Thursday, March 19, 2026

ರಾಜ್ಯ

ರಾಜಕೀಯರಾಜ್ಯಸುದ್ದಿಹುಬ್ಬಳ್ಳಿ

ಹಣೆಗೆ ಹಚ್ಚಿದ ತಿಲಕ ಅಳಿಸಿಕೊಂಡ ಸಿಎಂ, ಚರ್ಚೆಗೆ ಗ್ರಾಸವಾದ ಮುಖ್ಯಮಂತ್ರಿಗಳ ನಡೆ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಂದು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವದ ಉದ್ಘಾಟನಾ ಸಮಾರಂಭ ನಡೆಯುತ್ತಿದೆ. ಹುಬ್ಬಳ್ಳಿಯ ರೈಲ್ವೇ ಮೈದಾನದಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಯುವಜನೋತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿಯವರು ಹಣೆಗೆ ಹಚ್ಚಿದ ತಿಲಕವನ್ನು ಅಳಿಸಿಕೊಂಡಿದ್ದು, ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. 26ನೇ ರಾಷ್ಟ್ರೀಯ ಯುವಜನೋತ್ಸವ : ಯುವಜನೋತ್ಸವದ ಜನಪ್ರಿಯತೆಗೆ ದೇಸಿಯ ಕ್ರೀಡೆಗಳ ಮೆರಗು ಯುವಜನೋತ್ಸವಕ್ಕೆ ಆಗಮಿಸುವ ಜನನಾಯಕರಿಗೆ ಸ್ವಾಗತ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿ ತಾಲೂಕಿನ ಬಂದಾರು ಸರಕಾರಿ ಶಾಲೆಯಲ್ಲಿ ವಿದ್ಯಾಭಿಮಾನಿಗಳ ಸಹಕಾರದಿಂದ 4 ಲಕ್ಷ ರೂ. ವೆಚ್ಚದಲ್ಲಿ 2 ಎಕ್ರೆಯಲ್ಲಿ ಅಡಿಕೆ ತೋಟ ನಿರ್ಮಾಣ ; ಬೋರ್‌ವೆಲ್‌ ವ್ಯವಸ್ಥೆ ಕಲ್ಪಿಸಿದ್ದ ಶಾಸಕ ಹರೀಶ್‌ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ: ಸರಕಾರಕ್ಕೆ ಸರಕಾರಿ ಶಾಲೆಗಳ ಉಪಚಾರ ಸಾಕಾಗಿದೆ. ಅಗತ್ಯ ಸಲಕರಣೆಗೂ ಅನುದಾನ ಸಿಗದ ಪರಿಸ್ಥಿತಿ ಸರಕಾರಿ ಶಾಲೆಗಳದ್ದು. ಕೆಲವೊಂದಕ್ಕೆ ಶಿಕ್ಷಕರೇ ತಮ್ಮ ವೇತನದಿಂದ ಭರಿಸಬೇಕಾದ ಸಂದಿಗ್ಧತೆಯೂ ಇದೆ. ಈ ಮಧ್ಯೆ ಸರಕಾರಿ ಶಾಲೆಗಳ ಮಕ್ಕಳ ಸಂಖ್ಯೆ ಹೆಚ್ಚಿಸಲು ನಾನಾ ಕಸರತ್ತು ನಡೆಸುವುದನ್ನು ಕಂಡು ಸರಕಾರಿ ಶಾಲೆಗಳ ಪೋಷಕರು ಬಸವಳಿದಿದ್ದಾರೆ. ಸರಕಾರಿ ಶಾಲೆಗಳ ಅಭಿವೃದ್ಧಿ ದೂರದೃಷ್ಟಿಯಿಂದ ತಾವೇ ಆದಾಯ ಮೂಲವನ್ನು ಕಂಡುಕೊಳ್ಳುತ್ತಿರುವ ಹಲವು ಶಾಲೆಗಳ ಸಾಧನೆಗಳನ್ನು ಕಂಡಿದ್ದೇವೆ. ಅಂಥದ್ದರಲ್ಲಿ ತಾಲೂಕಿನ ಬಂದಾರು ಗ್ರಾಮದ...
ಕ್ರೈಮ್ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಇಸ್ಲಾಮಿಕ್ ಸ್ಟೇಟ್​​ನ ಭಯೋತ್ಪಾದಕ ಚಟುವಟಿಕೆಯಲ್ಲಿ ನಂಟು ಹೊಂದಿದ್ದ ಐಸಿಸ್ ನ ಶಂಕಿತ ಉಗ್ರ ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಮಝೀನ್ ಅಬ್ದುಲ್ ರೆಹಮಾನ್ ನನ್ನು ಹೆಡೆಮುರಿಕಟ್ಟಿದ ಎನ್​ಐಎ – ಕಹಳೆ ನ್ಯೂಸ್

