Saturday, June 13, 2026

ರಾಜ್ಯ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ ಪ್ರಾರಂಭ ; ವಿದ್ಯಾರ್ಥಿಗಳಿಗೆ ಪ್ರತಿ ದಿನ 45 ನಿಮಿಷಗಳ 4 ತರಗತಿಗಳು – ಕಹಳೆ ನ್ಯೂಸ್

ಬೆಂಗಳೂರು, ಜು 22 : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌‌‌ ಮುಖಾಂತರ ಪ್ರೀ ರೆಕಾರ್ಡೆಡ್‌‌‌‌ ವಿಡಿಯೋ ತರಗಳು ಪ್ರಾರಂಭವಾಗಲಿವೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌‌‌, ಲ್ಯಾಪ್‌ಟಾಪ್‌‌‌‌ ಅಥವಾ ಇಂಟರ್‌ನೆಟ್‌‌ ಇರದೇ ಇದ್ದಲ್ಲಿ, ಕಾಲೇಜು ಆರಂಭವಾದ ಸಂದರ್ಭ ಇದೇ ಪಾಠಗಳನ್ನು ಉಪನ್ಯಾಸಕರು ಮತ್ತೊಮ್ಮೆ ಬೋಧನೆ ಮಾಡಲಿದ್ದಾರೆ ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕಂಗವಲ್ಲಿ ಹೇಳಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಸದ್ಯಕ್ಕೆ ಕಾಲೇಜು ಪ್ರಾರಂಭವಾಗುವ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು. 30, 31ರಂದು ಸಿಇಟಿ ಪರೀಕ್ಷೆ ; ಪಿಜಿಸಿಇಟಿ, ಡಿಪ್ಲೊಮಾ ಸಿಇಟಿ ಪರೀಕ್ಷೆ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು, ಜು 22 : ಸಿಇಟಿ ಪರೀಕ್ಷೆಯ ಜು 30, 31ರಂದು ನಡೆಯಲಿದ್ದು, 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಡಿಸಿಎಂ ಅಶ್ವತ್ಥ್‌‌ ನಾರಾಯಣ ಹೇಳಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯ ಎರಡು ದಿನಗಳ ಮೊದಲೇ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್‌‌ ಮಾಡಲಾಗುತ್ತದೆ. ಅಲ್ಲದೇ, ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನಿಂಗ್‌‌‌‌‌‌‌‌‌‌‌‌‌, ಮಾಸ್ಕ್‌‌‌‌ ಸೇರಿದಂತೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ. ಪರೀಕ್ಷೆಯು ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ನಡೆಯಲಿದ್ದು, ಎಸ್‌‌‌ಒಪಿ ತಂಡಗಳನ್ನು ಈಗಾಗಾಲೇ ರಚನೆ ಮಾಡಲಾಗಿದೆ....
ಕ್ರೈಮ್ರಾಜ್ಯ

