Recent Posts

Tuesday, September 8, 2026

ರಾಜ್ಯ

ರಾಜ್ಯಸುದ್ದಿ

ಬ್ರೇಕಪ್‌ಗೆ ನಿರ್ಧರಿಸಿದ್ದಕ್ಕೆ ಕೊಲೆ ಶಂಕೆ – ಪ್ರಿಯತಮೆ ಸಾವು, ಭಾರತೀಯ ಮೂಲದ ಪ್ರಿಯಕರ ಅರೆಸ್ಟ್ -ಕಹಳೆ ನ್ಯೂಸ್

ವಾಷಿಂಗ್ಟನ್: ಅಮೆರಿಕದ  ಅರಿಝೋನಾದಲ್ಲಿ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಭಾರತೀಯ ಮೂಲದ ಪ್ರಿಯಕರನನ್ನು ಪೊಲೀಸರು ಜರ್ಮನಿಯಲ್ಲಿ  ಬಂಧಿಸಿದ್ದಾರೆ. ಟಕ್ಸನ್‌ನಲ್ಲಿರುವ ಅರಿಝೋನಾ ವಿಶ್ವವಿದ್ಯಾಲಯದ ಸಮೀಪದ ಅಪಾರ್ಟ್ಮೆಂಟ್‌ನಲ್ಲಿ ಕಾಲೇಜು ವಿದ್ಯಾರ್ಥಿನಿ ಜುಲಿಸ್ಸಾ ರೂಬಿ ಸಲಾಜರ್ ಮೃತದೇಹ ಪತ್ತೆಯಾಗಿತ್ತು. ಆಕೆಯ ಪ್ರಿಯಕರ ಭಾರತೀಯ ಮೂಲದ ವರುಣ್ ಬಚ್ಚಿಗಾರಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿತ್ತು. ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿಯನ್ನು ಸದ್ಯ ಬಂಧಿಸಲಾಗಿದೆ. ವಿದ್ಯಾರ್ಥಿನಿಯ ಮೃತದೇಹದ ಮೇಲೆ ಗಾಯದ ಗುರುತುಗಳಿದ್ದು, ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ...
ಕೃಷಿಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಡದಿ ಟೌನ್‌ಶಿಪ್: ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ? ಸಿಎಂ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಭೂಮಿ ಕಳೆದುಕೊಳ್ಳುವ ರೈತರಿಗೆ ನೀಡಲಾಗುವ ಪರಿಹಾರ ಮೊತ್ತವನ್ನು ಎಕರೆಗೆ ₹3 ಕೋಟಿಗೂ ಹೆಚ್ಚು ಹೆಚ್ಚಿಸುವ ಸಾಧ್ಯತೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ. ಜೆಡಿಎಸ್–ಬಿಜೆಪಿ ಜಂಟಿ ಪಾದಯಾತ್ರೆಯ ಸಂದರ್ಭದಲ್ಲಿ ಮಾತನಾಡಿದ ಸಿಎಂ, ಭೂಮಿಗೆ ಬದಲಾಗಿ ಪರಿಹಾರ ಪಡೆಯಲು ಬಯಸುವವರಿಗೆ ಹೆಚ್ಚಿನ ಮೊತ್ತ ನೀಡುವ ಕುರಿತು ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಈವರೆಗೆ ರಚಿಸಲಾದ ಸಮಿತಿಯ ಶಿಫಾರಸಿನ ಪ್ರಕಾರ, ಭೂಸ್ವಾಮಿಗಳಿಗೆ ಎಕರೆಗೆ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ರೇಣುಕಾಸ್ವಾಮಿ ಕೊಲೆ ಕೇಸ್: ದರ್ಶನ್‌ಗೆ ಇಂದು ಬಿಗ್‌ಡೇ : ಮಾಫಿ ಅರ್ಜಿಗಳ ಬಗ್ಗೆ ಕೋರ್ಟ್‌ನಲ್ಲಿ ನಿರ್ಧಾರ- ಕಹಳೆ ನ್ಯೂಸ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ (Darshan) ಇಂದು ಮಹತ್ವದ ದಿನ. ಪ್ರಕರಣದಲ್ಲಿ ಸಲ್ಲಿಕೆಯಾಗಿರುವ ಮಾಫಿ ಅರ್ಜಿಗಳ ವಿಚಾರವಾಗಿ ಬೆಂಗಳೂರಿನ CCH-59 ಕೋರ್ಟ್ ಇಂದು ಆದೇಶ ನೀಡುವ ಸಾಧ್ಯತೆ ಇದೆ. ಈ ಅರ್ಜಿಗಳ ವಿಚಾರಣೆ ಕೋರ್ಟ್‌ನಲ್ಲಿ ಮುಂದುವರಿಯಲಿದ್ದು, ಆದೇಶದ ಬಗ್ಗೆ ಕುತೂಹಲ ಹೆಚ್ಚಾಗಿದೆ. ಪ್ರಕರಣದಲ್ಲಿ ಆರೋಪಿ ಪ್ರದೋಷ್ ಮಾಫಿ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಯನ್ನು ಸ್ವೀಕರಿಸುವಂತೆ ಪ್ರಾಸಿಕ್ಯೂಷನ್ ಪರ ವಕೀಲರು ವಾದಿಸಿದ್ದರು. ಆದರೆ, ದರ್ಶನ್ ಪರ ವಕೀಲ ಹಷ್ಮತ್ ಪಾಷಾ...
ಬೆಂಗಳೂರುರಾಜ್ಯಸುದ್ದಿ

