ಕೋರ್ಟ್ ಆದೇಶ ನೀಡಿದರೂ ಜೈಲಿನಲ್ಲಿ ಸಿಗದ ಹಾಸಿಗೆ, ದಿಂಬು: ಮತ್ತೆ ಅರ್ಜಿ ಸಲ್ಲಿಸಿದ ನಟ ದರ್ಶನ್ -ಕಹಳೆ ನ್ಯೂಸ್
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಈಬಾರಿ ಯಾವುದೇ ರಾಜಾತಿಥ್ಯವಿಲ್ಲ. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಜೈಲುಗಳಲ್ಲಿ ಕಟ್ಟು ನಿಟ್ಟಾದ ನಿಯಮಗಳನ್ನು ಜಾರಿಗೆ ತರಲಾಗಿದ್ದು, ದರ್ಶನ್ ಗೆ ಜೈಲುಶಿಕ್ಷೆ ನರಕಯಾತನೆಯಾಗಿದೆ. ಈ ನಡುವೆ ಜೈಲಿನಲ್ಲಿ ಹಾಸಿಗೆ, ತಲೆದಿಂಬು ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದ ದರ್ಶನ್ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿತ್ತು. ಅಲ್ಲದೇ ದರ್ಶನ್ ಗೆ ಹಾಸಿಗೆ, ತಲೆದಿಂಬು ಪೂರೈಸುವಂತೆ ಆದೇಶ ನೀಡಿತ್ತು. ಆದಾಗ್ಯೂ...







