Wednesday, March 18, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರು ಇಸ್ಲಾಮಿಕ್ ಉಗ್ರಗಾಮಿಗಳನ್ನು ಬಂಧಿಸಿದ NIA – ಕಹಳೆ ನ್ಯೂಸ್

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ. ನ.19 ರಂದು ಮಂಗಳೂರಿನಲ್ಲಿ...
ಉಡುಪಿಬೈಂದೂರುರಾಜ್ಯಸುದ್ದಿ

ಫೆ.15, 16 ರಂದು ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ನೂತನ ಬ್ರಹ್ಮರಥ ಸಮರ್ಪಣೆ – ಕಹಳೆ ನ್ಯೂಸ್

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲಕ್ಕೆ ದಾನಿಗಳಾದ ಬೆಂಗಳೂರಿನ ಉದ್ಯಮಿ ಸುನಿಲ್‌ ಆರ್‌. ಶೆಟ್ಟಿ ಅವರಿಂದ ಕೊಡಮಾಡಿದ ನೂತನ ಬ್ರಹ್ಮರಥದ ಪುರಪ್ರವೇಶ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ಫೆ. 15 ಹಾಗೂ 16 ರಂದು ನಡೆಯಲಿದೆ. ಫೆ.15 ರಂದು ಕುಂಭಾಶಿ. ಕೋಟೇಶ್ವರ, ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬಗ್ವಾಡಿ, ನೆಂಪು ವಂಡ್ಸೆ, ಚಿತ್ತೂರು, ಈಡೂರು, ಜಡ್ಕಲ್‌ ಹಾಲ್ಕಲ್‌ ಮಾರ್ಗವಾಗಿ ಪುರಮೆರವಣಿಗೆಯಲ್ಲಿ ನೂತನ ರಥವನ್ನು ಕೊಲ್ಲೂರಿಗೆ ಒಯ್ಯಲಾಗುವುದು. ರಥ ಸಾಗುವ ಮಾರ್ಗದಲ್ಲಿ ಅಲ್ಲಿನ ಮುಖ್ಯ ದೇಗುಲ‌ಗಳ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ; ಮಂಜುನಾಥ ಸ್ವಾಮಿ ದರ್ಶನ ಪಡೆದು, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ರಾಜ್ಯಪಾಲರು – ಕಹಳೆ ನ್ಯೂಸ್

ಬೆಳ್ತಂಗಡಿ: ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಮಂಗಳವಾರ ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆಯವರು ಗೌರವಿಸಿದರು. ಬಳಿಕ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡ ನವಜೀವನ ಸಮಾವೇಶ,...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ರಬ್ಬರ್‌ ಬೆಳೆಗೆ ಬಜೆಟ್‌ನಲ್ಲಿ ಬೆಂಬಲ ಬೆಲೆ – ಕೇರಳ ಮಾದರಿ ಪರಿಹಾರಕ್ಕೆ ಆಗ್ರಹ ; ಉಜಿರೆ ರಬ್ಬರ್‌ ಸೊಸೈಟಿ ನೇತೃತ್ವದಲ್ಲಿ ಶಾಸಕ ಹರೀಶ್‌ ಪೂಂಜ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಮುನಿರತ್ನ ಅವರನ್ನು ಭೇಟಿ ಮಾಡಿ ರಬ್ಬರ್‌ ಕೃಷಿಕರ ಸಮಸ್ಯೆ ಕುರಿತು ಮನವರಿಕೆ – ಕಹಳೆ ನ್ಯೂಸ್

