Friday, March 6, 2026

ಉತ್ತರ ಪ್ರದೇಶ

ಉತ್ತರ ಪ್ರದೇಶರಾಜ್ಯಸುದ್ದಿ

ಸಿಎಂ ಯೋಗಿ ಆದಿತ್ಯನಾಥ್ ಬಳಿ ಕ್ಯೂಟ್ ಆಗಿ ಮಗು ಏನು ಬೇಡಿಕೆ ಇಟ್ಟಿತು ನೋಡಿ – ಕಹಳೆ ನ್ಯೂಸ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಲ್ಲಿ ಮಗುವೊಂದು ಮುಗ್ಧವಾಗಿ ಚಿಪ್ಸ್ ಬೇಕೆಂದು ಕೇಳುತ್ತಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ವೀಡಿಯೊದಲ್ಲಿ, ಯೋಗಿ ಆದಿತ್ಯನಾಥ್ ಅವರು ಮಗುವಿನ ಪಕ್ಕದಲ್ಲಿ ಕುಳಿತುಕೊಂಡು, ಏನು ಬೇಕು ಎಂದು ನಿಧಾನವಾಗಿ ಕೇಳುತ್ತಾರೆ, ಮಗು ನಾಚಿಕೆಯಿಂದ ಮುಗ್ಧವಾಗಿ ಚಿಪ್ಸ್ ಬೇಕೆಂದು ಕೇಳುತ್ತದೆ, ಆಗ ಸಿಎಂ ಸೇರಿದಂತೆ ಅಲ್ಲಿದ್ದವರೆಲ್ಲರೂ ನಗುತ್ತಾರೆ. ವೈರಲ್ ಆಗುತ್ತಿರುವ ವಿಡಿಯೊ ಕ್ಲಿಪ್ ನಲ್ಲಿ, ಯುಪಿ ಸಿಎಂ ಯೋಗಿ ಆದಿತ್ಯನಾಥ್, "ಔರ್...
ಉತ್ತರ ಪ್ರದೇಶರಾಜ್ಯಸುದ್ದಿ

ಪ್ರಧಾನಿ ಮೋದಿ ಭೇಟಿ ಮಾಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ್​ – ಕಹಳೆ ನ್ಯೂಸ್

ಉತ್ತರ ಪ್ರದೇಶ ಬಿಜೆಪಿ ವಲಯದಲ್ಲಿ ಮಾತ್ರವಲ್ಲದೆ ಹೈಕಮಾಂಡ್ ಮಟ್ಟದಲ್ಲೂ ರಾಜ್ಯ ನಾಯಕತ್ವದೊಂದಿಗೆ ಆಂತರಿಕ ಭಿನ್ನಾಭಿಪ್ರಾಯ ಕಾಣಿಸಿಕೊಂಡಿದೆ ಎನ್ನುವ ಕುರಿತು ಚರ್ಚೆಗಳು ನಡೆಯುತ್ತಿರುವ ವೇಳೆಯಲ್ಲೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸೋಮವಾರ(ಜ5) ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಯೋಗಿ ಆದಿತ್ಯನಾಥ್, "ಪ್ರಧಾನಮಂತ್ರಿಯವರ ದೃಷ್ಟಿಕೋನವು ನವ ಉತ್ತರ ಪ್ರದೇಶದ ಅಭಿವೃದ್ಧಿ ಪ್ರಯಾಣವನ್ನು ಚೈತನ್ಯಪೂರ್ಣಗೊಳಿಸುತ್ತದೆ ಮತ್ತು ವೇಗಗೊಳಿಸುತ್ತದೆ. ಸಮಯವನ್ನು ಮೀಸಲಿಟ್ಟು...
ಉತ್ತರ ಪ್ರದೇಶರಾಜ್ಯರಾಷ್ಟ್ರೀಯಸುದ್ದಿ

