Friday, April 24, 2026

ಕ್ರೈಮ್

ಅಂಕಣಕ್ರೈಮ್ಸುದ್ದಿ

ನಿಯಂತ್ರಣ ತಪ್ಪಿ 6 ಕಾರುಗಳಿಗೆ ಡಿಕ್ಕಿ ಹೊಡೆದ ಲ್ಯಾಂಡ್ ರೋವರ್ ಡಿಫೆಂಡರ್ ; ಚಾಲಕ ವಶಕ್ಕೆ-ಕಹಳೆ ನ್ಯೂಸ್

ಲಕ್ನೋ: ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್  ಕಾರು ಚಾಲಕನ ನಿಯಂತ್ರಣ ತಪ್ಪಿ ಕನಿಷ್ಟ 6 ಕಾರುಗಳಿಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ನೋಯ್ಡಾ ಮಾಲ್ ಬಳಿ ನಡೆದಿದೆ. ಬುಧವಾರ ರಾತ್ರಿ ನೋಯ್ಡಾದ ಮಾಲ್ ಬಳಿ ವೇಗವಾಗಿ ಬಂದ ಲ್ಯಾಂಡ್ ರೋವರ್ ಡಿಫೆಂಡರ್ ನಿಯಂತ್ರಣ ತಪ್ಪಿ ಕನಿಷ್ಠ ಆರು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಲ್ಯಾಂಡ್ ರೋವರ್ ಕಾರು ಚಾಲಕನನ್ನು ಪೊಲೀಸರು...
ಅಂಕಣಕ್ರೈಮ್ಬೆಂಗಳೂರುಸುದ್ದಿ

ಜೈಲಲ್ಲಿ ; ದರ್ಶನ್‌ ಸ್ಥಿತಿ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರು- ಕಹಳೆ ನ್ಯೂಸ್

– ಪತ್ನಿ ವಿಜಯಲಕ್ಷ್ಮಿ ಮುಂದೆ ದಾಸನ ಗೋಳಾಟ -ಹಣೆಬರಹದಲ್ಲಿ ಇದ್ದಂಗೆ ಆಗುತ್ತೆ, ಜೈಲಿಗೆ ಬರಬೇಡ ಎಂದು ಪತ್ನಿಗೆ ಹೇಳಿದ ದರ್ಶನ್‌ ಬೆಂಗಳೂರು: ರೇಣುಕಾಸ್ವಾಮಿ ಕೇಸ್‌ಲ್ಲಿ  ಎರಡನೇ ಬಾರೀ ಜೈಲು ಸೇರಿರುವ ನಟ ದರ್ಶನ್‌ಗೆ ಒಂದರ ಮೇಲೊಂದರಂತೆ ಸಂಕಷ್ಟ ಎದುರಾಗುತ್ತಿದೆ. ಸೌಲಭ್ಯದಿಂದ ವಂಚಿತರಾಗಿ ಪರಿತಪಿಸುತ್ತಿರುವ ಪತಿಯ ಕಂಡು ಪತ್ನಿ ವಿಜಯಲಕ್ಷ್ಮಿ ಕಣ್ಣೀರಿಟ್ಟಿದ್ದಾರೆ. ಪರಪ್ಪನ ಅಗ್ರಹಾರ ಜೈಲು ಸೇರಿದಾಗಿನಿಂದಲೂ ನಟ ದರ್ಶನ್‌ಗೆ ಒಂದಿಲ್ಲೊಂದು ಸಮಸ್ಯೆ ಕಾಡುತ್ತಲೇ ಇದೆ. ಹಾಸಿಗೆ, ದಿಂಬು ಇಲ್ಲದೇ ಪರದಾಡುವಂತಾಗಿದ್ದು,...
ಕ್ರೈಮ್ಜಿಲ್ಲೆಶಿವಮೊಗ್ಗಸಂತಾಪಸುದ್ದಿ

ಮಗಳನ್ನ ಕೊಚ್ಚಿ ಕೊಂದು ಶವದ ಮೇಲೆ ನಿಂತು ತಾಯಿ ಆತ್ಮಹತ್ಯೆ – ಕಹಳೆ ನ್ಯೂಸ್

ಶಿವಮೊಗ್ಗ: ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಹೆತ್ತತಾಯಿಯೇ 11 ವರ್ಷದ ಮಗಳನ್ನ ಹತ್ಯೆ ಮಾಡಿ ಆಕೆಯ ಶವದ ಮೇಲೆ ನಿಂತು ತಾನೂ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಸಮೀಪ ಈ ಘಟನೆ ನಡೆದಿದೆ.ಅಂದರೆ ಶರಾವತಿ ನಗರದಲ್ಲಿರುವ ಜಿಲ್ಲಾಸ್ಪತ್ರೆಯ ಕ್ವಾರ್ಟರ್ಸ್ ನಲ್ಲಿ ಈ ಘಟನೆ ನಡೆದಿದೆ. 11 ವರ್ಷದ ಮಗಳು ಪೂರ್ವಿಕಾಳನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಮಹಿಳೆ ಬಳಿಕ ನಂತರ ಫ್ಯಾನ್ ಗೆ ನೇಣು...
ಅಂಕಣಕ್ರೈಮ್ಸುದ್ದಿ

TVK Vijay Rally Stampede ; ಮದ್ರಾಸ್‌ ಹೈಕೋರ್ಟ್‌ನಲ್ಲಿಂದು ವಿಚಾರಣೆ – ಸಾವಿನ ಸಂಖ್ಯೆ 41ಕ್ಕೆ ಏರಿಕೆ- ಕಹಳೆ ನ್ಯೂಸ್