ಬೆಳ್ತಂಗಡಿ: ವರ್ಷದ ಎಲ್ಲ ದಿನಗಳಲ್ಲೂ ಆದಾಯ ತರುವಂತಹ ಬೆಳೆ ರಬ್ಬರ್‌. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಡಿಕೆಯ ಜತೆಗೆ ಮುಖ್ಯ ವಾಣಿಜ್ಯ ಬೆಳೆಯಾಗಿ ರಬ್ಬರನ್ನು ಅವಲಂಬಿ ಸಿದ್ದರೂ ಐದು ವರ್ಷಗಳಿಂದ ಉತ್ತಮ ಧಾರಣೆ ಕಾಣದಿರುವ ಹಿನ್ನೆಲೆಯಲ್ಲಿ ಮಕ್ಕಳಂತೆ ಸಲಹಿದ ರಬ್ಬರ್‌ ಮರಗಳ ಬುಡಕ್ಕೆ ಕೊಡಲಿ ಏಟು ಹಾಕಬೇಕಾದ ಅನಿವಾರ್ಯ ಪರಿಸ್ಥಿತಿ ಒದಗಿದೆ. ರಾಜ್ಯದಲ್ಲಿ 60 ಸಾವಿರ ಹೆಕ್ಟೇರ್‌ಗೂ ಮೇಲ್ಪಟ್ಟು ಪ್ರದೇಶದಲ್ಲಿ ರಬ್ಬರ್‌ ಬೆಳೆಯಲಾಗುತ್ತಿದೆ. ದ.ಕ., ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ...
ಉಡುಪಿಕಾಸರಗೋಡುದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಅಡಕೆ ಬೆಳೆಗಾರರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ – ” ಕ್ಯಾನ್ಸರ್​ಗೇ ಅಡಿಕೆ ಮದ್ದು” ಅಡಕೆಯಲ್ಲಿ ತೀವ್ರತರಹದ ಗಾಯ ಗುಣಪಡಿಸುವ, ಮಧುಮೇಹ ಸಮಸ್ಯೆ ನಿಯಂತ್ರಣ, ಹೃದಯ ಸಂಬಂಧಿತ ಕಾಯಿಲೆಗಳು, ಉದರದ ಅಲ್ಸರ್ ಹಾಗೂ ಇನ್ನಿತರ ಸಮಸ್ಯೆಗಳ ಪರಿಹಾರಕ್ಕೆ ಆಶಾದಾಯಕ ಫಲಿತಾಂಶ ; ವಿಧಾನ ಪರಿಷತ್​ನಲ್ಲಿ ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್

ಬೆಂಗಳೂರು: ಎಲೆಚುಕ್ಕೆ ರೋಗ ದುಃಸ್ವಪ್ನವಾಗಿ ಕಾಡುತ್ತಿರುವ ಸಂದರ್ಭದಲ್ಲಿ ಅಡಕೆ ಬೆಳೆಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಡಕೆಯಲ್ಲಿ ಕ್ಯಾನ್ಸರ್​ಗೆ ಕಾರಣವಾಗುವ ಅಂಶಗಳಿಲ್ಲ. ಬದಲಿಗೆ ಕ್ಯಾನ್ಸರ್​ಗೇ ಅಡಕೆ ಮದ್ದು ಎಂಬುದು ವೈಜ್ಞಾನಿಕ ಸಂಶೋಧನೆಯಿಂದ ಸಾಬೀತಾಗಿದೆ. ವಿಧಾನ ಪರಿಷತ್​ನಲ್ಲಿ ಗಮನಸೆಳೆಯುವ ಸೂಚನೆಯಡಿ ಮಂಗಳವಾರ ನಡೆದ ಚರ್ಚೆಗೆ ಗೃಹ ಸಚಿವ, ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ ಆರಗ ಜ್ಞಾನೇಂದ್ರ ಉತ್ತರಿಸಿದ ವೇಳೆ ಈ ವಿಷಯ ಬಹಿರಂಗಪಡಿಸಿದರು. ಪ್ರತಿಷ್ಠಿತ ಎಂ.ಎಸ್.ರಾಮಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪನೆಗೆ ವಿಧಾನಪರಿಷತ್ತಿನ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯ – ಕಹಳೆ ನ್ಯೂಸ್

ಬೆಂಗಳೂರು: ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸುವಂತೆ ವಿಧಾನಪರಿಷತ್ತಿನ ಕಾಂಗ್ರೆಸ್‌ ಸದಸ್ಯ ಮಂಜುನಾಥ ಭಂಡಾರಿ ಒತ್ತಾಯಿಸಿದ್ದಾರೆ. ವಿಧಾನಮಂಡಲ ಅಧಿವೇಶನದ ಮೇಲ್ಮನೆ ಕಲಾಪದಲ್ಲಿ ಮಂಗಳವಾರ ಈ ವಿಷಯ ಪ್ರಸ್ತಾಪಿಸಿದ ಭಂಡಾರಿ, ಕುಂದಾಪುರ ಕನ್ನಡ ಭಾಷೆ ಮಾತನಾಡುವ 25 ಲಕ್ಷ ಜನರ ಆಶಯದಂತೆ ಕುಂದಾಪುರ ಕನ್ನಡ ಭಾಷಾ ಅಕಾಡೆಮಿ ಸ್ಥಾಪಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ಕುಂದಾಪುರ ಕರ್ನಾಟಕ ಮತ್ತು ಭಾರತ ದೇಶಕ್ಕೆ ವಿವಿಧ ವಿಷಯಗಳಲ್ಲಿ ಅದ್ಭುತವಾದ ಕೊಡುಗೆಗಳನ್ನು ನೀಡಿದ ಊರು. ಕುಂದಾಪ್ರ ಭಾಷೆ, ಸಂಸ್ಕೃತಿಯ...
ರಾಜ್ಯಸಿನಿಮಾಸುದ್ದಿ