ಮಂಗಳೂರು: ಭಯೋತ್ಪಾದಕ ಸಂಘಟನೆಯಾಗಿರುವ ಐಸಿಸ್​ ಜತೆ ನಂಟು ಹೊಂದಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದವರು ಮುಂದುವರಿಸಿರುವ ಕಾರ್ಯಾಚರಣೆಯಲ್ಲಿ ಇನ್ನಿಬ್ಬರು ಶಂಕಿತರು ಸಿಕ್ಕಿ ಹಾಕಿಕೊಂಡಿದ್ದಾರೆ. ಭಯೋತ್ಪಾದಕ ಹಿನ್ನೆಲೆಯಲ್ಲಿ ಇಬ್ಬರು ಶಂಕಿತರನ್ನು ಎನ್​ಐಎ ಬಂಧಿಸಿದೆ. ಶಿವಮೊಗ್ಗದ ಐಸಿಸ್ ನಂಟಿನ ಭಯೋತ್ಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ‌ಒಬ್ಬ ಶಂಕಿತ ಉಗ್ರ ಹಾಗೂ ದಾವಣಗೆರೆಯ ಹೊನ್ನಾಳಿಯಲ್ಲಿ ಇನ್ನೊಬ್ಬ ಶಂಕಿತ ಉಗ್ರನನ್ನು ಪತ್ತೆ ಮಾಡಿ ಬಂಧಿಸಲಾಗಿದೆ. ಮಂಗಳೂರು ಹೊರವಲಯದ ಬಬ್ಬುಕಟ್ಟೆಯ ಮಝೀನ್ ಅಬ್ದುಲ್ ರೆಹಮಾನ್, ದಾವಣಗೆರೆಯ ಹೊನ್ನಾಳಿಯಲ್ಲಿ ನದೀಮ್...
ಬೆಂಗಳೂರುರಾಜ್ಯಸಿನಿಮಾಸುದ್ದಿ

ರೂಪೇಶ್ ಶೆಟ್ಟಿ ‘ಬಿಗ್ ಬಾಸ್‌’ ಗೆಲ್ಲುತ್ತಿದ್ದಂತೆ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಆಕರ್ಷಿಸುವ ‘ಮಂಕು ಭಾಯ್ ಫಾಕ್ಸಿ ರಾಣಿ’ ಸಿನಿಮಾ ರಿಲೀಸ್‌ಗೆ ರೆಡಿ..! – ಕಹಳೆ ನ್ಯೂಸ್

ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥದ್ದೆ ಮತ್ತೊಂದು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಅದುವೇ 'ಮಂಕು ಭಾಯ್ ಫಾಕ್ಸಿ ರಾಣಿ'. ಬೆಂಗಳೂರು: ಸ್ಯಾಂಡಲ್‌ವುಡ್‌ನಲ್ಲಿ ಇತ್ತೀಚೆಗೆ ಡಿಫರೆಂಟ್ ಟೈಟಲ್‌ನ ಸಿನಿಮಾಗಳು ಬರುತ್ತಿವೆ. ಈ ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಚಿತ್ರದತ್ತ ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥದ್ದೆ ಮತ್ತೊಂದು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಅದುವೇ 'ಮಂಕು ಭಾಯ್ ಫಾಕ್ಸಿ ರಾಣಿ'. ಮಂಗಳೂರಿನ ಪ್ರತಿಭಾನ್ವಿತ ಯುವ ಸಿನಿಮೋತ್ಸಾಹಿಗಳ ತಂಡವೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು: ಬಾಡಿಗೆ ಮನೆಯಿಂದ 14 ಅಂಗಿ, 4 ಜೀನ್ಸ್ ಪ್ಯಾಂಟ್ ಸೇರಿದಂತೆ 75 ಸಾವಿರ ಮೌಲ್ಯದ ಸೊತ್ತು ಕಳವು ; ಮಹಮ್ಮದ್ ಮುಸ್ತಫ್ಪ, ಚಾಪಳ್ಳ ಶಮೀರ್ ಅಂದರ್..! – ಕಹಳೆ ನ್ಯೂಸ್

ಪುತ್ತೂರು, ಜ 11 : ಎ.ಪಿ.ಎಂ.ಸಿ ರಸ್ತೆಯ ಸೂತ್ರಬೆಟ್ಟುವಿನ ಬಾಡಿಗೆ ಮನೆಯಲ್ಲಿ ವಾಸವಿರುವ ವಿವೇಕಾನಂದ ಯಾನೆ ಸತ್ಯನಾರಾಯಣ ಅವರ ಮನೆಯಿಂದ ಸುಮಾರು 75 ಸಾವಿರ ಮೌಲ್ಯದ ವಿವಿಧ ಸೊತ್ತುಗಳನ್ನು ಕಳವು ಗೈದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೂರ್ನಡ್ಕ ನಿವಾಸಿಗಳಾದ ಮಹಮ್ಮದ್ ಮುಸ್ತಫ್ಪ(28) ಹಾಗೂ ಸವಣೂರು ಚಾಪಳ್ಳ ಶಮೀರ್(24) ಬಂಧಿತ ಆರೋಪಿಗಳಾಗಿದ್ದಾರೆ.ಮನೆಯಲ್ಲಿ ಸತ್ಯನಾರಾಯಣ ಹಾಗೂ ಅವರ ಅಣ್ಣ ಗೋಪಿನಾಥ ವಾಸವಿದ್ದು, ಜನವರಿ 4 ರಂದು ಸತ್ಯ ನಾರಾಯಣ ಅವರು ತಾಯಿಯ ಅಸೌಖ್ಯತೆ...
ಕಡಬದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

