ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿದ್ಧ ಎಂದ ಬಿ.ವೈ. ವಿಜಯೇಂದ್ರ – ಕಹಳೆ ನ್ಯೂಸ್
ಲಕ್ಷ್ಮೇಶ್ವರ : ಪಕ್ಷ ನೀಡಿರುವ ಉಪಾಧ್ಯಕ್ಷ ಸ್ಥಾನವನ್ನು ಸಂತೋಷದಿಂದಲೇ ನಿರ್ವಹಿಸುತ್ತಿದ್ದೇನೆ. ಒಂದು ವೇಳೆ ರಾಜ್ಯಾಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ತಾಲೂಕಿನ ಮುಕ್ತಿಮಂದಿರ ಧರ್ಮಕ್ಷೇತ್ರಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಎಸ್ವೈ ಯಾವುದೇ ಉನ್ನತ ಸ್ಥಾನ ಸಿಗುತ್ತದೆಯೆಂಬ ನಿರೀಕ್ಷೆಯಲ್ಲಿರಲಿಲ್ಲ. ಇದನ್ನು ಉನ್ನತ ಸ್ಥಾನ ಎನ್ನುವುದಕ್ಕಿಂತ, ದೊಡ್ಡ ಜವಾಬ್ದಾರಿ ಎನ್ನುವುದು ಸೂಕ್ತ. ಅವರ ಮೂಲಕ ನನಗೆ ರಾಜ್ಯಾಧ್ಯಕ್ಷ...






