Wednesday, March 18, 2026

ರಾಜ್ಯ

ಬೆಂಗಳೂರುರಾಜ್ಯಸುದ್ದಿ

ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಮೂವರು ಪೋಲಿಸರ ಬಂಧನ -ಕಹಳೆ ನ್ಯೂಸ್

ಬೆಂಗಳೂರು : ದಂಧೆಕೋರರನ್ನು ಬೆದರಿಸಿ ಆರು ಲಕ್ಷ ರೂ. ಹಣ ವಸೂಲಿ ಮಾಡಿದ್ದಾರೆಂಬ ಆರೋಪದ ಮೇರೆಗೆ ಚಿಕ್ಕಜಾಲ ಪೊಲೀಸ್‌‍ ಠಾಣೆಯ ಮೂವರು ಪೊಲೀಸರನ್ನು ಬಾಗಲೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲ ಠಾಣೆಯ ಇಬ್ಬರು ಹೆಡ್‌ಕಾನ್‌ಸ್ಟೇಬಲ್‌ ಹಾಗೂ ಒಬ್ಬರು ಕಾನ್‌ಸ್ಟೇಬಲ್‌ ಅನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಚಿಕ್ಕಜಾಲ ಠಾಣಾ ವ್ಯಾಪ್ತಿಯಲ್ಲಿ ಹಣ ದ್ವಿಗುಣಗೊಳಿಸುವ ದಂಧೆ ನಡೆಯುತ್ತಿದೆ. ಆ ದಂಧೆಕೋರರು ಪ್ರತಿಷ್ಠಿತ ಹೋಟೆಲ್‌ವೊಂದರ ಬಳಿ ಇದ್ದಾರೆಂದು ಪೊಲೀಸ್‌‍...
ರಾಜ್ಯರಾಷ್ಟ್ರೀಯಸುದ್ದಿ

ಆಪರೇಷನ್‌ ಸಿಂಧೂರ್‌ ನಿಂದ ನಾವು ಏನು ಸಾಧಿಸಲಿದ್ದೇವೆ – ಪಾಕಿಗಳ ಪರಿಸ್ಥಿತಿ ಕಂಡು ಕಣ್ಣೀರಿಟ್ಟ ಕಾಶ್ಮೀರದ ಮಾಜಿ ಸಿಎಂ-ಕಹಳೆ ನ್ಯೂಸ್

ಜಮ್ಮುಕಾಶ್ಮೀರ : ಪಹಲ್ಗಾಮ್‌ ದಾಳಿಗೆ ಪ್ರತೀಕಾರವಾಗಿ ಭಾರತ ಸೇನೆ ಹಮ್ಮಿಕೊಂಡಿರುವ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಪರಿಣಾಮಗಳ ಬಗ್ಗೆ ಜಮ್ಮುಕಾಶ್ಮೀರ ಮಾಜಿ ಮುಖ್ಯಮಂತ್ರಿ ಮಹಬೂಬಾ ಮಫ್ತಿ ಖೇದ ವ್ಯಕ್ತಪಡಿಸಿದ್ದಾರೆ. ಪಾಕಿಸ್ತಾನದ ಗಡಿಯಲ್ಲಿರುವ ಮಕ್ಕಳು ಹಾಗೂ ಹೆಂಗಸರು ಈ ಯುದ್ಧದಿಂದ ನಲುಗಿ ಹೋಗಿದ್ದಾರೆ. ಅವರೂ ಗುಂಡು ಹಾರಿಸುತ್ತಾರೆ. ನಾವೂ ಹಾರಿಸುತ್ತೇವೆ. ಇದರಿಂದ ಏನು ಪ್ರಯೋಜನ ಎಂದು ಮಹಬೂಬಾ ಅವಲತ್ತುಕೊಂಡಿದ್ದಾರೆ. ಭಯೋತ್ಪಾದಕರು ಸೃಷ್ಟಿಯಾಗುವುದನ್ನು ತಡೆಯಲು ಮಿಲಿಟರಿ ಕಾರ್ಯಾಚರಣೆಯಿಂದ ತಡೆಯಲು ಸಾಧ್ಯವಿಲ್ಲ. ಇದರಿಂದ ಶಾಂತಿ ನೆಲೆಸಲು...
ದೆಹಲಿರಾಜ್ಯರಾಷ್ಟ್ರೀಯಸುದ್ದಿ

