Saturday, March 7, 2026

ಕ್ರೈಮ್

ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪತಿ ಹತ್ಯೆಯಾದ 3 ವರ್ಷದಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರ ಬರ್ಬರ ಕೊಲೆ! – ಕಹಳೆ ನ್ಯೂಸ್

ಬೆಂಗಳೂರು, ಜೂ.24 : ಲಾಕ್‌‌ಡೌನ್‌‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಕಿಟ್ ವಿತರಿಸಲು ತೆರಳಿದ್ದಂತ ಮಾಜಿ ಕಾರ್ಪೋರೇಟ್ ರೇಖಾ ಕದಿರೇಶ್ ಅವರನ್ನು, ಇಂದು ಬೆಳಗ್ಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.   2018ರ ಫೆಬ್ರವರಿ 8ರಂದು ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಅವರ ಪತಿ, ಕದಿರೇಶ್ ಅವರನ್ನು ಶೋಭನ್ ಅಂಡ್ ಗ್ಯಾಂಗ್ ಕೊಚ್ಚಿ ಕೊಲೆ ಮಾಡಿತ್ತು. ಈ ಕುರುತು ಮಾಹಿತಿ ನೀಡಿರುವಂತ ಪಶ್ಚಿಮ ವಿಭಾಗದ ಡಿಸಿಪಿ  ಸಂಜೀವ್...
ಕ್ರೈಮ್ಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಬೆಂಗಳೂರು ಗ್ಯಾಂಗ್ ರೇಪ್ ಕೇಸ್ ; ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ – ಕಹಳೆ ನ್ಯೂಸ್

ಬೆಂಗಳೂರು: ಬಾಂಗ್ಲಾದೇಶ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳ ಬಳಿ ಸಾವಿರಕ್ಕೂ ಹೆಚ್ಚು ವಿಡಿಯೋ ಸಿಕ್ಕಿವೆ. ಬಾಂಗ್ಲಾದೇಶದ ಯುವತಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಯುವತಿಯೊಬ್ಬಳ ಮೇಲೆ ಹಲ್ಲೆ ಮಾಡಿ ಗ್ಯಾಂಗ್ ರೇಪ್ ಮಾಡಿದ್ದ ವಿಡಿಯೋ ದೇಶದಲ್ಲಿ ವೈರಲ್ ಆಗುತ್ತಿದ್ದಂತೆ ತನಿಖೆಗಿಳಿದ ಪೊಲೀಸರು, ಅದು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ ಎನ್ನುವುದನ್ನು ಪತ್ತೆ ಮಾಡಿದ್ದರು. ತಕ್ಷಣ ಪ್ರಕರಣ ದಾಖಲಿಸಿಕೊಂಡು...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಗನ್ ತೋರಿಸಿ ಯುವತಿ ಮೇಲೆ ಗ್ರಾ.ಪಂ. ಸದಸ್ಯನಿಂದ ರೇಪ್ ; ಇದೇ ರೀತಿ ಸುಮಾರು 10 ಹೆಣ್ಣುಮಕ್ಕಳ ಮೇಲೆ ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಲೈಂಗಿಕ ದೌರ್ಜನ್ಯವೆಸಗಿದ ಅಹಮದ್ ಪಾಷಾ –

ಆನೇಕಲ್: ಮಾಡೆಲಿಂಗ್ ಕೆಲಸದ ಆಮಿಷವೊಡ್ಡಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡ ಗ್ರಾಮ ಪಂಚಾಯತ್ ಸದಸ್ಯನೊಬ್ಬ ಆಕೆಗೆ ಗನ್ ತೋರಿಸಿ ಅತ್ಯಾಚಾರವೆಸಗಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ಲವಾರದಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಅಹಮದ್ ಪಾಷಾ ಅತ್ಯಾಚಾರ ಆರೋಪಿ. ಈತನಿಗೆ ಫೇಸ್‍ಬುಕ್ ನಲ್ಲಿ ಬೆಂಗಳೂರಿನ ಹೆಬ್ಬಾಳ ಮೂಲದ ಯವತಿಯೊಬ್ಬಳ ಪರಿಚಯವಾಗಿತ್ತು. ಆಕೆಗೆ ಮಾಡೆಲಿಂಗ್ ಕ್ಷೇತ್ರದಲ್ಲಿ ಕೆಲಸ ಕೂಡಿಸುವುದಾಗಿ ನಂಬಿಸಿ ಮೊಬೈಲ್ ನಂಬರ್ ಪಡೆದಿದ್ದ. ಅಲ್ಲದೆ ತಾನು ಬನ್ನೇರುಘಟ್ಟ ಕಾರ್ಪೋರೇಟರ್ ಎಂದೂ ಹೇಳಿಕೊಂಡಿದ್ದ. ಲಾಕ್‍ಡೌನ್...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

” ಮಾಡಿದ್ದುಣ್ಣೋ ಮಹಾರಾಯ…! ” ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ; ಕೆ. ಸೋಮನಾಥ ನಾಯಕ್ ಗೆ 3 ತಿಂಗಳು ಜೈಲು ಶಿಕ್ಷೆ..! – ಕಹಳೆ ನ್ಯೂಸ್

ಬೆಳ್ತಂಗಡಿ(ಜೂ.17): ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆಯನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟಮೂಲ ದಾವೆ ನಂಬರ್‌ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌,...
ಕ್ರೈಮ್ಬೈಂದೂರುಭಟ್ಕಳಸುದ್ದಿ

