Wednesday, July 29, 2026

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುದ್ದಿ

ಆರ್ಥಿಕ ಮುಗ್ಗಟ್ಟಿನಿಂದ ತಬಲ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಮಂಗಳೂರು,ಜೂ 09 : ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜೂ.9ರ ಬುಧವಾರ ಪಿಂಟೋಸ್ ಲೇನ್ ಬಳಿ ವರದಿಯಾಗಿದೆ . ಮೃತರನ್ನು ತಬಲ ಕಲಾವಿದ, 52 ವರ್ಷದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಎಂದು ಗುರುತಿಸಲಾಗಿದೆ. ವಾಣಿ ಖಾಸಗಿ ಕಾಲೇಜೊಂದರಲ್ಲಿ ಕರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.         ಸುರೇಶ್ ಅವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರೆ, ಅವರ ಪತ್ನಿ ವಾಣಿ ಮನೆಯೊಳಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
ಉಡುಪಿಕ್ರೈಮ್ಸುದ್ದಿ

Breaking News : ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಅಂತಿಮ ತೀರ್ಪು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ ; ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ. ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ...
ಕ್ರೈಮ್ಸುದ್ದಿ

ಪುಲ್ವಾಮಾದಲ್ಲಿ ಬಿಜೆಪಿ ಮುಖಂಡ, ಪುರಸಭೆ ಸದಸ್ಯನನ್ನು ಗುಂಡಿಕ್ಕಿ ಹತ್ಯೆಗೈದ ಉಗ್ರರು- ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ:ಬಿಜೆಪಿ ಮುಖಂಡ, ಪುರಸಭೆ ಸದಸ್ಯನನ್ನು ಭಯೋತ್ಪಾದಕರು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ(ಜೂನ್ 02) ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ರಾಕೇಶ್ ಪಂಡಿತ್ ಪುಲ್ವಾಮಾದ ಟ್ರಾಲ್ ಪ್ರದೇಶದಲ್ಲಿನ ಸ್ನೇಹಿತನ ಮನೆಯಲ್ಲಿದ್ದಾಗ ಮೂವರು ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಗುಂಡು ತಗುಲಿದ್ದ ರಾಕೇಶ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ದಾಳಿಯಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ಅಸೀಫಾ ಮುಸ್ತಖ್ ಎಂದು ಗುರುತಿಸಲಾಗಿದ್ದು, ಆಕೆಯನ್ನು ಶ್ರೀನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು,...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಕ್ರಮ ಮದ್ಯದ ಅಡ್ಡೆಗೆ ದಾಳಿ ನಡೆಸಿದ ಪುಂಜಾಲಕಟ್ಟೆಯ ಖಡಕ್ ಎಸ್.ಐ. ಸೌಮ್ಯ ಜೆ. ; ಆರೋಪಿಗಳು ಪರಾರಿ..! ಅಕ್ರಮ ಮದ್ಯ,ನಗದು ವಶಕ್ಕೆ ಪಡೆದ ಪೋಲೀಸರು – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಅಡ್ಡೆಗೆ ಪೂಂಜಾಲಕಟ್ಟೆಯ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲಿಸ್ ಠಾಣಾಧಿಕಾರಿ ಸೌಮ್ಯಾ ಜೆ. ಅವರು ಸಿಬಂದಿಗಳೊಂದಿಗೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಗೆ ದಾಳಿ ನಡೆಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 42,356/-ಮೌಲ್ಯದ 58.68 ಲೀಟರ್ ಮದ್ಯ ಹಾಗೂ 82.53 ಲೀಟರ್ ಬಿಯರ್...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ಗ್ಯಾಂಗ್​ರೇಪ್​ ಪ್ರಕರಣದ ಮೂವರು ಆರೋಪಿಗಳು ಚೆನ್ನೈಗೆ ಪರಾರಿ-ಕಹಳೆ ನ್ಯೂಸ್

ಬೆಂಗಳೂರು(ಮೇ 31): ಬಾಂಗ್ಲಾದೇಶ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ಯಾಂಗ್​ರೇಪ್​ ಪ್ರಕರಣದ ಮೂವರು ಪ್ರಮುಖ ಆರೋಪಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಗಂಡ-ಹೆಂಡತಿ ಸೇರಿ ಓರ್ವ ಯುವಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿರುವ ಗಂಡ-ಹೆಂಡತಿ ಘಟನೆ ನಡೆದ ದಿನ ಸ್ಥಳದಲ್ಲೇ ಇದ್ದು ಪ್ರಚೋದನೆ ಕೊಟ್ಟಿದ್ದರು ಎಂದು ತಿಳಿದು ಬಂದಿದೆ. ಪರಾರಿಯಾಗಿರುವ ಯುವಕ ಸಹ ಯುವತಿ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಘಟನೆ ನಡೆದ...
ಕ್ರೈಮ್ಬೆಂಗಳೂರುಸುದ್ದಿ

