Saturday, March 14, 2026

ರಾಜ್ಯ

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪ್ರವೀಣ್‌ನನ್ನ ಕೊಲೆ ಮಾಡಿದವರು ಕೇರಳದವರಲ್ಲ, ಸ್ಥಳೀಯರು : ಸ್ಫೋಟಕ ಅಂಶ ಬಿಚ್ಚಿಟ್ಟ ಆರಗ ಜ್ಞಾನೇಂದ್ರ – ಕಹಳೆ ‌ನ್ಯೂಸ್

ಶಿವಮೊಗ್ಗ, (ಆಗಸ್ಟ್.06): ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರನ್ನು ಹತ್ಯೆ ಮಾಡಿದವರು ದಕ್ಷಿಣ ಕನ್ನಡ ಜಿಲ್ಲೆಯವರೇ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಫೋಟಕ ಅಂಶವನ್ನು ಬಿಚ್ಚಿಟ್ಟಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ( ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆಯ ಹಂತಕರು ಕೇರಳದವರಲ್ಲ. ಸ್ಥಳೀಯರೇ ಆಗಿದ್ದಾರೆ. ಇವರ ಹಿನ್ನೆಲೆ ಏನು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಅಷ್ಟೇ ಅಲ್ಲದೇ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದ ಉಪ್ಪಿನಂಗಡಿ ಪೋಲೀಸ್ ಠಾಣೆ ಎಸ್.ಐ. ಕುಮಾರ್ ಕಾಂಬ್ಳೆ ವರ್ಗಾವಣೆ ; ಪುತ್ತೂರಿನ ‘ಸಿಂಗಂ’ ರಾಜೇಶ್ ಕೆ.ವಿ. ಉಪ್ಪಿನಂಗಡಿ ನೂತನ ಠಾಣಾಧಿಕಾರಿ – ಶ್ರೀಕಾಂತ್ ರಾಠೋಡ್ ಪುತ್ತೂರು ನಗರ ಠಾಣೆಗೆ ವರ್ಗಾವಣೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಉಪ್ಪಿನಂಗಡಿಯಲ್ಲಿ ಮೃದುಧೋರಣೆಗಳ ಮೂಲಕ ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿದ್ದ ಉಪ್ಪಿನಂಗಡಿ ಪೋಲೀಸ್ ಠಾಣೆ ಎಸ್.ಐ. ಕುಮಾರ್ ಕಾಂಬ್ಳೆ ವರ್ಗಾವಣೆ ಮಾಡಿ ಪೋಲೀಸ್ ಮಹಾನಿರ್ದೇಶಕ ದಿವ್ಯಜೋತಿ ರೇ ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಪುತ್ತೂರು ನಗರ ಪೋಲೀಸ್ ಠಾಣಾಧಿಕಾರಿ ರಾಜೇಶ್ ಕೆ.ವಿ. ಉಪ್ಪಿನಂಗಡಿ ನೂತನ ಠಾಣಾಧಿಕಾರಿ ನೇಮಕಮಾಡಲಾಗಿದೆ. ಕಡಬ ಎಸ್.ಐ. ಶ್ರೀಕಾಂತ್ ರಾಠೋಡ್ ಪುತ್ತೂರು ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದೆ....
ಕ್ರೈಮ್ಪುತ್ತೂರುರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 10 ದಿನ ಕಳೆದರೂ ಹಂತಕರ ಪತ್ತೆಯಿಲ್ಲ..  ಉಪ್ಪಳ ಸೋಂಕಾಲು ನಿವಾಸಿ ವಶಕ್ಕೆ..! ಸಾಕ್ಷ್ಯದ ಸವಾಲು? – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆಯಾಗಿ 10 ದಿನ ಕಳೆದರೂ ಹಂತಕರ ಪತ್ತೆ ಇನ್ನೂ ಆಗಿಲ್ಲ. ಕೃತ್ಯಕ್ಕೆ ಸಹಕರಿಸಿದ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಲಾಗುತ್ತಿದೆ. ಆದರೆ ಕೃತ್ಯ ಎಸಗಿರುವ ಮೂವರ ಬಂಧನವಾಗಿಲ್ಲ. ಹಂತಕರು ಕೇರಳ ಮೂಲದವರು ಎಂಬ ಸುಳಿವು ಸಿಕ್ಕಿದ್ದು ಕೇರಳವನ್ನು ಕೇಂದ್ರೀಕರಿಸಿ ತನಿಖೆ ನಡೆಯುತ್ತಿದೆ. ಆದರೆ ನಿರೀಕ್ಷಿತ ಪ್ರಗತಿ ಕಂಡಿಲ್ಲ. ಸಾಕ್ಷ್ಯದ ಸವಾಲು? : ಕೃತ್ಯ ಎಸಗಿದವರು...
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಮೇಘಸ್ಫೋಟಕ್ಕೆ ಸುಳ್ಯದ 4 ಗ್ರಾಮಗಳು ತತ್ತರ ; ರಾತ್ರಿ ಇದ್ದ ಅಂಗಡಿ ಬೆಳಗ್ಗೆ ಮಾಯ! – ಕಹಳೆ ನ್ಯೂಸ್

