Wednesday, March 11, 2026

ರಾಜ್ಯ

ರಾಜ್ಯಸುದ್ದಿ

ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ ; ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳಿಂದಲೂ ಮಾಂಸ, ಮದ್ಯ ವಿತರಣೆಗೆ ಕಡಿವಾಣ – ಕಹಳೆ ನ್ಯೂಸ್

ಲಕ್ನೋ: ಅಯೋಧ್ಯೆ ಆಡಳಿತ ಮಂಡಳಿಯು ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ನಿಷೇಧಿಸಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಆನ್‌ಲೈನ್‌ ವೇದಿಕೆಗಳ ಮೂಲಕ ಪದೇ ಪದೇ ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡುತ್ತಿರುವ ಬಗ್ಗೆ ಪದೇ ಪದೇ ದೂರುಗಳು ಕೇಳಿಬಂದ ಹಿನ್ನೆಲೆ ʻಪಂಚಕೋಶ ಪರಿಕ್ರಮʼದ ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ ಅಯೋಧ್ಯೆಯಲ್ಲಿನ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ...
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಡ್ರೋನ್’ ಮೂಲಕ ಭಾರತಕ್ಕೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ : ಪಾಕ್ ಪಿತೂರಿಯನ್ನು ವಿಫಲಗೊಳಿಸಿದ BSF ಪಡೆ – ಕಹಳೆ ನ್ಯೂಸ್

ಜಮ್ಮು-ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಸಾಂಬಾ ಸೆಕ್ಟರ್ನಲ್ಲಿ ಪಾಕಿಸ್ತಾನದ ಸಂಚನ್ನು ಬಿಎಸ್‌ಎಫ್ (BSF) ಪಡೆಗಳು ವಿಫಲಗೊಳಿಸಿದೆ ಎಂದು ವರದಿಗಳು ತಿಳಿಸಿದೆ. ಹೌದು. ಡ್ರೋನ್ಗಳ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ಶಸ್ತ್ರಾಸ್ತ್ರಗಳನ್ನು ಬಿಎಸ್‌ಎಫ್ ಪಡೆಗಳು ವಶಪಡಿಸಿಕೊಂಡರು. ಶುಕ್ರವಾರ ರಾತ್ರಿ ಸಾಂಬಾ ಸೆಕ್ಟರ್ನಲ್ಲಿ ಗಡಿಯುದ್ದಕ್ಕೂ ಡ್ರೋನ್ ಚಲನೆಯನ್ನು ಬಿಎಸ್‌ಎಫ್ ಪಡೆಗಳು ಪತ್ತೆಹಚ್ಚಿದವು. ಈ ಸಂದರ್ಭದಲ್ಲಿ, ಫ್ಲೋರಾ ಗ್ರಾಮದಲ್ಲಿ ಡ್ರೋನ್ ಬಂದಿಳಿದಿರುವುದನ್ನು ಅವರು ಗಮನಿಸಿದರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಶೋಧ ನಡೆಸಿದರು. ಗ್ರೆನೇಡ್,...
ರಾಜ್ಯರಾಷ್ಟ್ರೀಯಸುದ್ದಿ

ಮುಖ್ಯ ನ್ಯಾಯಮೂರ್ತಿಯಾಗಿ ಮಹೇಶ್ ಶರಶ್ಚಂದ್ರ ಸೋನಕ್ ಪ್ರಮಾಣ ವಚನ ಸ್ವೀಕಾರ – ಕಹಳೆ ನ್ಯೂಸ್

ರಾಂಚಿ: ಜಾರ್ಖಂಡ್ ಹೈಕೋರ್ಟ್‌ನ 18ನೇ ಮುಖ್ಯ ನ್ಯಾಯಮೂರ್ತಿಯಾಗಿ ಮಹೇಶ್ ಶರಶ್ಚಂದ್ರ ಸೋನಕ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ಇಲ್ಲಿನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲರಾದ ಸಂತೋಷ್ ಕುಮಾರ್ ಗಂಗ್ವಾರ್ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. ಈ ಪದಗ್ರಹಣ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಮುಖ್ಯ ಕಾರ್ಯದರ್ಶಿ ಅವಿನಾಶ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ನ್ಯಾಯಾಂಗದ ಗಣ್ಯರು ಉಪಸ್ಥಿತರಿದ್ದರು....
ದೆಹಲಿರಾಜ್ಯಸಂತಾಪಸುದ್ದಿ

