Tuesday, March 17, 2026

ರಾಜ್ಯ

ದಕ್ಷಿಣ ಕನ್ನಡಬೆಳ್ತಂಗಡಿರಾಜಕೀಯರಾಜ್ಯಸುದ್ದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣ ; ಸಿಐಡಿಗೆ ವರ್ಗಾಯಿಸಿದ ಸರ್ಕಾರ – ಕಹಳೆ ನ್ಯೂಸ್

ಮಂಗಳೂರು, ಅ 18 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು. ಇದೀಗ ತತ್‌ಕ್ಷಣದಿಂದಲೇ ಅನ್ವಯವಾಗುವಂತೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಸರ್ಕಾರ ಆದೇಶಿಸಿದೆ. ಪ್ರಸ್ತುತ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಯಲ್ಲಿರುವ ಎಲ್ಲಾ ದಾಖಲೆಗಳನ್ನು ಸಿಐಡಿ ಕಚೇರಿಗೆ ದ.ಕ. ಜಿಲ್ಲಾ ಪೊಲೀಸ್ ಅಧಿಕಾರಿಗಳು ಹಸ್ತಾಂತರ ಮಾಡಬೇಕು ಎಂದು ರಾಜ್ಯ ಡಿಜಿಪಿಯವರ ಪರವಾಗಿ...
ಬೆಂಗಳೂರುರಾಜ್ಯಸಿನಿಮಾಸುದ್ದಿ

ಕಾಂತಾರಾ ಸಿನಿಮಾಕ್ಕೆ ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಮೆಚ್ಚುಗೆ – ಕಹಳೆ ನ್ಯೂಸ್

ಬೆಂಗಳೂರು, ಅ 16: ಕನ್ನಡದ ಕಾಂತಾರ ಸಿನಿಮಾ ದೇಶದಾದ್ಯಂತ ಅದ್ದೂರಿಯಾಗಿ ಯಶಸ್ಸು ಕಂಡಿದ್ದು, ಈ ಚಿತ್ರ ನೋಡಿದವರೆಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕರಾವಳಿಯ ಬೆಡಗಿ ಟಾಲಿವುಡ್​ ನಟಿ ಅನುಷ್ಕಾ ಶೆಟ್ಟಿ ಅವರಿಗೂ ಈ ಸಿನಿಮಾ ಇಷ್ಟ ಆಗಿದ್ದು, ಇಡೀ ತಂಡಕ್ಕೆ ಅಭಿನಂದನೆ ಸಲ್ಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಮೊದಲು ಕನ್ನಡದಲ್ಲಿ ರಿಲೀಸ್​ ಆಗಿದ್ದ ಈ ಸಿನಿಮಾ ಬಳಿಕ ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿಯೂ ತೆರೆಕಂಡಿದ್ದು, ಪರಭಾಷೆಯ ನಟರು ಕೂಡ ಕಾಂತಾರ’ ನೋಡಿ ಮೆಚ್ಚಿಕೊಂಡಿದ್ದಾರೆ. https://www.facebook.com/plugins/post.php?href=https%3A%2F%2Fwww.facebook.com%2FAnushkaShetty%2Fposts%2Fpfbid034C9C6uTxhYfCBWoDZKVrDxsaWeeZ2CUyS6r2Jv9PkzutU7vzrF5Him5rJguLuNz9l&show_text=true&width=500...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಎನ್‌ಐಟಿಕೆ ಟೋಲ್‌ ತೆರವಿಗೆ ಇನ್ನೂ 15 ದಿನ ಅವಕಾಶ ಕೋರಿಕೆ ; ಸಂಸದ ನಳಿನ್‌ ಕುಮಾರ್‌ ಕಟೀಲು – ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್‌ ಎನ್‌ಐಟಿಕೆ ಬಳಿಯ ಟೋಲ್‌ಗೇಟ್‌ ತೆರವಿಗೆ ಅಧಿಕಾರಿಗಳು 15 ದಿನಗಳ ಕಾಲಾವಕಾಶ ಕೋರಿದ್ದು ಅಲ್ಲಿಯವರೆಗೆ ಕಾಯುವಂತೆ ವಿನಂತಿಸಿರುವುದಾಗಿ ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಕೂಡ ಲೋಕಸಭೆಯಲ್ಲಿ ಟೋಲ್‌ಗೇಟ್‌ ತೆರವು ಬಗ್ಗೆ ಪ್ರಸ್ತಾವ ಮಾಡಿದ್ದರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ. ತೆರವಿಗಾಗಿ ಕೆಲವು ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾಡಳಿತ ಇತ್ತೀಚೆಗೆ ಸಭೆ ನಡೆಸಿದಾಗಲೂ ಟೋಲ್‌ಗೇಟ್‌ ರದ್ದತಿಗೆ 15 ದಿನಗಳ...
ದಕ್ಷಿಣ ಕನ್ನಡರಾಜ್ಯಸುದ್ದಿ

ಮಳಲಿ ಮಸೀದಿ ವಿವಾದ : ನ 9ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ – ಕಹಳೆ ನ್ಯೂಸ್

ಮಂಗಳೂರು : ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ಸಂಬಂಧದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ನ.9ಕ್ಕೆೆ ಮುಂದೂಡಿದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‌ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು...
ಕೊಡಗುಕ್ರೈಮ್ಮಡಿಕೇರಿರಾಜ್ಯಸುದ್ದಿ

” ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು ” ಆಡಿಯೋ ವೈರಲ್ ; ಮಡಿಕೇರಿ ನಗರ ಸಭೆ ಸದಸ್ಯ ಜೆಡಿಎಸ್‍ನ ಮುಸ್ತಫಾ ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ವಶಕ್ಕೆ – ಕಹಳೆ ನ್ಯೂಸ್

