Sunday, March 8, 2026

ರಾಜ್ಯ

ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ ; ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ವರುಣನ ಆರ್ಭಟ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ನಿರ್ದೇಶಕ ಚನ್ನಬಸವನಗೌಡ.ಎಸ್.ಪಾಟೀಲ್ ಮಾಹಿತಿ ನೀಡಿದ್ದಾರೆ. ಮಳೆಯ ತೀವ್ರತೆಯ ಮುನ್ಸೂಚನೆ ನೀಡಿದ ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಕೊಡುಗು ಜಿಲ್ಲೆಗಳಲ್ಲೂ ಭಾರೀ...
ಬೆಂಗಳೂರುರಾಜ್ಯಸುದ್ದಿ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು, ಆ 09 : ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಬೋರಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ.   ಕೊರೊನಾ ದೃಢಪಟ್ಟಿರುವ ಬಗ್ಗೆ ಟ್ವೀಟ್‌ ಮೂಲಕ ತಿಳಿಸಿರುವ ಅವರು, ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ...
ರಾಜಕೀಯರಾಜ್ಯಸುದ್ದಿ

ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡ್ತೀವಿ, ತಾಕತ್ತಿದ್ದರೆ ಬಂಧಿಸಿ : ಸಿಎಂ ಬಿಎಸ್‌ವೈಗೆ ಮುತಾಲಿಕ್ ಓಪನ್ ಚಾಲೆಂಜ್..! – ಕಹಳೆ ನ್ಯೂಸ್

ವಿಜಯಪುರ: ಸಾರ್ವಜನಿಕ‌ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ. ಆದ್ರೆ, ನಾವು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಓಪನ್‌ ಚಾಲೆಂಜ್ ಮಾಡಿದ್ದಾರೆ. ಗಣೇಶ ಹಬ್ಬಕ್ಕೆ ಸರ್ಕಾರ ಸಾಕಷ್ಟು ಮಾರ್ಗಸೂಚಿಗಳನ್ನು ನೀಡಿದ್ದು, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು, ಸಾರ್ವಜನಿಕ‌ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ ಎಂದು...
ಕೊಡಗುಮಡಿಕೇರಿರಾಜ್ಯಸುದ್ದಿ

ಕೊಡಗಿನಲ್ಲಿ ಧಾರಾಕಾರ ಮಳೆ ; ಇದೂವರೆಗೆ 52 ಪ್ರದೇಶಗಳಲ್ಲಿ ಪ್ರವಾಹ – 14 ಪ್ರದೇಶದಲ್ಲಿ ಭೂಕುಸಿತ – ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇದೂವರೆಗೆ ಜಿಲ್ಲೆಯ 52 ಪ್ರದೇಶಗಳಲ್ಲಿ ಪ್ರವಾಹ, 14 ಪ್ರದೇಶಗಳಲ್ಲಿ ಭೂಕುಸಿತವಾಗಿದೆ. 591 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. 9 ಪರಿಹಾರ ಕೇಂದ್ರಗಳಿಗೆ 591 ಜನರ ಸ್ಥಳಾಂತರ ಮಾಡಲಾಗಿದೆ. ಪ್ರವಾಹ ಭೂಕುಸಿತದಿಂದಾಗಿ 8 ಕಡೆ ರಸ್ತೆ ಸಂಚಾರ ಕಡಿತಗೊಂಡಿದೆ ಎಂದು ಜಿಲ್ಲಾಡಳಿತದಿಂದ ಅಧಿಕೃತ ಮಾಹಿತಿ ಹೊರಬಿದ್ದಿದೆ. ವಿರಾಜಪೇಟೆ ತಾಲೂಕಿನಲ್ಲಿರುವ ಅರಮೇರಿ ಕಳಂಚೇರಿ ಮಠ ಕಳೆದ ಬಾರಿಯೂ ಪ್ರವಾಹದಲ್ಲಿ ಮುಳುಗಿತ್ತು. ಸದ್ಯ ಜಿಲ್ಲೆಯಲ್ಲಿ...
ರಾಜ್ಯಶಿಕ್ಷಣ

