ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಇಬ್ಬರಿಗೆ ಗಾಯ- ಕಹಳೆ ನ್ಯೂಸ್
ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಇಂದು ಬೆಳಿಗ್ಗೆ ಎರಡು ಖೈದಿಗಳ ತಂಡದ ನಡುವೆ ಮಾರಾಮಾರಿ ಉಂಟಾಗಿದ್ದು, ಖೈದಿಗಳ ನಡುವಿನ ಹೊಡೆದಾಟದಲ್ಲಿ ಇಬ್ಬರು ಖೈದಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಮಂಗಳೂರಿನ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿ, ಜೈಲು ಸೇರಿದ್ದಂತ ಸಮೀರ್ ಹಾಗೂ ಅನ್ಸಾರ್, ಜೈನುದ್ದೀನ್ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೆ ಹೋಗಿ, ಮಾರಾಮಾರಿ ಕೂಡ ನಡೆದಿದೆ. ಇದರಿಂದಾಗಿ ಅನ್ಸಾರ್, ಜೈನುದ್ದೀನ್ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಬೆಳಿಗ್ಗೆ ತಿಂಡಿ...







