Tuesday, March 17, 2026

ರಾಜ್ಯ

ದಕ್ಷಿಣ ಕನ್ನಡರಾಜ್ಯಸುದ್ದಿ

ಮತ್ತೆ ಕ್ರೂಸ್‌ ಪ್ರವಾಸೋದ್ಯಮಕ್ಕೆ ಕಳೆ : 271 ಪ್ರವಾಸಿಗರನ್ನು ಹೊತ್ತ ಹಡಗು ಮಂಗಳೂರಿಗೆ ; ಯಕ್ಷಗಾನ, ಚೆಂಡೆ ವಾದನಗಳೊಂದಿಗೆ ಪ್ರವಾಸಿಗರ ಸ್ವಾಗತ – ಕಹಳೆ ನ್ಯೂಸ್

ಪಣಂಬೂರು: ಎರಡು ವರ್ಷ ಕೊರೊನಾ ಹೊಡೆತದಿಂದ ನಲುಗಿದ ಪ್ರವಾಸೋದ್ಯಮ ಚಟುವಟಿಕೆ ಮತ್ತೆ ಗರಿಗೆದರುವ ಲಕ್ಷಣ ಕಂಡು ಬಂದಿದೆ. ಸೋಮವಾರ ನವಮಂಗಳೂರು ಬಂದರಿಗೆ 271 ಪ್ರವಾಸಿಗರು ಮತ್ತು 373 ಮಂದಿ ಸಿಬಂದಿಯನ್ನು ಹೊತ್ತ ಎಂಎಸ್‌ ಯುರೋಪಾ 2 ಆಗಮಿಸಿತು. ಯಕ್ಷಗಾನ, ಚೆಂಡೆ ವಾದನಗಳೊಂದಿಗೆ ಪ್ರವಾಸಿಗರನ್ನು ಸಾಂಪ್ರದಾಯಿಕವಾಗಿ ಸ್ವಾಗತಿಸಲಾಯಿತು. ಬಸ್‌ ಹಾಗೂ ಖಾಸಗೀ ಪ್ರವಾಸಿ ಕಾರು ಗಳಲ್ಲಿ ಪ್ರವಾಸಿಗರನ್ನು ಮೂಡುಬಿದಿರೆಯ ಸಾವಿರ ಕಂಬದ ಬಸದಿ, ಮಂಗಳೂರಿನ ಸೈಂಟ್‌ ಅಲೋಶಿಯಸ್‌ ಚಾಪೆಲ್‌, ಕದ್ರಿ ದೇವಸ್ಥಾನ,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆ ಅವಕಾಶವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು: ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಸೈಲೆಂಟ್ ಸುನೀಲ್ ನನ್ನು ಯಾವುದೇ ಕಾರಣಕ್ಕೆ ಪಕ್ಷಕ್ಕೆ ಸೇರಿಸುವುದಿಲ್ಲ. ಸೈಲೆಂಟ್ ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ. ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೂ ಪತ್ತೆಯಾಗದ ನಾಲ್ವರು ಆರೋಪಿಳಿಗೆ ಕುಕ್ಕರ್‌ ಬಾಂಬ್ ಪ್ರಕರಣದ ಆರೋಪಿ ಶಾರೀಕ್‌ನೊಂದಿಗೆ ನಂಟು..? –  ಕಹಳೆ ನ್ಯೂಸ್

ಪುತ್ತೂರು, ನ 28 : ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಹಂತಕರಿಗೆ ನೆರವು ನೀಡಿದ ಆರೋಪದಲ್ಲಿ ಎನ್‌ಐಎ ಲುಕೌಟ್‌ ನೋಟಿಸ್‌ ಹೊರಡಿಸಿದ ನಾಲ್ವರು ಆರೋಪಿಗಳು ಇನ್ನೂ ಪತ್ತೆಯಾಗದಿದ್ದು, ಪೊಲೀಸರ ತಂಡ ಬೇರೆ ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಬೆಳ್ಳಾರೆ ನಿವಾಸಿಗಳಾದ ಮಹಮ್ಮದ್‌ ಮುಸ್ತಫಾ, ಸಿದ್ಧಿಕ್‌ ಯಾನೆ ಪೈಂಟರ್‌ ಸಿದ್ಧಿಕ್‌, ಸುಳ್ಯದ ಉಮ್ಮರ್‌ ಫಾರೂಕ್‌, ಮಡಿಕೇರಿಯ ತುಫೈಲ್‌ ಎಂ.ಎಚ್‌. ತಲೆಮರೆಸಿಕೊಂಡಿರುವ ಆರೋಪಿಗಳು.ಈ ನಾಲ್ವರು ಆರೋಪಿಗಳ ಪೈಕಿ ಮಡಿಕೇರಿಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳ ಮೇಳದ ತಿರುಗಾಟ ಆರಂಭ: ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಪ್ರಸಕ್ತ ವರ್ಷದ ತಿರುಗಾಟ ಶನಿವಾರ ಆರಂಭವಾಯಿತು. ಈಗಾಗಲೇ ಧರ್ಮಸ್ಥಳದಲ್ಲಿ ಸೇವಾಕರ್ತರ ವತಿಯಿಂದ ಕೆಲವು ಹರಕೆ ಬಯಲಾಟಗಳು ಪ್ರದರ್ಶನ ಗೊಂಡಿದ್ದು ಮುಂದೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತೀ ದಿನ ಸಂಜೆ 7ರಿಂದ ರಾತ್ರಿ 12 ಗಂಟೆಯ ವರೆಗೆ ಪ್ರದರ್ಶನ ನಡೆಯಲಿದೆ. 2023ರ ಮೇ 23ರ ವರೆಗೆ ಪ್ರದರ್ಶನದ ಬಳಿಕ 3 ದಿನ ಧರ್ಮಸ್ಥಳದಲ್ಲಿ ಸೇವಾ ಬಯಲಾಟದೊಂದಿಗೆ ತಿರುಗಾಟ ಕೊನೆಗೊಳ್ಳುತ್ತದೆ. ಧರ್ಮಾಧಿಕಾರಿ ಡಾ|...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

