‘ಸರ್ಕಾರ ಸಂತ್ರಸ್ತರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ’ : ಪ್ರಧಾನಿ ಮೋದಿ -ಕಹಳೆ ನ್ಯೂಸ್
ನವದೆಹಲಿ : ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಜನರೊಂದಿಗೆ ತಮ್ಮ ಸರ್ಕಾರ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ವಿಪತ್ತು ಪೀಡಿತ ಪ್ರದೇಶಗಳಲ್ಲಿನ ವಾಸ್ತವ ಪರಿಸ್ಥಿತಿಯನ್ನ ನಿರ್ಣಯಿಸಲು ಅವರು ಬೆಳಿಗ್ಗೆ ಹಿಮಾಚಲ ಪ್ರದೇಶ ಮತ್ತು ಪಂಜಾಬ್'ಗೆ ತೆರಳಿದರು. ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿಯನ್ನ ಪರಿಶೀಲಿಸಲು ನಾನು ಹಿಮಾಚಲ ಪ್ರದೇಶ ಮತ್ತು ಪಂಜಾಬ್'ಗೆ ತೆರಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ...