ಭಾರತದ ಪ್ರಥಮ ಸ್ಥಳೀಯ ಹೈಡ್ರೋಜನ್ ಹಡಗು ಲೋಕಾರ್ಪಣೆ – ಕಹಳೆ ನ್ಯೂಸ್

ವಾರಾಣಸಿ (ಉತ್ತರ ಪ್ರದೇಶ): ಭಾರತದ ಮೊದಲ ಸ್ಥಳೀಯ ಹೈಡ್ರೋಜನ್ ಇಂಧನ ಕೋಶ ಹಡಗನ್ನು ಕೇಂದ್ರ ಬಂದರು ಸಚಿವ ಸರ್ಬಾನಂದ ಸೋನವಾಲ್ ಅವರು ವಾರಾಣಸಿಯ ನಮೋ ಘಾಟ್‌ನಲ್ಲಿ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಇದು ಕೇವಲ ತಾಂತ್ರಿಕ ಪ್ರಗತಿಯಲ್ಲ. ಹಸಿರು ಇಂಧನ ಮತ್ತು ಸ್ವದೇಶಿ ಪರಿಹಾರಗಳತ್ತ ನಮ್ಮ ವಿಶ್ವಾಸದ ಹೆಜ್ಜೆ ಇದಾಗಿದೆ. ಹೈಡ್ರೋಜನ್ ಚಾಲಿತ ಹಡಗುಗಳನ್ನು ನಿರ್ವಹಿಸುವ ಚೀನಾ, ನಾರ್ವೆ, ನೆದರ್ಲ್ಯಾಂಡ್ಸ್, ಜಪಾನ್‌ನಂತಹ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಿದ್ದು ರಾಷ್ಟ್ರೀಯ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಸರ್ಕಾರಿ ಉದ್ಯೋಗಕ್ಕಾಗಿ ರುಬ್ಬುವ ಕಲ್ಲು ಎತ್ತಿಹಾಕಿ ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ – ಕಹಳೆ ನ್ಯೂಸ್

ಉತ್ತರ ಪ್ರದೇಶ : ಸರ್ಕಾರಿ ಉದ್ಯೋಗಕ್ಕಾಗಿ ಪಾಪಿ ಮಗನೋರ್ವ ರುಬ್ಬುವ ಕಲ್ಲು ಎತ್ತಿಹಾಕಿ ತಾಯಿಯನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಉತ್ತರ ಪ್ರದೇಶದ ಗೊಂಡಾದಲ್ಲಿ ನಡೆದಿದೆ. ಅನುಕಂಪ ಆಧಾರಿತ ಕೆಲಸದ ವಿಚಾರದಲ್ಲಿ ಉಂಟಾದ ಜಗಳದಿಂದಾಗಿ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿಯು ತನ್ನ ತಾಯಿಯ ಮೇಲೆ ರುಬ್ಬುವ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ. ಮಧ್ಯಪ್ರವೇಶಿಸಲು ಪ್ರಯತ್ನಿಸಿದಾಗ ಆತನ ಸಹೋದರನಿಗೂ ಗಾಯಗಳಾಗಿವೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ....
ಉತ್ತರ ಪ್ರದೇಶಸುದ್ದಿಹೆಚ್ಚಿನ ಸುದ್ದಿ

ಉತ್ತರ ಪ್ರದೇಶದಲ್ಲಿ ಟೇಕಾಫ್ ಆಗುವಾಗ ಖಾಸಗಿ ವಿಮಾನ ಪತನ – ಕಹಳೆ ನ್ಯೂಸ್

ಫರೂಕಾಬಾದ್ :ಉತ್ತರ ಪ್ರದೇಶದ ಫರೂಕಾಬಾದ್ ನಲ್ಲಿ ಟೇಕಾಫ್ ಆಗುವಾಗ ನಿಯಂತ್ರಣ ತಪ್ಪಿ ಖಾಸಗಿ ವಿಮಾನ ಪತನ; ಪೈಲಟ್ಗಳು ಮತ್ತು ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ವರದಿಯಾಗಿದೆ. ಫರೂಕಾಬಾದ್‌ನಲ್ಲಿ ಖಾಸಗಿ ವಿಮಾನವೊಂದು ರನ್‌ವೇಯಿಂದ ಟೇಕಾಫ್ ಆಗುವಾಗ ನಿಯಂತ್ರಣ ಕಳೆದುಕೊಂಡು ಹತ್ತಿರದ ಪೊದೆಗಳಲ್ಲಿ ಕುಸಿದು ಬಿದ್ದಿದೆ. ಇಬ್ಬರು ಪೈಲಟ್‌ಗಳು ಮತ್ತು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ....
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಶಿಕ್ಷಕರು ವಿದ್ಯಾರ್ಥಿಗಳಿಗೆ ‘ರಾಷ್ಟ್ರ ಮೊದಲು’ ಎಂಬ ಮನೋಭಾವದಿಂದ ಪಾಠ ಮಾಡಬೇಕು; ಸಿಎಂ ಯೋಗಿ ಆದಿತ್ಯನಾಥ್-ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶನಿವಾರ (10), ಶಿಕ್ಷಕರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಲು ವಿದ್ಯಾರ್ಥಿಗಳಲ್ಲಿ 'ರಾಷ್ಟ್ರ ಮೊದಲು' ಎಂಬ ಮನೋಭಾವವನ್ನು ಬೆಳೆಸಬೇಕು ಎಂದು ಹೇಳಿದರು. ಲಕ್ನೋದ ಶಾಲೆಯೊಂದರಲ್ಲಿ ನಡೆದ ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಪ್ರತಿಯೊಬ್ಬ ನಾಗರಿಕನ ಗುರಿ 'ರಾಷ್ಟ್ರ ಮೊದಲು' ಆಗಿರಬೇಕು. ಇದು ದೇಶದ ನಾಯಕತ್ವ, ಭದ್ರತಾ ಪಡೆಗಳು ಅಥವಾ ಆಡಳಿತದ ಮಾತ್ರವಲ್ಲ, ಮಕ್ಕಳಲ್ಲೂ ಇದನ್ನೂ ಅಳವಡಿಸಬೇಕು ಎಂದರು.   ಶಿಕ್ಷಣವು ಉತ್ತಮ ಅಂಕಗಳಿಗೆ...
ಉತ್ತರ ಪ್ರದೇಶಸುದ್ದಿ