ಸುಳ್ಯ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದ್ದು, ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆಂದೂ ನೋಡಿರದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಜನ ಈ ಬಾರಿಯ ಮಳೆಗೆ ತತ್ತರಿಸಿ ಹೋಗಿದ್ದಾರೆ. ಹೌದು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4 ಗ್ರಾಮಗಳ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ.  ಹರಿಹರದ ಭೀಕರ ಪ್ರವಾಹಕ್ಕೆ ಹೊಳೆ ಪಕ್ಕದಲ್ಲಿದ್ದ ಅಂಗಡಿ ಹಾಗೂ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಉಳ್ಳಾಲ ತಲವಾರು ದಾಳಿ ” ಯಾರೂ ತನ್ನ ಮೇಲೆ ತಲವಾರು ದಾಳಿ ಮಾಡಿಲ್ಲ, ಬೆನ್ನಟ್ಟಿ ಬಂದಿಲ್ಲ” – ವದಂತಿ ಹಬ್ಬಿಸಿದ ವ್ಯಕ್ತಿ ವಿರುದ್ಧ ಕ್ರಮ : ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ – ಕಹಳೆ ನ್ಯೂಸ್

ಮಂಗಳೂರು, ಆ.3: ವ್ಯಕ್ತಿಯೋರ್ವ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಉಚ್ಚಿಲ ನಿವಾಸಿ ಕಿಶೋರ್ ವದಂತಿ ಹಬ್ಬಿಸಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಬೆನ್ನಟ್ಟಿ ತಲವಾರು ದಾಳಿ...
ದಕ್ಷಿಣ ಕನ್ನಡರಾಜ್ಯಸುದ್ದಿ

Praveen Nettar : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಬೆಂಗಳೂರಿನ ಇಬ್ಬರು ಸೇರಿ ಒಟ್ಟು 40 ಮಂದಿ ವಶಕ್ಕೆ, ಕರಾವಳಿಗೆ ಡಿಜಿಪಿ ಪ್ರವೀಣ್ ಸೂದ್ – ಕಹಳೆ ನ್ಯೂಸ್

