ಸ್ನಾನ ಮಾಡುವಾಗಲೇ ಜಾರಿ ಬಿದ್ದು ಮೃತಪಟ್ಟ ಯುವತಿ, ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಬೆಚ್ಚಿ ಬೀಳಿಸುವ ರಹಸ್ಯ- ಕಹಳೆ ನ್ಯೂಸ್
ಪ್ರಿಯಕರನೊಂದಿಗೆ ಪುತ್ರಿ ಪರಾರಿಯಾಗುತ್ತಾಳೆ ಎಂದು ಭಾವಿಸಿದ ತಂದೆಯೇ ಪುತ್ರಿಯನ್ನು ಕೊಲೆ ಮಾಡಿದ ಘಟನೆ ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ನಡೆದಿದೆ. ಬಾಲಾಜಿ ಎಂಬಾತನೇ ಕೊಲೆ ಆರೋಪಿಯಾಗಿದ್ದಾನೆ. ಈತನ ಪುತ್ರಿ ಮೂರು ದಿನಗಳ ಹಿಂದೆ ಸ್ನಾನ ಮಾಡುವ ವೇಳೆ ಜಾರಿ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಹೇಳಲಾಗಿತ್ತು. ಗ್ರಾಮಸ್ಥರು ಅದನ್ನೇ ನಂಬಿದ್ದರು. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ನೀಡಿದ್ದು ಅಂತ್ಯಕ್ರಿಯೆ ನೆರವೇರಿಸಲಾಗಿತ್ತು. ಮರಣೋತ್ತರ ಪರೀಕ್ಷೆ ವರದಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿರುವುದು...