ರಾತ್ರಿ ಸರಸದ ವೇಳೆಯಲ್ಲೇ ಸಿಕ್ಕಿಬಿದ್ದ ಮಹಿಳೆ: ಮಗ, ತಂದೆಯಿಂದಲೇ ಘೋರ ಕೃತ್ಯ- ಕಹಳೆ ನ್ಯೂಸ್

ಅಕ್ರಮ ಸಂಬಂಧ ಆರೋಪದ ಹಿನ್ನೆಯಲ್ಲಿ ಇಬ್ಬರನ್ನು ಹತ್ಯೆ ಮಾಡಿದ ಘಟನೆ ವಿಜಯಪುರ ತಾಲ್ಲೂಕಿನ ಅಲಿಯಾಬಾದ್ ನಲ್ಲಿ ನಡೆದಿದೆ. ವಿವಾಹಿತ ಮಹಿಳೆಯೊಂದಿಗೆ ಯುವಕ ಅಕ್ರಮ ಸಂಬಂಧ ಹೊಂದಿದ್ದು, ಕೊಡಲಿಯಿಂದ ಕೊಚ್ಚಿ ಯುವಕ ಹಾಗೂ ಮಹಿಳೆಯನ್ನು ಹತ್ಯೆ ಮಾಡಲಾಗಿದೆ. ಮಹಿಳೆಯ ಮಗ, ತಂದೆ ಸೇರಿ ಕೊಲೆ ಮಾಡಿದ್ದಾರೆ. ಇಬ್ಬರು ಕೊಲೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಜಯಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮಹಿಳೆಯ ಪತಿ ಮೃತಪಟ್ಟಿದ್ದು, ನಂತರದಲ್ಲಿ ಆಕೆ ಯುವಕನೊಂದಿಗೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 3,649 ಮಂದಿಗೆ ಕೊರೊನಾ ಪಾಸಿಟಿವ್ ; ಕೊರೊನಾ ಸೋಂಕಿನಿಂದ ಇಂದು 61 ಜನ ಸಾವು – ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ನಾಳೆಯಿಂದ ರಾಜ್ಯಾದ್ಯಂತ ಲಾಕ್ ಡೌನ್ ಸಡಿಲಿಕೆಯಾಗುತ್ತಿರುವ ಸಂದರ್ಭದಲ್ಲೇ ರಾಜ್ಯದಲ್ಲಿ ಇಂದು ಕೊರೊನಾ ಅರ್ಭಟ ಮುಂದುವರೆದಿದ್ದು, ಹೊಸದಾಗಿ 3,649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ.ಒಂದೇ ದಿನ 61 ಮಂದಿ ಕೊರೊನಾಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,464ಕ್ಕೆ ಏರಿಕೆಯಾಗಿದೆ. ಎಂದಿನಂತೆ ರಾಜಧಾನಿ ಬೆಂಗಳೂರು ಹೊಸ ಸೋಂಕಿತರ ಸಂಖ್ಯೆಯಲ್ಲಿ ಮೊದಲ ಸ್ಥಾನದಲ್ಲಿದೆ. 1,714 ಪ್ರಕರಣಗಳು ರಾಜಧಾನಿ ಬೆಂಗಳೂರಿನಲ್ಲಿಪತ್ತೆಯಾಗಿವೆ. ಒಂದೇ ದಿನ 1664...
ರಾಜ್ಯಸುದ್ದಿಹಾಸನ

ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ; ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ – ಕಹಳೆ ನ್ಯೂಸ್

ಹಾಸನ: ಆಸ್ವೀಜ ಮಾಸ, ಕಾರ್ತಿಕ ಮಾಸದಲ್ಲಿ ಕೊರೊನಾ ಹೆಚ್ಚಾಗಲಿದ್ದು ಹಳ್ಳಿಗಳಲ್ಲಿ ಕೊರೊನಾ ಮರಣ ಮೃದಂಗ ಭಾರಿಸಲಿದೆ ಎಂದು ಕೋಡಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೋಡಿಮಠದಲ್ಲಿ ಮಾತನಾಡಿದ ಶ್ರೀ ಶಿವಾನಂದ ಶಿವಾಚಾರ್ಯ ರಾಜೇಂದ್ರ ಸ್ವಾಮೀಜಿ, ಹಳ್ಳಿಗಳ ಜನರು ಎಚ್ಚರದಿಂದ ಇರಬೇಕು. ಜನರು ಸರ್ಕಾರದ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು. ಸ್ವಚ್ಛತೆ, ಸಾಮಾಜಿಕ ಅಂತರದ ಕಡೆ ಗಮನ ಕೊಡಬೇಕು. ಇನ್ನೂ ಕೆಲ ತಿಂಗಳು ಕೊರೊನಾ...
ಬಳ್ಳಾರಿರಾಜ್ಯಸುದ್ದಿ