ಮಂಗಳೂರು: ಸುಳ್ಯ ತಾಲ್ಲೂಕು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಇಬ್ಬರು ಸೇರಿದಂತೆ ಒಟ್ಟು 40 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಸ್ತುವಾಹನಗಳನ್ನು ಹೆಚ್ಚಿಸುವಂತೆ ಸೂಚನೆ ನೀಡಿರುವ ಅವರು, ನಾಗರಿಕರು ಸಹ ಪೊಲೀಸರಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಕೋರಿದ್ದಾರೆ. ಸರಣಿ ಕೊಲೆಗಳ ತನಿಖೆಯು ಉತ್ತಮ ರೀತಿಯಲ್ಲಿ ನಡೆಯುತ್ತಿದೆ. ಮಸೂದ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳ ಪೈಕಿ ಪ್ರಮುಖರು ಸಿಕ್ಕಿದ್ದಾರೆ. ಉಳಿದವರನನ್ನು ಶೀಘ್ರ ಬಂಧಿಸುತ್ತೇವೆ. ಫಾಜಿಲ್...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಹತ್ಯೆಯಾದ ಸುರತ್ಕಲ್ ನ ಫಾಝಿಲ್, ಬೆಳ್ಳಾರೆಯ ಮಸೂದ್ ಮನೆಗೂ ಮುಂದಿನ ದಿನಗಳಲ್ಲಿ ಭೇಟಿ ಕೊಡುತ್ತೇನೆ’ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಆ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹತ್ಯೆಯಾದ ಪ್ರವೀಣ್ ನೆಟ್ಟರ್ ಮನೆಗೆ ಭೇಟಿ ನೀಡಿ ಮಸೂದ್ ಹಾಗೂ ಫಾಝೀಲ್ ಮನೆಗೆ ಮುಖ್ಯಮಂತ್ರಿ ಭೇಟಿ ಕೊಡದ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದ್ದು, ಮುಂದಿನ ದಿನಗಳಲ್ಲಿ ಅವರಿಬ್ಬರ ಮನೆಗೆ ಭೇಟಿ ನೀಡುತ್ತೇನೆ ಎಂದರು.ಇನ್ನು ಪ್ರವೀಣ್ ನೆಟ್ಡಾರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಇಂದು ಪುತ್ತೂರಿಗೆ ಎನ್‌ಐಎ ತಂಡ |
ಕೇರಳಕ್ಕೆ ವಿಸ್ತರಿಸಿದ ಪ್ರವೀಣ್ ನೆಟ್ಟಾರು ಹತ್ಯಾ ತನಿಖೆ ತಲಶ್ಶೇರಿಯಲ್ಲಿ ಕರ್ನಾಟಕ ಪೊಲೀಸರ ಕಾರ್ಯಾಚರಣೆ – ಓರ್ವ ವಶಕ್ಕೆ ; ವಿಧಿವಿಜ್ಞಾನ ಪ್ರಯೋಗಾಲಯದ ಮೊರೆ ಹೋದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು : ಹಿಂದು ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಪ್ರಕರಣವನ್ನು ರಾಜ್ಯ ಸರ್ಕಾರ ಗಂಭಿರವಾಗಿ ಪರಿಗಣಿಸಿ ಎನ್‌ಐಎಗೆ ವಹಿಸಿದ್ದು, ಭಾನುವಾರ ಎನ್‌ಐಎ ತಂಡದ ಪುತ್ತೂರಿಗೆ ಆಗಮಿಸುವ ಮಾಹಿತಿ ಲಭ್ಯವಾಗಿದೆ. ಪುತ್ತೂರು ಸುಳ್ಯ ಹಾಗೂ ಬೆಳ್ಳಾರೆ ಪ್ರದೇಶಕ್ಕೆ ಎನ್‌ಐಎ ತಂಡ ಬೇಡಿ ನೀಡುವ ಸಾಧ್ಯತೆ ಇದೆ. ಜತೆಗೆ ಹತ್ಯೆಪ್ರಕರಣದ ಮಾಹಿತಿ ಕಲೆ ಹಾಕಲು ರಾಜ್ಯ ಗುಪ್ತ ವಾರ್ತೆ ವಿಭಾಗದ ಒಂದು ತಂಡ ಜಿಲ್ಲೆಗೆ ಆಗಮಿಸಿದ್ದು, 3 ದಿನದಿಂದ ಬೆಳ್ಳಾರೆ ಹಾಗೂ ಗಡಿನಾಡು ಪ್ರದೇಶದಲ್ಲಿ...
1 215 216 217 218 219 273
Page 217 of 273