ನ್ಯಾಯಾಲಯದ ಕಟ್ಟಡದಿಂದ ಜಿಗಿದು ಸಿಬ್ಬಂದಿ ಆತ್ಮಹ*ತ್ಯೆ; ಡೆತ್‌ನೋಟ್ ಪತ್ತೆ – ಕಹಳೆ ನ್ಯೂಸ್

ನವದೆಹಲಿ: ಇಲ್ಲಿನ ದಕ್ಷಿಣ ದೆಹಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಬೆಚ್ಚಿಬೀಳಿಸುವ ಘಟನೆಯೊಂದು ಸಂಭವಿಸಿದೆ. ನ್ಯಾಯಾಲಯದ ಸಿಬ್ಬಂದಿಯೊಬ್ಬರು ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಘಟನೆಯ ವಿವರ: ಸಾಕೇತ್ ನ್ಯಾಯಾಲಯದ ಸಂಕೀರ್ಣದ ಒಳಗೆ ಈ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ನ್ಯಾಯಾಲಯದ ಸಿಬ್ಬಂದಿ ಎಂದು ಗುರುತಿಸಲಾಗಿದ್ದು, ಅವರು ಕಟ್ಟಡದ ಮಹಡಿಯಿಂದ ಕೆಳಕ್ಕೆ ಜಿಗಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದರೂ, ಅಷ್ಟರಲ್ಲೇ...
ಜಿಲ್ಲೆರಾಜ್ಯಸುದ್ದಿ

ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ಜೀವಬೆದರಿಕೆ: ಆರೋಪಿಯ ಹೆಡೆಮುರಿ ಕಟ್ಟಿದ ಪೊಲೀಸರು -ಕಹಳೆ ನ್ಯೂಸ್

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರಿಗೆ ಇ-ಮೇಲ್ ಮೂಲಕ ಜೀವಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಗುರುವಾರ ರಾತ್ರಿ ರಾಜ್ಯಪಾಲರ ಅಧಿಕೃತ ಇ-ಮೇಲ್ ಐಡಿಗೆ ಸಂದೇಶ ಕಳುಹಿಸಿದ್ದ ಈ ವ್ಯಕ್ತಿ, ರಾಜ್ಯಪಾಲರನ್ನು 'ಬಾಂಬ್ ಹಾಕಿ ಸ್ಫೋಟಿಸುವುದಾಗಿ' ಬೆದರಿಕೆ ಹಾಕಿದ್ದನು. ಅಚ್ಚರಿಯ ವಿಷಯವೆಂದರೆ, ಆರೋಪಿಯು ಇ-ಮೇಲ್‌ನಲ್ಲಿ ತನ್ನ ಮೊಬೈಲ್ ಸಂಖ್ಯೆಯನ್ನು ಸಹ ನಮೂದಿಸಿದ್ದನು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ವಿಶೇಷ ತಂಡ ರಚಿಸಿ ಆರೋಪಿಯ ಪತ್ತೆ...
ಜಿಲ್ಲೆರಾಜ್ಯಸುದ್ದಿ

2 ಕೋಟಿ ರೂ. ವಿಮೆ ಹಣಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದ ಪತ್ನಿ – ಕಹಳೆ ನ್ಯೂಸ್