ಮಡಿಕೇರಿ: ಕೊಡಗಿನಲ್ಲಿ (Kodagu) ಹಿಂದಿನಿಂದಲೂ ಒಬ್ಬರಲ್ಲಾ ಒಬ್ಬ ಉಗ್ರರು ಬಂದು ನೆಲೆಕಂಡುಕೊಂಡಿರುವುದು ನಿಮಗೆಲ್ಲರಿಗೂ ಗೊತ್ತೇ ಇದೆ. ಅಬ್ದುಲ್ ಮದನಿ ಕೂಡ ಕೊಡಗಿನ ಹೊಸತೋಟಕ್ಕೆ ಬಂದು ತಂಗಿದ್ದು ಹೊಸ ವಿಚಾರವೇನು ಅಲ್ಲ. ಆದರೆ ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ (Audio) ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ. ದೇಶದಲ್ಲಿ ಅಪಾಯಕಾರಿ ಬೆಳವಣಿಗೆಗಳು, ದೇಶ ವಿದ್ರೋಹಿ ಚಟುವಟಿಕೆಗಳು ನಡೆಯಲು ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವಸತಿ ಶಾಲೆಗಳಲ್ಲಿ RSS ಮಕ್ಕಳ ಶಿಬಿರ ಏರ್ಪಡಿಸಿದ್ರೆ ತಪ್ಪೇನು? : ಸಚಿವ ಕೋಟ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ, ರಾಷ್ಟ್ರದ ಪರವಾಗಿ ಕಲಿಕಾ ಶಿಬಿರ ಆಯೋಜನೆ ಬಯಸಿ ಆರ್​ಎಸ್‌ಎಸ್ ಅರ್ಜಿ ಸಲ್ಲಿಸಿದರೂ ಪರಿಶೀಲಿಸುತ್ತೇವೆ. ಅದರಲ್ಲಿ ತಪ್ಪೇನಿದೆ? ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಸರಾ- ಬೇಸಿಗೆ ರಜೆ ದಿನಗಳಲ್ಲಿ ಮಕ್ಕಳ ವ್ಯಕ್ತಿತ್ವ ಶಿಬಿರ ಏರ್ಪಡಿಸಲು ವಸತಿ ಶಾಲೆಗಳಲ್ಲಿ ಅವಕಾಶ ಕೋರಿ ಸಂಘ-ಸಂಸ್ಥೆಗಳು ಅರ್ಜಿ ಸಲ್ಲಿಸುವುದು ಹೊಸದೇನಲ್ಲ. ಹಾಗೆಯೇ ಮೊರಾರ್ಜಿ ದೇಸಾಯಿ ವಸತಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಡೆತ್​ನೋಟ್​ ಬರೆದಿಟ್ಟು ಗುಂಡು ಹಾರಿಸಿಕೊಂಡ ಮಹಿಳಾ ಪಿಎಸ್​ಐ ಜ್ಯೋತಿ ಭಾಯಿ ಸಿಂಗ್‌ ಪರ್ಮರ್‌..! ಸ್ಥಿತಿ ಗಂಭೀರ – ಕಹಳೆ ನ್ಯೂಸ್

ಮಂಗಳೂರು: ಕರ್ತವ್ಯನಿರತ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಬುಧವಾರ (ಅ.12) ರಂದು ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಮಹಿಳಾ ಪೇದೆಯಾಗಿ ಕರ್ತವ್ಯ ನಿಭಾಯಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್‌ ಪರ್ಮರ್‌ (33) ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್‌ನಲ್ಲಿ ಕರ್ತವ್ಯನಿರತರಾಗಿದ್ದಾಗ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿದ್ದಾರೆ. ಜ್ಯೋತಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ...
ರಾಜ್ಯಸುದ್ದಿ

ಮೊದಲ ಹೆಂಡತಿಯನ್ನು ಚೆನ್ನಾಗಿ ಬಾಳಿಸದ ಮುಸ್ಲಿಂ ವ್ಯಕ್ತಿ ಎರಡನೇ ಮದುವೆ ಆಗುವಂತಿಲ್ಲ, ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ – ಕಹಳೆ ನ್ಯೂಸ್

ಮುಸ್ಲಿಂ ಪುರುಷನಿಗೆ ತನ್ನ ಹೆಂಡತಿ ಮತ್ತು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ, ಕುರಾನ್ ನಿಯಮಗಳ ಪ್ರಕಾರವೇ ಆತ ಎರಡನೇ ಮದುವೆಯಾಗಲು ಅವಕಾಶವಿಲ್ಲ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಜೊತೆಗೆ ಮೊದಲ ಪತ್ನಿಯ ಇಚ್ಛೆಯನ್ನು ಧಿಕ್ಕರಿಸಿ ಮತ್ತೊಂದು ವಿವಾಹವಾಗಿರುವ ವ್ಯಕ್ತಿ ಮೊದಲ ಪತ್ನಿ ಬಲವಂತವಾಗಿ ತನ್ನೊಂದಿಗೆ ಇರುಬೇಕೆಂದು ಒತ್ತಾಯಿಸುವಂತಿಲ್ಲ ಎಂದು ಹೇಳಿದೆ. ಮುಸ್ಲಿಮ್ ಪುರುಷನು ತನ್ನ ಹೆಂಡತಿ ಮತ್ತು ಮಕ್ಕಳನ್ನು ಪೋಷಿಸುವ ಸಾಮರ್ಥ್ಯ ಹೊಂದಿಲ್ಲದಿದ್ದರೆ, ಅತನಿಗೆ ಇತರ ಮಹಿಳೆಯರನ್ನು ಮದುವೆಯಾಗುವ...
1 206 207 208 209 210 273
Page 208 of 273