– ಸಿಬಿಐ ತನಿಖೆಗೆ ಆಗ್ರಹಿಸಿ ಕೋರ್ಟ್‌ ಮೆಟ್ಟಿಲೇರಿದ್ದ ನಟ ವಿಜಯ್‌ & ಟೀಂ ಚೆನ್ನೈ: ಕರೂರು ರಾಜಕೀಯ ರ‍್ಯಾಲಿವೇಳೆ ಸಂಭವಿಸಿದ ಕಾಲ್ತುಳಿತ ದುರಂತದ  ಬಗ್ಗೆ ಸ್ವತಂತ್ರ ತನಿಖೆ ಅಥವಾ ಸಿಬಿಐ ತನಿಖೆ ನಡೆಸಬೇಕೆಂದು ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್‌ ದಳಪತಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ ನಡೆಯಲಿದೆ. ವಿಜಯ್ ಅವರ ಪರವಾಗಿ ತಮಿಳಗ ವೆಟ್ರಿ ಕಳಗಂ ಪಕ್ಷದ ಕಾನೂನು ತಂಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮದ್ರಾಸ್‌ ಹೈಕೋರ್ಟ್‌ನಲ್ಲಿ...
ಅಂಕಣಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ, ಅವನು ಬದಕಲು ಅರ್ಹನಲ್ಲ ; 71ರ ವೃದ್ಧನ ಕೊಂದ ಭಾರತೀಯ ಮೂಲದ ವ್ಯಕ್ತಿ-ಕಹಳೆ ನ್ಯೂಸ್

ವಾಷಿಂಗ್ಟನ್‌: ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಅವನು ಬದುಕಲು ಅರ್ಹನಲ್ಲ ಎಂದು ಹೇಳಿ 71 ವರ್ಷದ ವೃದ್ಧನನ್ನು ಭಾರತೀಯ ಮೂಲದ ವ್ಯಕ್ತಿ ಇರಿದು ಕೊಂದಿರುವ ಘಟನೆ ಅಮೆರಿಕದಲ್ಲಿ ನಡೆದಿದೆ. ಕ್ಯಾಲಿಫೋರ್ನಿಯಾದ ಫ್ರೀಮಾಂಟ್‌ನಲ್ಲಿ 71 ವರ್ಷದ ನೋಂದಾಯಿತ ಲೈಂಗಿಕ ಅಪರಾಧಿ ಡೇವಿಡ್ ಬ್ರಿಮ್ಮರ್‌ನನ್ನು ಇರಿದು ಕೊಂದ ಆರೋಪದ ಮೇಲೆ 29 ವರ್ಷದ ಭಾರತೀಯ ಮೂಲದ ವರುಣ್ ಸುರೇಶ್ ವಿರುದ್ಧ ಕೊಲೆ ಆರೋಪ ಹೊರಿಸಲಾಗಿದೆ. ಘಟನಾ ಸ್ಥಳದಲ್ಲಿ ಸುರೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ ಚಾಕು...
ಅಂಕಣಕ್ರೈಮ್ಸುದ್ದಿ

ನಟ ದರ್ಶನ್ & ಗ್ಯಾಂಗ್‌ ಇಂದು ಕೋರ್ಟ್‌ಗೆ ; ದೋಷಾರೋಪ ಹೊರಿಸಲಿರುವ ಕೋರ್ಟ್‌-ಕಹಳೆ ನ್ಯೂಸ್

ಬೆಂಗಳೂರು: ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ  17 ಆರೋಪಿಗಳು ಇಂದು ಸಿಸಿಎಚ್ 64ರ ನ್ಯಾಯಾದೀಶರ ಮುಂದೆ ಹಾಜರಾಗಲಿದ್ದಾರೆ. ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡ  ಅಂತಾ ಕೂಗಿದಾಗ ಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ 302 ಕೊಲೆಯತ್ನ, 364 ಕಿಡ್ನ್ಯಾಪ್, 202 ಸಾಕ್ಷಿನಾಶ ಕೇಸ್ ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾ ಅಥವಾ ಅಲ್ಲಗೆಳೆಯುತ್ತೀರಾ...
ಅಂಕಣಕ್ರೈಮ್ಸುದ್ದಿ

ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ ; ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ-ಕಹಳೆ ನ್ಯೂಸ್

ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ  ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನ ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ. ಯೂಸೂಫ್‌ ಕಟಾರಿ ಯಾರು? ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ...
ಅಂಕಣಕ್ರೈಮ್ಬಳ್ಳಾರಿಸುದ್ದಿ

ಬಳ್ಳಾರಿ ; 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ-ಕಹಳೆ ನ್ಯೂಸ್

ಬಳ್ಳಾರಿ: ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು  ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ  ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ ವಂಚಿಸಿ ಪರಾರಿಯಾಗಿದ್ದಾನೆ. ಎರಡು ಮೂರು ತಿಂಗಳು ಕಾರಿಗೆ ಬಾಡಿಗೆ ಕೊಟ್ಟು ಬಳಿಕ ಕೈ ಕೊಟ್ಟಿದ್ದಾನೆ. ಆರು ತಿಂಗಳಿಂದ ಸತತವಾಗಿ ಬಳ್ಳಾರಿಯ ತನ್ನ ಸ್ನೇಹಿತರ ಮೂಲಕ ಕಾರುಗಳನ್ನ ಇತರರಿಂದ ಬಾಡಿಗೆ ಪಡೆದಿದ್ದ ಎಂ.ಡಿ ಜಹೀದ್ ಪಾಷಾ ಸಿಂಧನೂರಿನಲ್ಲಿ...
1 4 5 6 7 8 128
Page 6 of 128