ಶಿವಗಂಗೆ ಬೆಟ್ಟದಲ್ಲಿ ಟೆಕ್ಕಿ ನಾಪತ್ತೆ : ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌..!- ಕಹಳೆ ನ್ಯೂಸ್

ನೆಲಮಂಗಲ: ಐತಿಹಾಸಿಕ ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ಬಂದು ನಾಪತ್ತೆಯಾಗಿರುವ ಬೆಂಗಳೂರಿನ ಕಾಡುಗೋಡಿಯ ಟೆಕ್ಕಿ, ಮಧ್ಯಪ್ರದೇಶದ ಇಂದೋರ್ ಮೂಲದ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂಬ ಶಂಕೆ ವ್ಯಕ್ತವಾಗಿದೆ. ಅದ್ವೈತ್ ಉಪಾಧ್ಯಾಯ ಅವರ ಹುಡುಕಾಟಕ್ಕಾಗಿ ಮೂರನೇ ದಿನವೂ ಕಾರ್ಯಾಚರಣೆ ಮುಂದುವರಿದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಕೆಲ ಸ್ಫೋಟಕ ವಿಚಾರಗಳು ಹೊರಬರುತ್ತಿದ್ದು, ಇದು ಪೂರ್ವನಿಯೋಜಿತ ಆತ್ಮಹತ್ಯೆ ಎಂಬ ಅನುಮಾನ ಬರತೊಡಗಿದೆ. ಪೋಲಿಸರು ಅದ್ವೈತ್ ಅವರ ಕಾಡುಗೋಡಿಯ ಮನೆಯಲ್ಲಿ ಪರಿಶೀಲನೆ...
ಬೆಂಗಳೂರುರಾಜ್ಯಸುದ್ದಿ