Breaking News : ಆ.10ರಂದು SSLC ಫಲಿತಾಂಶ ಪ್ರಕಟ ; ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ರಾಜ್ಯದ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಆಗಸ್ಟ್ 10ರಂದು ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಾಸಕ‌ ಹರೀಶ್ ಪೂಂಜಗೆ ಕೊರೊನಾ ಪಾಸಿಟಿವ್ ; ಸಿ.ಎಂ. ಯಡಿಯೂರಪ್ಪರನ್ನು ಭೇಟಿಯಾಗಿದ್ದೇ ಮುಳುವಾಯಿತಾ ‘ಶ್ರಮಿಕ’ನಿಗೆ..? – ಕಹಳೆ ನ್ಯೂಸ್

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜಾಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇತ್ತೀಚೆಗಷ್ಟೇ ಸಿ.ಎಂ. ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಕಂಡು ಬಂದಿದ್ದು, ಸಿ.ಎಂ. ಅವರ ವರದಿ ಬರುವ ಕೆಲ ದಿನಗಳ ಹಿಂದೆಯಷ್ಟೇ ಹರೀಶ್ ಪೂಂಜಾ ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಇದೀಗ ಪೂಂಜಾಗೂ ಸೋಂಕು ದೃಢಪಟ್ಟಿದ್ದು, ಸಿ.ಎಂ. ಭೇಟಿಯೇ ಮುಳುವಾಯಿತೇ ಎಂಬ ಮಾತುಗಳು ಕೇಳಿಬರುತ್ತಿದೆ....
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ‘ಮನೆಯಲ್ಲಿಯೇ ರಾಮನ ಪೂಜೆ ಮಾಡಿ, ಪಟಾಕಿ ಸಿಡಿಸದಿರಿ, ಸಂಭ್ರಮಾಚರಣೆ ಬೇಡ’ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮನವಿ – ಕಹಳೆ ನ್ಯೂಸ್

ಮಂಗಳೂರು, ಆ. 04  : ''ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು ಮಾಡಬೇಡಿ. ಅಯೋಧ್ಯೆಯಂತಹ ಸೂಕ್ಷ್ಮ ವಿಚಾರದಲ್ಲಿ ಯಾರ ಭಾವನೆಗೂ ಧಕ್ಕೆ ಉಂಟಾಗಬಾರದು'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಬಿಜೆಪಿ ಕಾರ್ಯಕರ್ತರಿಗೆ ತಿಳಿಸಿದ್ದಾರೆ.   ''ಎಲ್ಲಾ ಕಾರ್ಯಕರ್ತರು ಜವಾಬ್ದಾರಿಯಿಂದ ವರ್ತಿಸಬೇಕು. ಗುಂಪು ಸೇರಿ ಸಂಭ್ರಮಾಚರಣೆ ಮಾಡಬೇಡಿ, ಪ್ರತಿ...
ಕಾಸರಗೋಡುದಕ್ಷಿಣ ಕನ್ನಡರಾಜ್ಯಸುದ್ದಿ

ಕಾಸರಗೋಡು – ದಕ್ಷಿಣ ಕನ್ನಡ ಜಿಲ್ಲೆ : ನಿಬಂಧನೆಗಳೊಂದಿಗೆ ಸಂಚಾರ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್ – ಕಹಳೆ ನ್ಯೂಸ್

ಕಾಸರಗೋಡು, ಆ. 03 : ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಗಡಿ ತೆರವಿಗೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲಾಡಳಿತ ಹಾಗೂ ಕಾಸರಗೋಡು ಉಸ್ತುವಾರಿ ಸಚಿವರ ಸಭೆ ಇಂದು ನಡೆದಿದ್ದು ಈ ಹಿಂದೆ ಇದ್ದ ದೈನಂದಿನ ಪಾಸ್‌ನ್ನು ಕೆಲವೊಂದು ನಿಬಂಧನೆಗಳೊಂದಿಗೆ ಪುನರ್‌ ಆರಂಭ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.   ಗಡಿ ಜಿಲ್ಲೆಗಳ ನಡುವೆ ಸಂಚಾರ ಮಾಡುವವರು ಏಳು ದಿನಕ್ಕೊಮ್ಮೆ ಕೋವಿಡ್ ತಪಾಸಣೆಗೆ ಒಳಗಾಗಬೇಕಾಗಿದ್ದು ವಿವಾಹ, ಮರಣ ಮೊದಲಾದ ಕಾರ್ಯಕ್ರಮಗಳಿಗೆ ಅಂತಾರಾಜ್ಯ ಸಂಚಾರಕ್ಕೆ ನಿಬಂಧನೆಗಳೊಂದಿಗೆ...
1 264 265 266 267 268 271
Page 266 of 271