ಜ.13: ಪೇಜಾವರ ಹಿರಿಯ ಶ್ರೀಗಳ ಹುಟ್ಟೂರು ರಾಮಕುಂಜಕ್ಕೆ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ..! ” ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ” ವಿಶೇಷ ಉಪನ್ಯಾಸ – ಕಹಳೆ ನ್ಯೂಸ್

ಅವರು ಜ.13ರಂದು ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ’ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಕಾರ್ಯದರ್ಶಿ ಕೆ.ಎಸ್.ರಾಧಾಕೃಷ್ಣ ಅವರು ತಿಳಿಸಿದ್ದಾರೆ....
ದಕ್ಷಿಣ ಕನ್ನಡರಾಜ್ಯಸಂತಾಪಸುದ್ದಿ

ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್ ನಿಧನ ; ಮಂಗಳೂರಿನ ಲೇಡಿಹಿಲ್​ನ ಮನೆಯಲ್ಲಿ ಸಾರಾ ಅಬೂಬಕ್ಕರ್​ ಅವರ ಅಂತಿಮ ದರ್ಶನ – ಇಂದೇ ಅಂತ್ಯಕ್ರಿಯೆ – ಕಹಳೆ ನ್ಯೂಸ್

ಮಂಗಳೂರು: ಕನ್ನಡದ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್(86) ಅವರು ಮಂಗಳವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮಂಗಳೂರಿನ ಲೇಡಿಹಿಲ್​ನ ಮನೆಯಲ್ಲಿ ಸಾರಾ ಅಬೂಬಕ್ಕರ್​ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ರಾತ್ರಿ 8 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ. 1936ರ ಜೂನ್ 30ರಂದು ಕಾಸರಗೋಡಿನ ಚಂದ್ರಗಿರಿ ತೀರದ ಗ್ರಾಮವೊಂದರಲ್ಲಿ ಪಿ. ಅಹಮದ್ ಮತ್ತು ಚೈನಾಬಿ ದಂಪತಿಯ ಪುತ್ರಿಯಾಗಿ ಸಾರಾ ಜನಿಸಿದರು. ಹುಟ್ಟೂರಿನಲ್ಲೇ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು ಕಾಸರಗೋಡಿನಲ್ಲಿ ಪ್ರೌಢಶಿಕ್ಷಣ...
ದಕ್ಷಿಣ ಕನ್ನಡರಾಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ತನ್ನಿಬ್ಬರು ಸಣ್ಣ ಹೆಣ್ಣು ಮಕ್ಕಳನ್ನು, ಪತಿಯನ್ನು ತೊರೆದು ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಪ್ರಿಯಕರನೊಂದಿಗೆ ಠಾಣೆಗೆ ಹಾಜರು…!!! – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ ಸದಸ್ಯೆ ಭಾರತಿ ಮೂಕಮಲೆ ಅವರು ಜ. 5ರಂದು ಸುಬ್ರಹ್ಮಣ್ಯ ಠಾಣೆಗೆ ಪ್ರಿಯಕರನೊಂದಿಗೆ ಹಾಜರಾಗಿ ಆತನೊಂದಿಗೇ ತೆರಳಿದ್ದಾರೆ. ಭಾರತಿ ಮೂಕಮಲೆ ತನ್ನ ಪ್ರಿಯಕರ ನಂದನ್‌ ಮತ್ತು ಅವರ ನ್ಯಾಯವಾದಿ ಮುಖಾಂತರ ಸುಬ್ರಹ್ಮಣ್ಯ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ನಂದನ್‌ನೊಂದಿಗೆ ಜೀವನ ಮುಂದುವರೆಸುವ ನಿರ್ಧಾರ ಪ್ರಕಟಿಸಿದ್ದಾರೆ. ಠಾಣೆಯಲ್ಲಿ ತನ್ನ ನಿರ್ಧಾರವನ್ನು ಲಿಖೀತ ರೂಪದಲ್ಲಿ ಬರೆದು ಕೊಟ್ಟು ನಂದನ್‌ನೊಂದಿಗೆ ತೆರಳಿದ್ದಾರೆ. ತನ್ನಿಬ್ಬರು ಸಣ್ಣ ಹೆಣ್ಣು...
1 191 192 193 194 195 274
Page 193 of 274