ಪತ್ನಿಯನ್ನು ಕೊಂದು ಮೋರಿಗೆಸೆದಿದ್ದ ಪತಿ ಅರೆಸ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿ ಶವವನ್ನು ಮೋರಿಗೆ ಎಸೆದಿದ್ದ ಪಾಪಿ ಪತಿಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಗೀತಾ (48) ಹತ್ಯೆಯಾದ ಮಹಿಳೆ. ಈಕೆಯ ಪತಿ ಆಂಟೋನಿ (63) ಕೊಲೆಗೈದ ಆರೋಪಿಯಾಗಿದ್ದಾನೆ. ಈತ ಕುಡಿದು ಬಂದು ಪತ್ನಿ ಜೊತೆಗೆ ಗಲಾಟೆ ಮಾಡಿ ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಬಳಿಕ ಶವವನ್ನು ಮೋರಿಗೆ ಎಸೆದಿದ್ದ. ಮಹಿಳೆಯ ಶವದ ಮೇಲೆ ರಕ್ತದ ಕಲೆಗಳು ಪತ್ತೆಯಾಗಿವೆ. ವಿವೇಕನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಬಿಡದಿ ಟೌನ್‌ಶಿಪ್ ವಿರುದ್ಧ ಪಾದಯಾತ್ರೆಗೆ ಮುನ್ನ ದೇವೇಗೌಡರ ಆಶೀರ್ವಾದ ಪಡೆದ ನಿಖಿಲ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಉದ್ದೇಶಿತ ರೈತ ವಿರೋಧಿ ಬಿಡದಿ ಟೌನ್‌ಶಿಪ್   ಯೋಜನೆಯನ್ನು ವಿರೋಧಿಸಿ ನಾಳೆ ಆರಂಭವಾಗಲಿರುವ ಬೃಹತ್ ಪಾದಯಾತ್ರೆಗೆ ಮುನ್ನ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಇಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್‌.ಡಿ.ದೇವೇಗೌಡರ ಆಶೀರ್ವಾದ ಪಡೆದರು. ನಿಖಿಲ್ ಕುಮಾರಸ್ವಾಮಿ ಅವರು ದೇವೇಗೌಡರ (H.D.Deve Gowda) ಭೇಟಿ ಮಾಡಿ ಪಾದಯಾತ್ರೆಯ ವಿವರಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನಿಖಿಲ್...
ದೆಹಲಿರಾಜ್ಯಸುದ್ದಿ

ಉದ್ಯೋಗದ ಆಸೆ ತೋರಿಸಿ ಭಾರತೀಯ ಮಹಿಳೆ ಕಿಡ್ನ್ಯಾಪ್; 11 ಲಕ್ಷ ಹಣಕ್ಕೆ ಬಿಯರ್ ಅಂಗಡಿ ಮಾಲೀಕನಿಗೆ ಸೇಲ್ – ಕಹಳೆ ನ್ಯೂಸ್

ನವದೆಹಲಿ: ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ 28 ವರ್ಷದ ಭಾರತೀಯ ಮಹಿಳೆಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಬಳಿಕ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿರುವ ಆಘಾತಕಾರಿ ಆರೋಪ ಕೇಳಿಬಂದಿದೆ. ನಾಗ್ಪುರ ಮೂಲದ ಈ ಮಹಿಳೆ ಇನ್‌ಸ್ಟಾಗ್ರಾಮ್ ಮೂಲಕ ಪುಣೆಯಲ್ಲಿರುವ ‘ವಿ ಮೈಗ್ರೇಟ್’ ಎಂಬ ಸಲಹಾ ಸಂಸ್ಥೆಯನ್ನು ಸಂಪರ್ಕಿಸಿದ್ದರು. ಪೋರ್ಚುಗಲ್‌ನಲ್ಲಿ ಕ್ಯಾಷಿಯರ್ ಕೆಲಸ ಕೊಡಿಸುವುದಾಗಿ ಏಜೆನ್ಸಿಯವರು ಭರವಸೆ ನೀಡಿದ್ದರು. ತಿಂಗಳಿಗೆ 1.5 ಲಕ್ಷ ರೂ. ಸಂಬಳ ಹಾಗೂ ದಿನಕ್ಕೆ 8...
ಬೆಂಗಳೂರುರಾಜ್ಯಸುದ್ದಿ

ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಕೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದರಲ್ಲಿ, ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಹಾಗೂ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್‌ ಅವರ ಸುದೀರ್ಘ ಮನವೊಲಿಕೆಯ ಬಳಿಕ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಈ ಮೊದಲು ಮುಂಗಾರು ಅಧಿವೇಶನ ಆರಂಭವಾದ ಬಳಿಕ ಅಂದರೆ ಆಗಸ್ಟ್ 14 ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನಿಸಿದ್ದರು. ಈಗ ಯಾವುದೇ ಒತ್ತಡವಿಲ್ಲದೆ,...
1 4 5 6 7 8 319
Page 6 of 319