Monday, March 16, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆ – ಕಹಳೆ ನ್ಯೂಸ್

ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಆರೋಗ್ಯ ವಿಚಾರಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಖರ್ಗೆಯವರು ಬೇಗ ಗುಣಮುಖರಾಗಲಿ ಮತ್ತು ದೀರ್ಘಾಯುಷ್ಯ ಅವರದ್ದಾಗಲಿ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ – ಕಹಳೆನ್ಯೂಸ್

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಇಂದು (ಗುರುವಾರ) ಬೆಳಿಗ್ಗೆ ರಾಜ್‌ಘಾಟ್‌ನಲ್ಲಿರುವ ಗಾಂಧಿ ಮತ್ತು ವಿಜಯ್ ಘಾಟ್‌ನಲ್ಲಿರುವ ಬಹದ್ದೂರ್ ಸ್ಮಾರಕಕ್ಕೆ ಭೇಟಿ ನೀಡಿ ಅಗಲಿದ ಚೇತನಗಳಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ. ಗಾಂಧಿ ಅವರ ಸತ್ಯ,...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿ. 5-6 ರಂದು ಭಾರತಕ್ಕೆ ಭೇಟಿ ನಿರೀಕ್ಷೆ – ಕಹಳೆ ನ್ಯೂಸ್

ನವದೆಹಲಿ: ಡಿಸೆಂಬರ್ 5-6 ರಂದು ನಡೆಯಲಿರುವ 23ನೇ ವಾರ್ಷಿಕ ಭಾರತ-ರಷ್ಯಾ ದ್ವಿಪಕ್ಷೀಯ ಶೃಂಗಸಭೆಗಾಗಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ. ಈ ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಸಿದ್ಧತೆಗಳಲ್ಲಿ ತೊಡಗಿರುವ ಮೂಲಗಳು ಎರಡೂ ಕಡೆಯವರು "ವಿಶಾಲ ಕಾರ್ಯಸೂಚಿಯನ್ನು" ಅಂತಿಮಗೊಳಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿವೆ. ಫೆಬ್ರವರಿ 2022 ರಲ್ಲಿ ರಷ್ಯಾ-ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರ ಪುಟಿನ್ ಅವರ ಭಾರತಕ್ಕೆ ಮೊದಲ ಭೇಟಿ...
ದೆಹಲಿರಾಜ್ಯಸುದ್ದಿ

ಅ.26ರಂದು ಮಲೇಷ್ಯಾದಲ್ಲಿ ‘ಪ್ರಧಾನಿ ಮೋದಿ-ಟ್ರಂಪ್’ ಭೇಟಿ ; ಅಮೆರಿಕ ಸುಂಕ ಹೆಚ್ಚಳದ ಬಳಿಕ ಮೊದಲ ಮೀಟಿಂಗ್ – ಕಹಳೆ ನ್ಯೂಸ್

ನವದೆಹಲಿ : ಈ ತಿಂಗಳ ಕೊನೆಯಲ್ಲಿ ಕೌಲಾಲಂಪುರದಲ್ಲಿ ನಡೆಯಲಿರುವ ಆಸಿಯಾನ್ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಯಾಗುವ ಸಾಧ್ಯತೆ ಇದೆ. ಅಕ್ಟೋಬರ್ 26-27 ರಂದು ನಡೆಯಲಿರುವ 47ನೇ ಆಸಿಯಾನ್ ಶೃಂಗಸಭೆಗೆ ಪ್ರಧಾನಿ ಮೋದಿ ಮಲೇಷ್ಯಾಕ್ಕೆ ಪ್ರಯಾಣಿಸಲಿದ್ದಾರೆ. ಮಲೇಷ್ಯಾ ಕೂಡ ಅಧ್ಯಕ್ಷ ಟ್ರಂಪ್ ಅವರನ್ನ ಶೃಂಗಸಭೆಯಲ್ಲಿ ಭಾಗವಹಿಸಲು ಆಹ್ವಾನ ನೀಡಿದೆ. ಟ್ರಂಪ್ ತಮ್ಮ ಭಾಗವಹಿಸುವಿಕೆಯನ್ನ ದೃಢಪಡಿಸಿದರೆ, ಭಾರತದ ವಿರುದ್ಧ ವಾಷಿಂಗ್ಟನ್‌'ನ ಶೇ. 50ರಷ್ಟು...
ಬೆಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಬೇರೆ ಜೈಲಿಗೆ ಶಿಫ್ಟ್ ಮಾಡುವಂತೆ ‘ಮಾನವ ಹಕ್ಕುಗಳ ಆಯೋಗ’ದ ಮೊರೆ ಹೋಗಲು ನಟ ದರ್ಶನ್ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರ್ಡರ್ ಕೇಸಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರದದ ಜೈಲು ಪಾಲಾಗಿದ್ದಾರೆ. ಹಾಸಿಗೆ ದಿಂಬಿಗೆ ಬೇಡಿಕೆ ಇಟ್ಟಿದ್ದರೂ ಅದನ್ನು ಜೈಲು ಅಧಿಕಾರಿಗಳು ಈಡೇರಿಸುತ್ತಿಲ್ಲ. ಕನಿಷ್ಠ ಈ ಜೈಲಿನಿಂದ ಬೇರೆ ಜೈಲಿಗೆ ಶಿಫ್ಟ್ ಆದರೂ ಮಾಡಿಸಲು ಸೂಚಿಸುವಂತೆ ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಲು ನಟ ದರ್ಶನ್ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ನಟ ದರ್ಶನ್ ಕ್ವಾರಂಟೈನ್ ಬ್ಯಾರಕ್ ನಲ್ಲಿ ನರಕ ಅನುಭವಿಸುತ್ತಿದ್ದಾರೆ ಎನ್ನಲಾಗುತ್ತಿದೆ. ನೆಲದಲ್ಲಾದ್ರೂ ಮಲಗ್ತೀನಿ ಬೇರೆ...
ದೆಹಲಿರಾಜ್ಯಸುದ್ದಿಹೆಚ್ಚಿನ ಸುದ್ದಿ

