯಗತಗೊಳಿಸಬಹುದು ಎಂದು ಸೂಚಿಸಿದ್ದಾರೆ. ತಲಿಪರಂಬದ ಶ್ರೀ ರಾಜರಾಜೇಶ್ವರ ದೇವಸ್ಥಾನದಲ್ಲಿ ಶಿವನ ಕಂಚಿನ ವಿಗ್ರಹವನ್ನು ಅನಾವರಣಗೊಳಿಸಿದ ನಂತರ ಮಾತನಾಡಿದ ಅರ್ಲೇಕರ್, ಎಲ್ಲ ದೇವಾಲಯಗಳಲ್ಲಿ ವೈದ್ಯಕೀಯ ಸೌಲಭ್ಯಗಳು ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದ್ದಾರೆ. ಬೀದಿಗಳಲ್ಲಿ ಅಲೆದಾಡುವ ಎಲ್ಲ ಜಾನುವಾರುಗಳನ್ನು ಪೋಷಿಸಲು...