ಹ್ಯಾಪಿ ವ್ಯಾಲೆಂಟೈನ್ಸ್ ಡೇ ಎಂದು ವಿಶ್ ಮಾಡಿದ ಮೇಘನಾ ರಾಜ್, ಪ್ರೀತಿಯ ಸಂದೇಶ ತಲುಪಿದ್ದು ಯಾರಿಗೆ? – ಕಹಳೆ ನ್ಯೂಸ್

ನಟಿ ಮೇಘನಾ ರಾಜ್ (Meghana Raj)​ ವ್ಯಾಲೆಂಟೈನ್ಸ್​ ಡೇ ವಿಶ್​ ಮಾಡಿದ್ದಾರೆ. ನಟ ಚಿರಂಜೀವಿ ಸರ್ಜಾ ನಿಧನದ ಬಳಿಕ ಮೇಘನಾ ರಾಜ್​ ಮಗನ ಲಾಲನೆ-ಪಾಲನೆಯಲ್ಲಿ ಬ್ಯುಸಿ ಆಗಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದನ್ನು ಶೇರ್ ಮಾಡಿ ವ್ಯಾಲೆಂಟೈನ್ಸ್ ಡೇಗೆ (Valentine's Day) ವಿಶ್​ ಮಾಡಿದ್ದಾರೆ. ನಟ ಚಿರಂಜೀವಿ ಸರ್ಜಾ (Chiranjeevi Sarja) ಅವರನ್ನು ಪ್ರೀತಿಸಿ ಮದುವೆಯಾಗಿದ್ರು ನಟಿ ಮೇಘನಾ ರಾಜ್, ಸ್ಯಾಂಡಲ್​ವುಡ್​ನ (Sandalwood) ಕ್ಯೂಟ್​ ಜೋಡಿಯಾಗಿದ್ದ ಇವರ ಬಾಳಲಿ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಯಕ್ಷಗಾನ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಗೆ ‘ಬೊಂಡಾಲ’ ಪ್ರಶಸ್ತಿ ; ಫೆ. 17 ಕ್ಕೆ ಪ್ರಶಸ್ತಿ ಪ್ರದಾನ – ಕಹಳೆ ನ್ಯೂಸ್

ಬಂಟ್ವಾಳ : ಹಳೆ ತಲೆಮಾರಿನ ಅರ್ಥಧಾರಿ ದಿ.ಬೊಂಡಾಲ ಜನಾರ್ದನ ಶೆಟ್ಟಿ ಮತ್ತು ಅವರ ಪುತ್ರ ಹವ್ಯಾಸಿ ಯಕ್ಷಗಾನ ಕಲಾವಿದ, ದಿ.ಬೊಂಡಾಲ ರಾಮಣ್ಣ ಶೆಟ್ಟರ ಹೆಸರಿನಲ್ಲಿ ನೀಡಲಾಗುವ ಬೊಂಡಾಲ ಪ್ರಶಸ್ತಿಗೆ ಕಟೀಲು ಮೇಳದ ಭಾಗವತ ಪುಂಡಿಕಾಯಿ ಗೋಪಾಲಕೃಷ್ಣ ಭಟ್ ಆಯ್ಕೆಯಾಗಿದ್ದಾರೆ. ಬೊಂಡಾಲ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಟೀಲು ಮೇಳದಲ್ಲಿ ಸೇವೆಸಲ್ಲಿಸಿದ ಕಲಾವಿದರಿಗಾಗಿ ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ನೀಡುತ್ತಿರುವ ವಾರ್ಷಿಕ ಪ್ರಶಸ್ತಿಗೆ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಮಾಜಿ...
1 185 186 187 188 189 273
Page 187 of 273