ನಾಳೆ ಪ್ರಧಾನಿಗಳಿಂದ ಉದ್ಘಾಟನೆ ಆಗಬೇಕಿರುವ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಸರಣಿ ಅಪಘಾತ :ತಪ್ಪಿದ ದುರಂತ -ಕಹಳೆ ನ್ಯೂಸ್
ಲಕ್ನೋ: ಏ.14 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇಯ ಮೋಹಂದ್ ರೇಂಜ್ನಲ್ಲೀ ಭೀಕರ ಸರಣಿ ಅಪಘಾತ ನಡೆದಿದೆ. ಎಲ್ಪಿಜಿ ಸಿಲಿಂಡರ್ ತುಂಬಿದ ಟ್ರಕ್ ಸೇರಿ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಉತ್ತರ ಪ್ರದೇಶದ ಸಹರಾನ್ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಠಾತ್ ಬ್ರೇಕ್ ವೈಫಲ್ಯ ಮತ್ತು ಅನಿಯಂತ್ರಿತ ವೇಗದಿಂದಾಗಿ ಭೀಕರ ಅಪಘಾತ ಸಂಭವಿಸಿದೆ. ಎಲ್ಪಿಜಿ ಸಿಲಿಂಡರ್ಗಳನ್ನು...