ಭಾರತ-ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ: ‘IPL’ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ‘ಬಿಸಿಸಿಐ’ ಆದೇಶ – ಕಹಳೆ ನ್ಯೂಸ್

ನವದೆಹಲಿ : ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಐಪಿಎಲ್ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.ಭದ್ರತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಮೇ 25 ರವರೆಗೆ ನಡೆಯಬೇಕಿದ್ದ ಐಪಿಎಲ್ ಟೂರ್ನಿ ರದ್ದು ಮಾಡಲಾಗಿದೆ....
ಜಮ್ಮು ಮತ್ತು ಕಾಶ್ಮೀರರಾಜ್ಯರಾಷ್ಟ್ರೀಯಸುದ್ದಿ

ಪಾಕ್‌ ಶೆಲ್‌ ದಾಳಿ: ಗಡಿ ನಿಯಂತ್ರಣ ರೇಖೆಯ ಬಳಿಯಿರುವ 20 ಮನೆಗಳಿಗೆ ಹಾನಿ – ಕಹಳೆ ನ್ಯೂಸ್

ಜಮ್ಮು: ಗುರುವಾರ ರಾತ್ರಿ ಪಾಕಿಸ್ತಾನ ಸೇನೆ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ನಡೆಸಿದ ಶೆಲ್‌ ದಾಳಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಹಲವು ಮನೆಗಳಿಗೆ ಹಾನಿಯಾಗಿದೆ. ಈ ಕುರಿತು ಎಎನ್‌ಐ ಸುದ್ದಿ ಸಂಸ್ಥೆ ಜತೆ ಮಾತನಾಡಿರುವ ಸ್ಥಳಿಯರು, ಪಾಕಿಸ್ತಾನದ ಶೆಲ್‌ ದಾಳಿಯಿಂದಾಗಿ ಸುಮಾರು 20 ಮನೆಗಳಿಗೆ ಹಾನಿಯಾಗಿದೆ. ನನ್ನ ಇಡೀ ಕುಟುಂಬ ರಾತ್ರಿಯಿಡೀ ಒಂದು ಕೋಣೆಯಲ್ಲಿ ಕುಳಿತು ಕಳೆದಿದೆ. ನಮಗೆ ಇಲ್ಲಿ ಶಾಂತಿ ಬೇಕಿದೆ' ಎಂದು ಅಳಲು ತೋಡಿಕೊಂಡಿದ್ದಾರೆ. ಶೆಲ್‌ ದಾಳಿಯಿಂದ ಅರ್ಧಂಬರ್ಧ...
ರಾಜ್ಯರಾಷ್ಟ್ರೀಯಸುದ್ದಿ