2022-23ರ ಕಂಬಳ ಋತುವಿನ ಪ್ರಥಮ ಕಂಬಳ ಸಂಪನ್ನ ; ಕಕ್ಯಪದವು ಸತ್ಯ – ಧರ್ಮ ಜೋಡುಕರೆ ಕಂಬಳ ಕೂಟದ ಫಲಿತಾಂಶ –  ಕಹಳೆ ನ್ಯೂಸ್

ಪುಂಜಾಲಕಟ್ಟೆ: ಜಿಲ್ಲಾ ಕಂಬಳ ಸಮಿತಿಯಡಿ ಬರುವ 2022-23ರ ಕಂಬಳ ಋತುವಿನ ಪ್ರಥಮ ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಕಕ್ಯಪದವಿನಲ್ಲಿ ಸಂಪನ್ನವಾಗಿದೆ. ಕಕ್ಯಪದವಿನ 10ನೇ ವರ್ಷದ “ಸತ್ಯ – ಧರ್ಮ” ಜೋಡುಕರೆ ಕಂಬಳ ಕೂಟ ಶನಿವಾರ ಮತ್ತು ರವಿವಾರ ನಡೆಯಿತು. ಕೂಟದಲ್ಲಿ ಒಟ್ಟು 214 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ ವಿಭಾಗದಲ್ಲಿ 2 ಜೊತೆ, ಅಡ್ಡಹಲಗೆ ವಿಭಾಗದಲ್ಲಿ 9 ಜೊತೆ, ಹಗ್ಗ ಹಿರಿಯ ವಿಭಾಗದಲ್ಲಿ 19 ಜೊತೆ, ನೇಗಿಲು ಹಿರಿಯ ವಿಭಾಗದಲ್ಲಿ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಕೆಲಸ ಕೊಟ್ಟ ಮಾಲೀಕನ ಜತೆ ಲವ್ವಿಡವ್ವಿ..! ಮಂಚ ಹಂಚಿಕೊಂಡ ಬಳಿಕ ಈಕೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಬೆಂಗಳೂರಿನ ಬಟ್ಟೆ ವ್ಯಾಪಾರಿಯ ಕಣ್ಣೀರ ಕಥೆ ಇದು – ಕಹಳೆ ನ್ಯೂಸ್

ಬೆಂಗಳೂರು: ಕೆಲಸ ಕೊಟ್ಟ ಅಂಗಡಿ ಮಾಲೀಕನನ್ನೇ ಬುಟ್ಟಿಗೆ ಬೀಳಿಸಿಕೊಂಡು ಲವ್ವಿಡವ್ವಿ ಶುರು ಮಾಡಿಕೊಂಡ ಯುವತಿ, ಮಂಚಕ್ಕೂ ಆಹ್ವಾನಿಸಿದ್ದಳು. ಸಮಸ್ಯೆ ಅಂತೇಳಿ 2 ಲಕ್ಷ ಹಣವನ್ನೂ ಪೀಕಿದ್ದಳು. ಇಬ್ಬರೂ ಒಪ್ಪಿತ ದೈಹಿಕ ಸಂಪರ್ಕವನ್ನೂ ಬೆಳೆಸಿದ್ದರು. ಕೆಲಸದಾಕೆ ಸಿಕ್ಕಿದ ಖುಷಿಯಲ್ಲಿದ್ದ, ಪ್ರೀತಿ-ಪ್ರೇಮ-ಪ್ರಣಯ ಎಲ್ಲವೂ ಚೆನ್ನಾಗಿದೆ ಅಂದುಕೊಂಡಿದ್ದ ಮಾಲೀಕನಿಗೆ ಇದೀಗ ಬಾರೀ ಸಂಕಷ್ಟ ಎದುರಾಗಿದೆ. ಏನಿದು ಪ್ರಕರಣ?:ನಗರದ ಬಟ್ಟೆ ವ್ಯಾಪಾರಿಯೊಬ್ಬರು ಎರಡು ವರ್ಷಗಳ ಹಿಂದೆ ಮೈತ್ರಿ ಎಂಬಾಕೆಯನ್ನು ಅಂಗಡಿ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಕೆಲ ತಿಂಗಳ ಬಳಿಕ...
ರಾಜ್ಯಸಿನಿಮಾಸುದ್ದಿ

ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಸಿಹಿ ಸುದ್ದಿ ; ಪವರ್‌ಫುಲ್ ಪಾತ್ರದ ಮೂಲಕ ಮೋಡಿ ಮಾಡಲು ಸ್ವೀಟಿ ರೆಡಿ – ಕಹಳೆ ನ್ಯೂಸ್

`ಬಾಹುಬಲಿ’ (Bahubali) ನಟಿ ಅನುಷ್ಕಾ ಶೆಟ್ಟಿ (Anushka Shetty) ಚಿತ್ರರಂಗದಲ್ಲಿ ಮತ್ತೆ ಆಕ್ಟೀವ್‌ ಆಗಿದ್ದಾರೆ. ಸದ್ದಿಲ್ಲದೇ ಸೈಲೆಂಟ್‌ ಆಗಿ ಸಿನಿಮಾ ಮಾಡ್ತಿದ್ದಾರೆ. ಇದೀಗ ಹೊಸ ಸಿನಿಮಾಗೆ ಸ್ವೀಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಪವರ್‌ಫುಲ್ ಪಾತ್ರದ ಮೂಲಕ ಮೋಡಿ ಮಾಡಲು ರೆಡಿಯಾಗಿದ್ದಾರೆ. ಕನ್ನಡತಿ ಅನುಷ್ಕಾ ಶೆಟ್ಟಿ ಮತ್ತೆ ಸಿನಿಮಾಗಳಲ್ಲಿ ಆಕ್ಟೀವ್ ಆಗ್ತಿದ್ದಾರೆ. ಸದ್ಯ ನವೀನ್ ಪೋಲಿಶೆಟ್ಟಿ (Naveen Polishetty) ಅಭಿನಯದ ಚಿತ್ರದಲ್ಲಿ ಅನುಷ್ಕಾ ಬ್ಯುಸಿಯಾಗಿದ್ದಾರೆ. ಈ ಬೆನ್ನಲ್ಲೇ ತಮಿಳಿನ(Tamil Films) ಹೊಸ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಸುಳ್ಯದಲ್ಲಿ ಅಮಾನುಷ ಕೃತ್ಯ ; ಪತ್ನಿ ಕೊಂದು ಚೀಲದಲ್ಲಿ ತುಂಬಿಸಿ ಪತಿ ಇಮ್ರಾನ್​ ಪರಾರಿ!? ಮೃತ ಮಹಿಳೆಯ ಹೆಸರು, ಆಕೆ ಯಾವ ಧರ್ಮದವಳು ಎಂಬ ಮಾಹಿತಿ ಪೊಲೀಸರಿಗೂ ಲಭಿಸಿಲ್ಲ..! –  ಕಹಳೆ ನ್ಯೂಸ್

ಸುಳ್ಯ(ದಕ್ಷಿಣ ಕನ್ನಡ): ಪಟ್ಟಣದ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಗೋಣಿಚೀಲದಲ್ಲಿ ಪತ್ತೆಯಾಗಿದ್ದು, ಆಕೆಯ ಪತಿ ನಾಪತ್ತೆಯಾಗಿದ್ದಾನೆ. ಆತನೇ ಪತ್ನಿಯನ್ನು ಕೊಲೆಗೈದು ಚೀಲದಲ್ಲಿ ತುಂಬಿಸಿಟ್ಟಿರುವ ಸಂಶಯ ವ್ಯಕ್ತವಾಗಿದೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್​ ಎಂಬಾತ ಓಡಬಾಯಿ ಬಳಿ ಹೋಟೆಲೊಂದರಲ್ಲಿ ಆರು ತಿಂಗಳಿನಿಂದ ಕೆಲಸಕ್ಕಿದ್ದ. ಅಲ್ಲೇ ಸನಿಹದ ಬೀರಮಂಗಲದಲ್ಲಿ ಪತ್ನಿ ಜತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಎರಡು ದಿನಗಳ ಹಿಂದಷ್ಟೇ ಊರಿಗೆ ಹೋಗುತ್ತೇನೆಂದು ಇಮ್ರಾನ್​ ರಜೆ ಮಾಡಿ ತೆರಳಿದ್ದ. ಆದರೆ ಹೋಗುವಾಗ ಹೆಂಡತಿಯನ್ನು ಕರೆದುಕೊಂಡು ಹೋಗಿರಲಿಲ್ಲ...
1 201 202 203 204 205 273
Page 203 of 273