ಕೊರಗಜ್ಜನ ವೇಷ ಧರಿಸಿ ಬಂದ ಮುಸ್ಲಿಂ ವರ ; ಹಿಂದೂ ಜಾಗರಣ ವೇದಿಕೆಯಿಂದ ದೂರು, FIR ದಾಖಲು – ಕಹಳೆ ನ್ಯೂಸ್
ವಿಟ್ಲ: ತುಳುನಾಡಿನ ಕಾರ್ನಿಕದ ದೈವವಾದ ಕೊರಗಜ್ಜನ ವೇಷ ಭೂಷಣ ಧರಿಸಿ ವರ ಆಗಮಿಸಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರಿನಲ್ಲಿ ನಡೆದಿದೆ. ಕೊರಗಜ್ಜನ ವೇಷ ಭೂಷಣ ಧರಿಸಿ ತಲೆಗೆ ಅಡಿಕೆ ಹಾಳೆಯ ಟೋಪಿ ಹಾಕಿ ಮುಖಕ್ಕೆ ಮಸಿ ಬಳಿದುಕೊಂಡ ಬಂದ ವರನ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದ್ದು, ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ಈ ಕೃತ್ಯವೆಸಗಿದವರ ಮತ್ತು ಆತನ ಸಂಗಡಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು...