ದೇಶದಲ್ಲಿ ಸಂಚಲನ ಮೂಡಿಸಿದ್ದ ಯುವತಿ ಅತ್ಯಾಚಾರ ವಿಡಿಯೋ ಆರೋಪಿಗಳ ಬಂಧಿಸಿದ ಬೆಂಗಳೂರು ಪೊಲೀಸರು – ಕಹಳೆ ನ್ಯೂಸ್

ಬೆಂಗಳೂರು (ಮೇ. 27): ಯುವತಿಯೊಬ್ಬಳ ಮೇಲೆ ನಾಲ್ವರು ಕಾಮುಕರು ಅತ್ಯಾಚಾರ ಎಸಗಿದ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸುವಲ್ಲಿ ರಾಮಮೂರ್ತಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊರ್ವಳ ಮೇಲೆ ಅಮಾನುಷ, ಭೀಕರವಾಗಿ ಆಕೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಈ ಘಟನೆಯಲ್ಲಿ ಕಂಡು ಬಂದ ಯುವತಿ ಚಹರೆ ಈಶಾನ್ಯ ರಾಜ್ಯದ ಯುವತಿ ಎಂಬುದು ಸ್ಪಷ್ಟವಾಗಿತ್ತು. ಈ ಹಿನ್ನಲೆ ಈ...
ಕ್ರೈಮ್ಸುದ್ದಿ

ಕಾರ್ಕಳ: ಇಬ್ಬರ ನಡುವೆ ಮಾತಿನ ಚಕಮಕಿ ಓರ್ವನ ಕೊಲೆಯಲ್ಲಿ ಅಂತ್ಯ -ಕಹಳೆ ನ್ಯೂಸ್

ಮಾಳ ಗ್ರಾಮದಲ್ಲಿ ಮನೆಯೊಂದಕ್ಕೆ ತೆರಳಿದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಒಬ್ಬನ ಕೊಲೆಯೊಂದಿಗೆ ಪರ್ಯಾವಸಗೊಂಡ ಘಟನೆ ಮೇ. 23ರ ಭಾನುವಾರ ರಾತ್ರಿ ನಡೆದಿದೆ. ಕೊಲೆಗೀಡಾದವನನ್ನು ಹರೀಶ್ ಪೂಜಾರಿ ಎಂದು ಗುರುತಿಸಲಾಗಿದೆ. ಗುರುವ ಪ್ರಕರಣದ ಆರೋಪಿ. ಇವರಿಬ್ಬರು ಮಾಳದ ನಿವಾಸಿಯಾಗಿದ್ದು ಸ್ಥಳೀಯ ನಿವಾಸಿ ರೀಟಾ ಎಂಬವರ ಮನೆಗೆ ಭಾನುವಾರ ರಾತ್ರಿ ಹೋಗಿದ್ದರು.ಯಾವುದೋ ವಿಚಾರಕ್ಕೆ ಅವರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಅಲ್ಲೇ ಇದ್ದ ಕಬ್ಬಿಣದ ರಾಡ್...
ಕ್ರೈಮ್ಸುದ್ದಿ

ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿ ವಂಚನೆ ; ಆರೋಪಿಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಮಂಗಳೂರು, ಮೇ 22 : ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಆರೋಪಿ ಅರುಣ್ ರಾಜ್ ಕಾಪಿಕಾಡ್ (39) ಎಂಬಾತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.   ಆರೋಪಿಯು ಡಿಸೆಂಬರ್ ನಲ್ಲಿ ನಗರದ ಹೊಟೇಲ್ ಒಂದಕ್ಕೆ ಕರೆಕೊಂಡು ಹೋಗಿ ಯಾವುದೇ ಜ್ಯೂಸ್ ನೀಡಿ ಪ್ರಜ್ಞೆ ತಪ್ಪಿಸಿ ಬಲತ್ಕಾರವಾಗಿ ಲೈಂಗಿಕ ಸಂಪರ್ಕ ನಡೆಸಿ ಬೆದರಿಕೆ ಹಾಕಿದ್ದಾನೆ. ಆ ಬಳಿಕ ವಿವಾಹವಾಗುವುದಾಗಿ ನಂಬಿಸಿದ್ದಾನೆ. ಅನಂತರ ಅಪಾರ್ಟ್ ಮೆಟ್ ನಲ್ಲಿಯೂ ದೈಹಿಕ ಸಂಪರ್ಕ...
1 120 121 122 123 124 129
Page 122 of 129