RSS 100ನೇ ವರ್ಷಾಚರಣೆ : ವಿಶೇಷ ನಾಣ್ಯ ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ:ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಕೆತ್ತಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಈ ನಾಣ್ಯವು ಆರೆಸ್ಸೆಸ್ನ ಧ್ಯೇಯವಾಕ್ಯ "ರಾಷ್ಟ್ರ ಸ್ವಾಹಾ, ಇದಮ್ ರಾಷ್ಟ್ರ, ಇದಮ್ ನಾ ಮಾಮಾ" ಅನ್ನು ಹೊಂದಿದೆ, ಇದರ ಅರ್ಥ "ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ, ಪ್ರತಿಯೊಂದೂ ರಾಷ್ಟ್ರದ್ದು, ಏನೂ ನನ್ನದಲ್ಲ" ಎಂದು ಅನುವಾದಿಸುತ್ತದೆ. ಆರೆಸ್ಸೆಸ್ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, "ನಾಳೆ ವಿಜಯದಶಮಿ ಹಬ್ಬ, ಇದು ಕೆಟ್ಟದ್ದರ...
ದೆಹಲಿರಾಜ್ಯರಾಷ್ಟ್ರೀಯಸುದ್ದಿಹೆಚ್ಚಿನ ಸುದ್ದಿ

ಫಿಲಿಪಿನ್ಸ್‌ ನಲ್ಲಿ ಪ್ರಬಲ ಭೂಕಂಪನಕ್ಕೆ 69 ಮಂದಿ ಬಲಿ – ಕಹಳೆ ನ್ಯೂಸ್

ನವದೆಹಲಿ: ಮಂಗಳವಾರ (ಸೆಪ್ಟೆಂಬರ್ 30) ಮಧ್ಯ ಫಿಲಿಪೈನ್ಸ್ ನಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 69 ಜನರು ಸಾವನ್ನಪ್ಪಿದ್ದಾರೆ ಮತ್ತು 147 ಜನರು ಗಾಯಗೊಂಡಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಸಂಸ್ಥೆ ಬುಧವಾರ (ಅಕ್ಟೋಬರ್ 1) ತಿಳಿಸಿದೆ. ಸ್ಥಳೀಯ ಕಾಲಮಾನ ರಾತ್ರಿ 9:50 ಕ್ಕೆ (1359 ಜಿಎಂಟಿ) ಸೆಬುವಿನ ಉತ್ತರ ಕರಾವಳಿಯಲ್ಲಿ ಆಳವಿಲ್ಲದ ಭೂಕಂಪವು ಕಟ್ಟಡಗಳನ್ನು ಉರುಳಿಸಿ, ಭೂಕುಸಿತಕ್ಕೆ ಕಾರಣವಾಯಿತು ಮತ್ತು ಹಲವಾರು ಪಟ್ಟಣಗಳನ್ನು ಕತ್ತಲೆಯಲ್ಲಿ ಮುಳುಗಿಸಿತು. ಯುಎಸ್...
ಬೆಂಗಳೂರುರಾಜ್ಯಸುದ್ದಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು -ಕಹಳೆ ನ್ಯೂಸ್

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. 83 ರ ಹರೆಯದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪರೀಕ್ಷಿಸಿದ ವೈದ್ಯರು ಚಿಕಿತ್ಸೆಗಾಗಿ ದಾಖಲಿಸಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳವಾರ ಖರ್ಗೆ ಅವರು ಉತ್ಸಾಹದಿಂದ ರಾಜಕೀಯ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು....
1 59 60 61 62 63 273
Page 61 of 273