70ನೇ ವಯಸ್ಸಿನಲ್ಲಿ 12ನೇ ತರಗತಿ ಪರೀಕ್ಷೆ ಪಾಸ್​ ಮಾಡಿದ ಮಹಿಳೆ -ಕಹಳೆ ನ್ಯೂಸ್

ಚೆನ್ನೈ: ಕೊಯಮತ್ತೂರಿನ 70 ವರ್ಷದ ರಾಣಿ ಎಂಬ ಮಹಿಳೆ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗುವ ಮೂಲಕ, ಕಲಿಕೆ ಹಾಗೂ ಸಾಧನೆಗೆ ವಯಸ್ಸು ಅಡ್ಡಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ಪತಿಯ ಮರಣದ ನಂತರ ಒಂಟಿಯಾಗಿ ವಾಸಿಸುತ್ತಿದ್ದ ರಾಣಿ ಅವರು, ಮುಂದೆ ಅಧ್ಯಯನ ಮಾಡುವ ಬಯಕೆಯನ್ನು ಹೊಂದಿದ್ದರು. ಅದರಂತೆ ಹೈಯರ್ ಸೆಕೆಂಡರಿ ಪರೀಕ್ಷೆಯಲ್ಲಿ (HSE) 600 ಅಂಕಗಳಲ್ಲಿ ಒಟ್ಟು 346 ಅಂಕಗಳೊಂದಿಗೆ ಉತ್ತೀರ್ಣರಾಗಿ ತಮ್ಮ ಆಸೆಯನ್ನು ಪೂರೈಸಿಕೊಂಡಿದ್ದಾರೆ. ರಾಣಿ ತಮಿಳಿನಲ್ಲಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆಪರೇಷನ್ ಸಿಂಧೂರ್ – ತಿರಂಗಾ ಯಾತ್ರೆ ಮೂಲಕ ಸೇನೆಗೆ ಬೆಂಬಲ ಸೂಚಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯ ನಡುವೆ ಭಾರತೀಯ ಸಶಸ್ತ್ರ ಪಡೆಗಳೊಂದಿಗೆ ಒಗ್ಗಟ್ಟಿನಿಂದಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದ ಬಳಿಯ ಕೆಆರ್ ವೃತ್ತದಿಂದ ಮಿನ್ಸ್ಕ್ ಚೌಕದವರೆಗೆ ತಿರಂಗಾ ಯಾತ್ರೆ ನಡೆಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಆಪರೇಷನ್ ಸಿಂಧೂರ್’ ಯಶಸ್ವಿ : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸರ್ಕಾರದಿಂದ ಮಹತ್ವದ ಆದೇಶ-ಕಹಳೆ ನ್ಯೂಸ್

ಬೆಂಗಳೂರು : 'ಆಪರೇಷನ್ ಸಿಂಧೂರ್' ಯಶಸ್ವಿಯಾದ ಹಿನ್ನೆಲೆ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಏನಿದೆ ಆದೇಶದಲ್ಲಿ..? ದಿನಾಂಕ:22.04.2025ರಂದು ಕಾಶ್ಮೀರದ ಪಹಲಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ, ದಿನಾಂಕ:07.05.2025ರಂದು ಮುಂಜಾನೆ ಭಾರತವು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಸೇನಾ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದೆ. ಆದ್ದರಿಂದ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ...
ಜಿಲ್ಲೆಬೆಂಗಳೂರುರಾಜ್ಯಸುದ್ದಿ

ಇದು ಪಾಕ್ ಗೆ ಅಷ್ಟೆ ಅಲ್ಲ, ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಎಚ್ಚರಿಕೆ ಗಂಟೆ : ಸಿಎಂ ಗುಡುಗು-ಕಹಳೆ ನ್ಯೂಸ್

ಬೆಂಗಳೂರು : ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ಗಳಲ್ಲಿನ ಉಗ್ರಗಾಮಿಗಳ ನೆಲೆಯನ್ನು ನಾಶ ಮಾಡಿ ಪರಾಕ್ರಮ ಮೆರೆದ ಭಾರತದ ಹೆಮ್ಮೆಯ ಧೀರ ಸೈನಿಕರಿಗೆ ಇಡೀ ರಾಜ್ಯದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಇದು ಪಾಕಿಸ್ಥಾನಕ್ಕೆ ಮಾತ್ರವಲ್ಲ ಭಾರತದ ಜೊತೆ ಈ ರೀತಿಯ ಕಿಡಿಗೇಡಿತನವನ್ನು ನಡೆಸುವ ನೆರೆಯ ಎಲ್ಲ ದೇಶಗಳಿಗೆ ಕೂಡಾ ಇಂದಿನ ಸೇನಾದಾಳಿ ಎಚ್ಚರಿಕೆಯ ಗಂಟೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಲ್ಲಿ ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,...
1 92 93 94 95 96 273
Page 94 of 273