ಹೋಂ ಕ್ವಾರಂಟೈನ್ ಆದ ಬಳ್ಳಾರಿ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಬಳ್ಳಾರಿ: ತಮ್ಮ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದ್ದರಿಂದ ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್ ನಕುಲ್ ಇದೀಗ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಹೌದು. ಎಸ್.ಎಸ್ ನಕುಲ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಒಬ್ಬರಲ್ಲಿ ಕರೋನಾ ಸೋಂಕು ಇರುವುದು ದೃಢವಾಗಿದೆ. ಬಳ್ಳಾರಿಯ ಅನಂತಪುರ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಜಿಲ್ಲಾಧಿಕಾರಿ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ. ಡಿಸಿಯವರ ನಿವಾಸದ ಎದುರು ಅಧಿಕಾರಿಗಳು ಹೋಂ ಕ್ವಾರಂಟೈನ್ ಬೋರ್ಡ್ ಹಾಕಿದ್ದಾರೆ. ಮಂಗಳವಾರದಿಂದ ಶನಿವಾರದವರೆಗೆ ಹೋಂ ಕ್ವಾರಂಟೈನ್‍ನಲ್ಲಿ ಇರಲಿದ್ದು, ಮನೆಯಿಂದಲೇ ಕೆಲಸ...
ಬೆಂಗಳೂರುರಾಜ್ಯಸುದ್ದಿ

ಕೊರೊನಾ ಟೆಸ್ಟ್ ದರ ಇಳಿಕೆ – ಪರೀಕ್ಷೆಗೆ, ಪಿಪಿಇ ಕಿಟ್‌‌ಗೆ ದರ ವಿಧಿಸುವಂತಿಲ್ಲ ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು, ಜು 21 : ಖಾಸಗಿ ಆಸ್ಪತ್ರೆಯಲ್ಲಿ ಈ ಹಿಂದೆ ಕೊರೊನಾ ಪರೀಕ್ಷೆಗಾಗಿ 4500 ರೂ. ಶುಲ್ಕ ಪಡೆದುಕೊಳ್ಳುತ್ತಿದ್ದರು. ಆದರೆ, ಅದನ್ನು ಈಗ 3 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ 2 ಸಾವಿರ ರೂ ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್‌‌‌‌‌‌‌‌‌ ಹೇಳಿದರು. ಕೊರೊನಾ ಟಾಸ್ಕ್‌ ಫೋರ್ಸ್‌ ನಂತರ ಮಾತನಾಡಿದ ಅವರು, ಕೊರೊನಾ ಪರೀಕ್ಷೆಯನ್ನು ಸರ್ಕಾರ ನಿಗಿದಿ ಮಾಡಿದ್ದು, ಸರ್ಕಾರ ಸೂಚಿಸಿದ ರೋಗಿಗಳಿಗೆ...
ಆರೋಗ್ಯರಾಜ್ಯಸುದ್ದಿ

ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ಸಿಹಿ ಸುದ್ದಿ ; ವೇತನ ಹೆಚ್ಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು, ಜು. 21 : ಕೊರೊನಾ ವಾರಿಯರ್ಸ್ ಆಗಿ ಮುಂಚೂಣಿಯಲ್ಲಿ ದುಡಿಯುತ್ತಿರುವ ವೈದ್ಯರು ಹಾಗೂ ನರ್ಸ್‌ಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯನ್ನು ನೀಡಿದ್ದು ಆಯುಷ್ ಮತ್ತು ಯುನಾನಿ ವೈದ್ಯರ ಹಾಗೂ ನರ್ಸ್‌ಗಳ ತಿಂಗಳ ವೇತನವನ್ನು ಹೆಚ್ಚಳ ಮಾಡಿದೆ.   ಈ ಬಗ್ಗೆ ಮಾಹಿತಿ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು, ''ಆಯುಷ್ ಮತ್ತು ಯುನಾನಿ ವೈದ್ಯರ ತಿಂಗಳ ಸಂಬಳವನ್ನು 25 ಸಾವಿರದಿಂದ 48,000ಕ್ಕೆ ಏರಿಸಿದ್ದು 6 ತಿಂಗಳ ಕಾಲ ಕರ್ನಾಟಕದ...
1 296 297 298 299
Page 298 of 299