ಮಗಳೊಂದಿಗೆ ಮದುವೆಯಾಗಬೇಕಿದ್ದ ಭಾವಿ ಅಳಿಯನ ಜೊತೆ ಓಡಿಹೋದ ಅತ್ತೆ..!-ಕಹಳೆ ನ್ಯೂಸ್

ಇನ್ನು ಕೆಲವೇ ದಿನಗಳಲ್ಲಿ ತನ್ನ ಮಗಳೊಂದಿಗೆ ಮದುವೆಯಾಗಬೇಕಿದ್ದ ಭಾವಿ ಅಳಿಯನ ಜೊತೆ ಆಗಲೇ ಮದುವೆಯಾಗಿ ಮೂರು ಮಕ್ಕಳ ಮಹಿಳೆಯೊಬ್ಬರು ಪರಾರಿಯಾಗಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈಗಾಗಲೇ ಮೂವರು ಮಕ್ಕಳಿದ್ದಾರೆ. ಮೊದಲು ಶಬ್ದಮ್ ಎಂದು ಕರೆಯಲ್ಪಡುತ್ತಿದ್ದ ಆ ಮಹಿಳೆ ಈಗ ಶಿವಾನಿ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದಾಳೆ. ಇದು ಆಕೆಗೆ ಮೂರನೇ ಮದುವೆಯಂತೆ..! ಉತ್ತರ ಪ್ರದೇಶದ ಅಲಿಗಢದ ಮದ್ರಾಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವಧುವಿನ ತಾಯಿ...
ಉತ್ತರ ಪ್ರದೇಶರಾಷ್ಟ್ರೀಯಸುದ್ದಿ

ಮಹಾ ಶಿವರಾತ್ರಿ : ಮಹಾಕುಂಭ ಮೇಳಕ್ಕೆ ಇಂದು ತೆರೆ, ‘ಅಂತಿಮ ಸ್ನಾನ ಆರಂಭ, ಭಕ್ತರ ಮೇಲೆ ಪುಷ್ಪವೃಷ್ಟಿ, ಬಿಗಿ ಭದ್ರತೆ – ಕಹಳೆ ನ್ಯೂಸ್

ಪ್ರಯಾಗ್ ರಾಜ್: ದೇಶಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿರುವಂತೆಯೇ ಕಳೆದ 45 ದಿನಗಳಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಜಗತ್ತಿನ ದೊಡ್ಡ ಧಾರ್ಮಿಕ ಕಾರ್ಯಕ್ರಮ 'ಮಹಾಕುಂಭ ಮೇಳಕ್ಕೆ ಇಂದು ತೆರೆ ಬೀಳಲಿದೆ. ಪೌಶ್ ಪೂರ್ಣಿಮೆಯ ದಿನವಾದ ಇಂದು ಅಂತಿಮ ಪವಿತ್ರ ಸ್ನಾನಕ್ಕಾಗಿ ಮುಂಜಾನೆಯಿಂದ ಲಕ್ಷಾಂತರ ಜನರು ಮಹಾಕುಂಭ ನಗರಕ್ಕೆ ಆಗಮಿಸುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ಮಿಂದೆಳುತ್ತಿದ್ದಾರೆ. 'ಹರ ಹರ ಮಹಾದೇವ್' ಘೋಷಣೆಗಳ ನಡುವೆ,ಸಂಗಮ ಸ್ಥಳದಲ್ಲಿ ಅಥವಾ ಸಮೀಪವಿರುವ ವಿವಿಧ ಘಾಟ್‌ಗಳಲ್ಲಿ...
1 2 3 4
Page 1 of 4