ಪ್ರವೀಣ್ನನ್ನ ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು : ಸ್ಫೋಟಕ ಅಂಶ ಬಿಚ್ಚಿಟ್ಟ ಆರಗ ಜ್ಞಾನೇಂದ್ರ – ಕಹಳೆ ನ್ಯೂಸ್
ಶಿವಮೊಗ್ಗ, (ಆಗಸ್ಟ್.06): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರು ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ( ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಕೇರಳದವರಲ್ಲ. ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ...