ಹಣ್ಣಿನ ವಾಹನದಲ್ಲಿ 500 ಕೆ.ಜಿ. ಗೋಮಾಂಸ ಸಾಗಾಟ ; ಗೌಸ್ ಮೊಹಿದ್ದೀನ್ ಸಹಿತ ಮೂವರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ ಚೆಕ್ ಪೋಸ್ಟ್ ಸಿಬ್ಬಂದಿ ಗೂಡ್ಸ್ ವಾಹನ ಸಹಿತ ಮೂವರನ್ನು ಬಂಧಿಸಿದ್ದಾರೆ.   ಹೊನ್ನಾವರದಿಂದ ಭಟ್ಕಳದ ಕಡೆಗೆ ಕಲ್ಲಂಗಡಿ ಹಣ್ಣುಗಳೂ ಸೇರಿದಂತೆ ಇತರೇ ಹಣ್ಣುಗಳನ್ನು ತುಂಬಿಕೊಂಡು ಅದರ ಅಡಿಯಲ್ಲಿ ಸುಮಾರು 500 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು, ವಾಹನವು ಶಿರಾಲಿ ಚೆಕ್ ಪೋಸ್ಟ್ ಹತ್ತಿರ ತಲುಪುತ್ತಲೇ ನಿಲ್ಲಿಸಿ ತಪಾಸಣೆ...
ಕಾಸರಗೋಡುಕ್ರೈಮ್ಸುದ್ದಿ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ; ಕೇರಳದ ಟಿಕ್ ಟಾಕ್ ಸ್ಟಾರ್ ಬಂಧನ – ಕಹಳೆ ನ್ಯೂಸ್

ತ್ರಿಶೂರ್, ಜೂ. 13 : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಪ್ರಚೋದನೆ ನೀಡಿದ ಆರೋಪದ ಮೇಲೆ ಟಿಕ್ ಟಾಕ್ ಸ್ಟಾರ್ ಒಬ್ಬನನ್ನು ಬಂಧಿಸಿದ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಅಂಬಿಲಿ ಅಕಾ ವಿಘ್ನೇಶ್ ಕೃಷ್ಣ(19) ಎಂದು ಗುರುತಿಸಲಾಗಿದೆ. ಬಂಧಿತನ ವಿರುದ್ದ ಪೊಲೀಸರು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ವಿಘ್ನೇಶ್...
ಕ್ರೈಮ್

ಬೆಳ್ಳಂಬೆಳಗ್ಗೆ ಎಣ್ಣೆ ಪಾರ್ಟಿ, ನಂತರ ರೌಡಿ ಶೀಟರ್ ಶ್ರೀಕಾಂತ್ ನ ಬರ್ಬರ ಕೊಲೆ–ಕಹಳೆ ನ್ಯೂಸ್

ಕಲಬುರಗಿ: ಬೆಳ್ಳಂಬೆಳಗ್ಗೆಯೇ ಕೂಡಿಕೊಂಡು ಎಣ್ಣೆ ಪಾರ್ಟಿ ಮಾಡಿದವರೇ ರೌಡಿ ಶೀಟರ್ ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶನಿವಾರ ನಗರದಲ್ಲಿ ನಡೆದಿದೆ. ಶ್ರೀಕಾಂತ್ ( 28) ಎಂಬುವವನೇ ಕೊಲೆಯಾದ ರೌಡಿ ಶೀಟರ್. ಇಲ್ಲಿನ ನಗರದ ರಾಮ ನಗರದ ನಿವಾಸಿಯಾಗಿದ್ದು, ಬಡಾವಣೆಯ ಹಿಂದಿನ ಖಾಲಿ ಜಾಗದಲ್ಲೇ ಹತ್ಯೆ ಮಾಡಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಕೊಲೆ ನಡೆದಿದ್ದು, ಇದಕ್ಕೂ ‌ಮುನ್ನ ಶ್ರೀಕಾಂತ್ ಮತ್ತು ಕೊಲೆಗಾರರು ಒಟ್ಟಿಗೆ ಕೂಡಿಕೊಂಡು ಎಣ್ಣೆ ಪಾರ್ಟಿ ಮಾಡಿದ್ದರು....
ಕ್ರೈಮ್ಪುತ್ತೂರು

ಕಡಬದ ಮುಜೂರುನಲ್ಲಿ ಸಹೋದರನಿಗೆ ಲಾಂಗ್ ನಿಂದ ಹಲ್ಲೆ, ಕೊಲೆಯತ್ನ ಪ್ರಕರಣ ; ಆರೋಪಿಗೆ ನಿರೀಕ್ಷಣಾ ಜಾಮೀನು – ಕಹಳೆ ನ್ಯೂಸ್

ಪುತ್ತೂರು: ಮುಜೂರು ಸಹೋದರನಿಗೆ ಲಾಂಗ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯೆನ್ನಲಾಗಿದ್ದ ಪ್ರೀತಂ ರವರಿಗೆ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಫಿರೇರಾರವರು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಐತ್ತೂರು ಗ್ರಾಮದ ಮುಜೂರು ಎಂಬಲ್ಲಿನ ನಿವಾಸಿ ಬಾಳಪ್ಪ ಗೌಡ ಎಂಬವರ ಪುತ್ರರಾದ ಧ್ರುವ ಹಾಗೂ ಪ್ರೀತಂ ಎಂಬವರ ಮಧ್ಯೆ ಜಾಗದ ವಿಚಾರಕ್ಕೆ ಸಂಬAಧಿಸಿ ಮನಸ್ತಾಪ ಇತ್ತು ಎನ್ನಲಾಗಿದ್ದು, ಮೇ ೧೪ರ ರಾತ್ರಿ...
1 117 118 119 120 121 128
Page 119 of 128