ಜಾಮಾಬಾದ್ : 2 ಕೋಟಿ ರೂ.ಗೂ ಹೆಚ್ಚು ಮೌಲ್ಯದ ವಿಮಾ ಹಣವನ್ನು ಪಡೆಯುವ ದುರಾಸೆಯಲ್ಲಿ ತನ್ನ ಪತಿಯ ಕೊಲೆ ಮಾಡಿರುವುದಾಗಿ ಮಹಿಳೆಯೊಬ್ಬಳು ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿ ಸೌಮ್ಯಾ ತನ್ನ ಪ್ರಿಯಕರನೊಂದಿಗೆ ಕೊಲೆಗೆ ಯೋಜನೆ ರೂಪಿಸಿ, ಗುತ್ತಿಗೆ ಕೊಲೆಗಾರರನ್ನು ನೇಮಿಸಿಕೊಂಡಿದ್ದಳು, ಹತ್ಯೆಯ ನಂತರ ಅದನ್ನು ಹೃದಯಾಘಾತ ಎಂದು ಬಿಂಬಿಸಲು ಪ್ರಯತ್ನಿಸಿದಳು ಎಂದು ಪೊಲೀಸರು ತಿಳಿಸಿದ್ದಾರೆ. ಮಕ್ಲೂರು ಮಂಡಲದ ಬೋರ್ಗಮ್ (ಕೆ) ಗ್ರಾಮದ ನಿವಾಸಿಯಾ ಪಲ್ನಾಟಿ ರಮೇಶ್ ಎನ್ನುವವರು ಸೌಮ್ಯ ಅವರನ್ನು ಸುಮಾರು 13...
ಜಿಲ್ಲೆರಾಜ್ಯಸುದ್ದಿ

ಸಾವಿನ ದವಡೆಯಿಂದ ಮಹಿಳೆಯನ್ನು ರಕ್ಷಿಸಿದ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ – ಕಹಳೆ ನ್ಯೂಸ್

ಚೆನ್ನೈ: ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ಮಾನವೀಯತೆ ಎಂಬುದು ಎಲ್ಲಕ್ಕಿಂತ ದೊಡ್ಡದು ಎಂಬುದನ್ನು ತಮಿಳುನಾಡಿನ ಬ್ಲಿಂಕಿಟ್ ಸಂಸ್ಥೆಯ ಡೆಲಿವರಿ ಬಾಯ್ ಯೊಬ್ಬರು ಸಾಬೀತುಪಡಿಸಿದ್ದಾರೆ. ಕೇವಲ ಆರ್ಡರ್ ತಲುಪಿಸುವುದಷ್ಟೇ ತನ್ನ ಕೆಲಸ ಎಂದುಕೊಳ್ಳದ ಈ ಯುವಕ, ತಡರಾತ್ರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯ ಮನವೊಲಿಸಿ ಆಕೆಗೆ ಮರುಜನ್ಮ ನೀಡಿದ್ದಾರೆ. ಏನಿದು ಪ್ರಕರಣ ತಡರಾತ್ರಿ ಬ್ಲಿಂಕಿಟ್ ಆಪ್ ಮೂಲಕ ಗ್ರಾಹಕಿಯೊಬ್ಬರು ಮೂರು ಪ್ಯಾಕೆಟ್ 'ಇಲಿ ಪಾಷಾಣ' ಆರ್ಡರ್ ಮಾಡಿದ್ದರು. ಸಮಯವಲ್ಲದ ಸಮಯದಲ್ಲಿ ಇಲಿ ಪಾಷಾಣ ಆರ್ಡರ್...
ಜಿಲ್ಲೆಬೆಂಗಳೂರುರಾಜ್ಯ

ಕೋಗಿಲು ಪ್ರಕರಣ: ಬಂಧಿತರು 14 ದಿನಗಳ ಕಾಲ ಪೊಲೀಸ್‌ ವಶಕ್ಕೆ – ಕಹಳೆ ನ್ಯೂಸ್

ಬೆಂಗಳೂರು : ಯಲಹಂಕ ಕೋಗಿಲು ಲೇಔಟ್‌ ಸಮೀಪ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಜಮೀನು ಕಬಳಿಕೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ ಇಬ್ಬರು ಆರೋ ಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಿದ ಪೊಲೀಸರು 14 ದಿನಗಳ ಕಾಲ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ್ದಾರೆ. ಲೇಔಟ್‌ ನಲ್ಲಿ ಸ್ಥಳೀಯರಿಂದ ಹಣ ಪಡೆದು ಅನಧಿ ಕೃತವಾಗಿ ಮನೆ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಹಿನ್ನೆಲೆಯಲ್ಲಿ ವಿಜಯ್‌, ವಾಸಿಂ ಉಲ್ಲಾ ಬೇಗ್‌, ಮುನಿ ಆಂಜನಪ್ಪ ಹಾಗೂ ರಾಬೀನ್‌ ಎಂಬುವರು ವಿರುದ್ಧ...
1 14 15 16 17 18 272
Page 16 of 272